AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಹಾರಾಷ್ಟ್ರದಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಪಲ್ಟಿ; ವಿಡಿಯೋ ವೈರಲ್

ಕಟ್ಟಡವೊಂದರ ಮುಂದೆ ಶಾಲಾ ಬಸ್ ಚಾಲಕ ಬಸ್ ಅನ್ನು ರಿವರ್ಸ್​ ತೆಗೆಯಲು ಪ್ರಯತ್ನಿಸುವಾಗ ಬಸ್ ನಿಯಂತ್ರಣ ಕಳೆದುಕೊಂಡು, ಪಲ್ಟಿ ಹೊಡೆಯಿತು.

Viral Video: ಮಹಾರಾಷ್ಟ್ರದಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಪಲ್ಟಿ; ವಿಡಿಯೋ ವೈರಲ್
ಪಲ್ಟಿ ಹೊಡೆದ ಶಾಲಾ ಬಸ್
TV9 Web
| Edited By: |

Updated on: Sep 27, 2022 | 12:30 PM

Share

ಮುಂಬೈ: ಮಹಾರಾಷ್ಟ್ರದ ಅಂಬರನಾಥ್ ರೋಟರಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಸ್ಕೂಲ್ ಬಸ್ಸೊಂದು (School Bus) ಪಲ್ಟಿಯಾಗಿ ಬಿದ್ದಿರುವ ವಿಡಿಯೋ ವೈರಲ್ (Video Viral) ಆಗಿದೆ. ಮುಂಬೈನ ಅಂಬರನಾಥ್ ಗ್ರೀನ್ ಸಿಟಿ ಕಾಂಪ್ಲೆಕ್ಸ್‌ ಬಳಿ ಸೋಮವಾರ ಬೆಳಿಗ್ಗೆ 6.50ರ ಸುಮಾರಿಗೆ ಶಾಲಾ ಬಸ್ ಚಾಲಕ ಇಳಿಜಾರಿರುವ ರಸ್ತೆಯಲ್ಲಿ ಬಸ್ ಅನ್ನು ರಿವರ್ಸ್​ ತೆಗೆಯಲು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ.

ಕಟ್ಟಡವೊಂದರ ಮುಂದೆ ಶಾಲಾ ಬಸ್ ಚಾಲಕ ಬಸ್ ಅನ್ನು ರಿವರ್ಸ್​ ತೆಗೆಯಲು ಪ್ರಯತ್ನಿಸುವಾಗ ಬಸ್ ನಿಯಂತ್ರಣ ಕಳೆದುಕೊಂಡು, ಪಲ್ಟಿ ಹೊಡೆಯಿತು. ಅಂಬರನಾಥದ ಗ್ರೀನ್ ಸಿಟಿ ಕಾಂಪ್ಲೆಕ್ಸ್ ಬಳಿಯಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಇಡೀ ಘಟನೆ ಸೆರೆಯಾಗಿದೆ. ಈ ವಿಡಿಯೋದಲ್ಲಿ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ನಂತರ ಶಾಲಾ ಬಸ್ ಪಲ್ಟಿಯಾದ ನಂತರ ಬಸ್ ಕೆಳಗೆ ಬಿದ್ದಿರುವುದನ್ನು ಕಾಣಬಹುದು.

ಇದನ್ನೂ ಓದಿ: Madhya Pradesh: 40 ಮಕ್ಕಳಿದ್ದ ಶಾಲಾ ಬಸ್ ಅಪಘಾತ, 1 ಮಗು ಸಾವು

ಅದೃಷ್ಟವಶಾತ್, ಸ್ಥಳೀಯರು ಮತ್ತು ಸುತ್ತಮುತ್ತಲಿನ ಜನರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪಲ್ಟಿಯಾದ ಬಸ್‌ನಿಂದ ಮಕ್ಕಳನ್ನು ರಕ್ಷಿಸಿದ್ದರಿಂದ ಯಾರಿಗೂ ಯಾವುದೇ ದೊಡ್ಡ ಗಾಯಗಳಾಗಿಲ್ಲ. ಈ ಬಸ್ ಶಾಲೆಗೆ ಸೇರಿದ್ದಲ್ಲ ಎಂದು ರೋಟರಿ ಶಾಲಾ ಆಡಳಿತ ಮಂಡಳಿ ಸ್ಪಷ್ಟಪಡಿಸಿದ್ದು, ಬಸ್‌ಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದಿದೆ. ಈ ಬಸ್ ಖಾಸಗಿಯಾಗಿದ್ದು, ಪೋಷಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಈ ಬಸ್ ಮೂಲಕ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ಮತ್ತೊಂದೆಡೆ ಸ್ಥಳೀಯರು ಬಸ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್‌ಗೆ ವಿಮೆ ಮಾಡಲಾಗಿಲ್ಲ ಮತ್ತು ಬಸ್‌ನ ಸ್ಥಿತಿ ತುಂಬಾ ಹದಗೆಟ್ಟಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ