AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪವರ್ ಕಟ್ ಹಿನ್ನೆಲೆ ಮೊಬೈಲ್ ಲೈಟ್ ಬಳಸಿ ರೋಗಿಯ ಪರೀಕ್ಷೆ ಮಾಡಿದ ಉತ್ತರ ಪ್ರದೇಶದ ವೈದ್ಯರು

ಉತ್ತರಪ್ರದೇಶದಲ್ಲಿ ಆದ ವಿದ್ಯುತ್ ಕಡಿತ ಹಿನ್ನೆಲೆ ಆಸ್ಪತ್ರೆಯೊಂದರಲ್ಲಿ ರೋಗಿಗಳ ತಪಾಸಣೆ ನಡೆಸಲು ವೈದ್ಯರು ಕಷ್ಟಪಡಬೇಕಾಯಿತು. ವೈದ್ಯರು ಮೊಬೈಲ್​ನಲ್ಲಿನ ಲೈಟ್​ ಬಳಕೆ ಮಾಡಿ ರೋಗಿಯನ್ನು ತಪಾಸಣೆ ನಡೆಸಿದ ವಿಡಿಯೋ ವೈರಲ್ ಆಗುತ್ತಿದೆ.

Viral Video: ಪವರ್ ಕಟ್ ಹಿನ್ನೆಲೆ ಮೊಬೈಲ್ ಲೈಟ್ ಬಳಸಿ ರೋಗಿಯ ಪರೀಕ್ಷೆ ಮಾಡಿದ ಉತ್ತರ ಪ್ರದೇಶದ ವೈದ್ಯರು
ವಿದ್ಯುತ್ ಸಂಪರ್ಕ ಕಡಿತ ಹಿನ್ನೆಲೆ ಉತ್ತರ ಪ್ರದೇಶದ ಬಾಲಿಯ ಜಿಲ್ಲಾಸ್ಪತ್ರೆ ವೈದ್ಯರು ರೋಗಿಯನ್ನು ಮೊಬೈಲ್ ಲೈಟ್ ಬಳಕೆ ಮಾಡಿ ತಪಾಸಣೆ ನಡೆಸಿದರು
TV9 Web
| Edited By: Rakesh Nayak Manchi|

Updated on: Sep 12, 2022 | 10:49 AM

Share

ಉತ್ತರ ಪ್ರದೇಶ: ರಾಜ್ಯದ ಜಿಲ್ಲೆಯೊಂದರಲ್ಲಿ ಆದ ಪವರ್ ಕಟ್​ ಹಿನ್ನೆಲೆ ಆಸ್ಪತ್ರೆಯಲ್ಲಿ ವೈದ್ಯರು ಪರದಾಡುವಂತಾಯಿತು. ಭಾರೀ ಮಳೆಯ ಅವಾಂತರ ಹಿನ್ನೆಲೆ ಶನಿವಾರ ವಿದ್ಯುತ್ ಕಡಿತಗೊಳಿಸಲಾಯಿತು. ಈ ವೇಳೆ ಬಾಲಿಯ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ವೈದ್ಯರು ರೋಗಿಗಳನ್ನು ತಪಾಸಣೆ ನಡೆಸಲು ಮೊಬೈಲ್ ಲೈಟ್ ಮೊರೆ ಹೋಗಬೇಕಾಯಿತು. ಸದ್ಯ ಇದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ಕತ್ತಲಿನಲ್ಲಿ ವೈದ್ಯರು ಮೊಬೈಲ್ ಲೈಟ್ ಬಳಕೆ ಮಾಡಿ ಮಹಿಳಾ ರೋಗಿಯೊಬ್ಬರನ್ನು ಮಲಗಿಸಿ ತಪಾಸಣೆ ನಡೆಸುತ್ತಿರುವುದನ್ನು ಕಾಣಬಹುದು.

ಘಟನೆ ಬಗ್ಗೆ ವಿವರಿಸಿದ ಜಿಲ್ಲಾ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಮತ್ತು ಪ್ರಭಾರ ಮುಖ್ಯಾಧಿಕಾರಿ ಡಾ.ಆರ್.ಡಿ.ರಾಮ್, ಆಸ್ಪತ್ರೆಯಲ್ಲಿ ಜನರೇಟರ್ ವ್ಯವಸ್ಥೆ ಇದೆ. ಆದರೆ ಜನರೇಟರ್​ಗಾಗಿ ಬ್ಯಾಟರಿಗಳನ್ನು ಪಡೆಯುವಾಗ 15ರಿಂದ 20 ನಿಮಿಷಗಳ ಕಾಲ ತಡವಾಗಿದೆ ಎಂದು ತಿಳಿಸಿದರು. ಜನರೇಟರ್ ಬ್ಯಾಟರಿ ಇಲ್ಲದೇ ಇರಲು ಕಾರಣವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವಾಗಲೂ ಬ್ಯಾಟರಿಗಳು ಕಳ್ಳತನವಾಗುವ ಭಯ ಇದ್ದೇ ಇರುತ್ತದೆ. ಹಾಗಾಗಿ ತೆಗೆಯಲಾಗಿದೆ ಎಂದು ಹೇಳಿದ್ದಾರೆ.

ರಾಜಕೀಯವಾಗಿ ಹೆಚ್ಚು ಚರ್ಚೆಯಲ್ಲಿರುವ ದೇಶದಲ್ಲಿ ರಾಜ್ಯಗಳಲ್ಲಿ ಉತ್ತರಪ್ರದೇಶವೂ ಒಂದಾಗಿದೆ. ಇಲ್ಲಿನ ಧನಾತ್ಮಕ, ನಕರಾತ್ಮಕ ವಿಷಯಗಳು ದೇಶದಾದ್ಯಂತ ರಾಜಕೀಯವಾಗಿ ಹೆಚ್ಚು ಚರ್ಚೆಗೆ ಗುರಿಯಾಗುತ್ತದೆ. ಸದ್ಯ ಬಾಲಿಯ ಆಸ್ಪತ್ರೆಯಲ್ಲಿನ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದರೂ ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ