Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪುಣೆಯಲ್ಲಿ ನದಿಗೆ ಹಾರಿ ಪ್ರವಾಹದಿಂದ ವ್ಯಕ್ತಿಯನ್ನು ಕಾಪಾಡಿದ ಪೊಲೀಸ್; ಮೈ ಜುಮ್ಮೆನಿಸುವ ವಿಡಿಯೋ ಇಲ್ಲಿದೆ

ಈ ವಿಡಿಯೋದಲ್ಲಿ ಇಬ್ಬರು ಪೊಲೀಸರು ಪ್ರವಾಹದಿಂದ ತುಂಬಿ ಹರಿಯುವ ನದಿಯಲ್ಲಿ ಮುಳುಗಿ, ವ್ಯಕ್ತಿಯನ್ನು ರಕ್ಷಿಸುವುದನ್ನು ಕಾಣಬಹುದು. ಈ ವೀಡಿಯೊವನ್ನು ಈಗಾಗಲೇ 91 ಸಾವಿರ ಜನರು ವೀಕ್ಷಿಸಿದ್ದಾರೆ.

Viral Video: ಪುಣೆಯಲ್ಲಿ ನದಿಗೆ ಹಾರಿ ಪ್ರವಾಹದಿಂದ ವ್ಯಕ್ತಿಯನ್ನು ಕಾಪಾಡಿದ ಪೊಲೀಸ್; ಮೈ ಜುಮ್ಮೆನಿಸುವ ವಿಡಿಯೋ ಇಲ್ಲಿದೆ
ಪ್ರವಾಹದ ನೀರಿನಿಂದ ವ್ಯಕ್ತಿಯನ್ನು ರಕ್ಷಿಸಿದ ಕಾನ್​ಸ್ಟೆಬಲ್Image Credit source: asianet
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 11, 2022 | 1:04 PM

Maharashtra Rains: ಮಹಾರಾಷ್ಟ್ರದಲ್ಲಿ ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಇದರಿಂದಾಗಿ ನದಿಗಳಲ್ಲಿ ನೀರಿನ ಮಟ್ಟ ಆತಂಕದ ಮಟ್ಟಕ್ಕೆ ಏರಿಕೆಯಾಗಿದೆ. ಮಳೆಯಿಂದಾಗಿ ಮಹಾರಾಷ್ಟ್ರದ (Maharashtra Rain) ಸುಮಾರು 130 ಹಳ್ಳಿಗಳು ಹಾನಿಗೀಡಾಗಿದ್ದು, ಕನಿಷ್ಠ 200 ಜನರನ್ನು ಸ್ಥಳಾಂತರಿಸಲಾಗಿದೆ. ನಿರಂತರ ಮಳೆಯಿಂದಾಗಿ ಭಾರತೀಯ ಹವಾಮಾನ ಇಲಾಖೆ (IMD) ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್ (Red Alert) ಘೋಷಿಸಿದೆ. ಪುಣೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಪ್ರವಾಹದ ನೀರಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಎನ್‌ಸಿಪಿ ನಾಯಕಿ ಮತ್ತು ಸಂಸದೆ ಸುಪ್ರಿಯಾ ಸುಳೆ ಈ ವಿಡಿಯೋವನ್ನು ಟ್ವಿಟ್ಟರ್​​ನಲ್ಲಿ ಪೋಸ್ಟ್ ಮಾಡಿದ್ದಾರೆ. ದತ್ತವಾಡಿ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್​ಟೆಬಲ್​ಗಳಾದ ಸದ್ದಾಂ ಶೇಖ್ ಮತ್ತು ಅಜಿತ್ ಪೋಕರೆಯ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಪುಣೆ ಜಿಲ್ಲೆಯ ಶಿವಾನೆಯಲ್ಲಿರುವ ಬಾಗುಲ್ ಉದ್ಯಾನದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ವ್ಯಕ್ತಿಯನ್ನು ರಕ್ಷಿಸಿರುವ ಸಾಹಸಕ್ಕೆ ಸುಪ್ರಿಯಾ ಸುಳೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋದಲ್ಲಿ ಇಬ್ಬರು ಪೊಲೀಸರು ಪ್ರವಾಹದಿಂದ ತುಂಬಿ ಹರಿಯುವ ನದಿಯಲ್ಲಿ ಮುಳುಗಿ, ವ್ಯಕ್ತಿಯನ್ನು ರಕ್ಷಿಸುವುದನ್ನು ಕಾಣಬಹುದು. ಈ ವೀಡಿಯೊವನ್ನು ಈಗಾಗಲೇ 91 ಸಾವಿರ ಜನರು ವೀಕ್ಷಿಸಿದ್ದಾರೆ. ಪುಣೆಯ ಕಾನ್‌ಸ್ಟೆಬಲ್‌ಗಳು ತಮ್ಮ ಧೈರ್ಯದಿಂದಾಗಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು