AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 20 ನಿಮಿಷ ಮೊದಲೇ ರೈಲು ನಿಲ್ದಾಣ ತಲುಪಿದ್ದಕ್ಕೆ ಪ್ಲಾಟ್​ಫಾರ್ಮ್​ನಲ್ಲೇ ಡ್ಯಾನ್ಸ್​ ಮಾಡಿದ ಪ್ರಯಾಣಿಕರು; ವಿಡಿಯೋ ವೈರಲ್

ಬಾಂದ್ರಾ-ಹರಿದ್ವಾರ ರೈಲು ತನ್ನ ನಿಗದಿತ ಸಮಯಕ್ಕಿಂತ 20 ನಿಮಿಷಗಳ ಮೊದಲು ನಿಲ್ದಾಣವನ್ನು ತಲುಪಿದ ಹಿನ್ನೆಲೆಯಲ್ಲಿ ಬಹಳ ಖುಷಿಯಾದ ಪ್ರಯಾಣಿಕರು ರೈಲ್ವೆ ಸ್ಟೇಷನ್​ನಲ್ಲೇ ಡ್ಯಾನ್ಸ್​ ಮಾಡಿ, ಸಂಭ್ರಮಾಚರಣೆ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.

Viral Video: 20 ನಿಮಿಷ ಮೊದಲೇ ರೈಲು ನಿಲ್ದಾಣ ತಲುಪಿದ್ದಕ್ಕೆ ಪ್ಲಾಟ್​ಫಾರ್ಮ್​ನಲ್ಲೇ ಡ್ಯಾನ್ಸ್​ ಮಾಡಿದ ಪ್ರಯಾಣಿಕರು; ವಿಡಿಯೋ ವೈರಲ್
ರೈಲಿನ ಮುಂದೆ ಡ್ಯಾನ್ಸ್​ ಮಾಡಿದ ಪ್ರಯಾಣಿಕರು
TV9 Web
| Edited By: |

Updated on:May 27, 2022 | 10:16 AM

Share

ನಾವು ಪ್ರಯಾಣಿಸುವಾಗ ಪ್ರತಿ ಬಾರಿಯೂ ನಾವು ತಲುಪಬೇಕಾದ ಸ್ಥಳವನ್ನು ಸರಿಯಾದ ಸಮಯಕ್ಕೆ ತಲುಪುತ್ತೇವೆ ಎಂದು ಹೇಳಲು ಸಾಧ್ಯವಿಲ್ಲ. ಅದರಲ್ಲೂ ಬಸ್, ಕ್ಯಾಬ್, ರೈಲಿನಲ್ಲಿ ಓಡಾಡುವಾಗ ಸಮಯದಲ್ಲಿ ವ್ಯತ್ಯಾಸವಾಗುತ್ತಲೇ ಇರುತ್ತದೆ. ಆದರೆ, ರೈಲು ತನ್ನ ನಿಗದಿತ ಸಮಯಕ್ಕಿಂತ 20 ನಿಮಿಷಗಳ ಮೊದಲು ನಿಲ್ದಾಣವನ್ನು ತಲುಪಿದ ಹಿನ್ನೆಲೆಯಲ್ಲಿ ಬಹಳ ಖುಷಿಯಾದ ಪ್ರಯಾಣಿಕರು ರೈಲ್ವೆ ಸ್ಟೇಷನ್​ನಲ್ಲೇ (Railway Station) ಡ್ಯಾನ್ಸ್​ ಮಾಡಿ, ಸಂಭ್ರಮಾಚರಣೆ ಮಾಡಿರುವ ವಿಡಿಯೋ ಇದೀಗ ವೈರಲ್ (Video Viral) ಆಗಿದೆ. ಈ ವಿಡಿಯೋವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಕೂಡ ಟ್ವಿಟ್ಟರ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಬಾಂದ್ರಾ-ಹರಿದ್ವಾರ ರೈಲು ಬುಧವಾರ ರಾತ್ರಿ 10.15ಕ್ಕೆ ಮಧ್ಯಪ್ರದೇಶದ ರತ್ಲಾಮ್ ನಿಲ್ದಾಣಕ್ಕೆ ಬಂದಾಗ ಖುಷಿಯಾದ ಪ್ರಯಾಣಿಕರು ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಡ್ಯಾನ್ಸ್​ ಮಾಡಿದರು. ಈ ವಿಡಿಯೋವನ್ನು ಸಚಿವ ಅಶ್ವಿನಿ ವೈಷ್ಣವ್ ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೆ, ಪ್ರಯಾಣಿಕರಿಗೆ 10 ನಿಮಿಷಗಳ ಸಾಮಾನ್ಯ ನಿಲುಗಡೆ ಸಮಯಕ್ಕಿಂತ ಸಾಕಷ್ಟು ಹೆಚ್ಚು ಸಮಯ ಸಿಕ್ಕಿದ್ದರಿಂದ ಅವರೆಲ್ಲರೂ ರೈಲಿನಿಂದ ಪ್ಲಾಟ್​ಫಾರ್ಮ್​ಗೆ ಇಳಿದು ಗರ್ಬಾ ನೃತ್ಯ ಪ್ರದರ್ಶಿಸುತ್ತಿರುವುದನ್ನು ವಿಡಿಯೋ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: Viral Video: 6ನೇ ಮಹಡಿಯ ಕಿಟಕಿಯಲ್ಲಿ ನೇತಾಡುತ್ತಿದ್ದ ಬಾಲಕಿಯನ್ನು ಕಾಪಾಡಲು ಬರಿಗೈಯಲ್ಲಿ ಕಟ್ಟಡ ಹತ್ತಿದ ಯುವಕ; ವಿಡಿಯೋ ವೈರಲ್

ಈ ವಿಡಿಯೋವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಂಚಿಕೊಂಡಿದ್ದು, ವಿವಿಧ ವಯೋಮಾನದ ಪ್ರಯಾಣಿಕರು ತಮ್ಮ ಕೈಗಳಲ್ಲಿ ಚಪ್ಪಾಳೆ ತಟ್ಟಿ, ಸರ್ಕಲ್ ಹಾಕಿಕೊಂಡು ಡ್ಯಾನ್ಸ್​ ಮಾಡಿದ್ದಾರೆ. ಸುತ್ತಲೂ ನಿಂತವರು ಅವರಿಗೆ ಪ್ರೋತ್ಸಾಹ ನೀಡುತ್ತಾ ಸಂಭ್ರಮಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:59 am, Fri, 27 May 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ