AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಹಾರಾಷ್ಟ್ರದಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಪಲ್ಟಿ; ವಿಡಿಯೋ ವೈರಲ್

ಕಟ್ಟಡವೊಂದರ ಮುಂದೆ ಶಾಲಾ ಬಸ್ ಚಾಲಕ ಬಸ್ ಅನ್ನು ರಿವರ್ಸ್​ ತೆಗೆಯಲು ಪ್ರಯತ್ನಿಸುವಾಗ ಬಸ್ ನಿಯಂತ್ರಣ ಕಳೆದುಕೊಂಡು, ಪಲ್ಟಿ ಹೊಡೆಯಿತು.

Viral Video: ಮಹಾರಾಷ್ಟ್ರದಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಪಲ್ಟಿ; ವಿಡಿಯೋ ವೈರಲ್
ಪಲ್ಟಿ ಹೊಡೆದ ಶಾಲಾ ಬಸ್
TV9 Web
| Updated By: ಸುಷ್ಮಾ ಚಕ್ರೆ|

Updated on: Sep 27, 2022 | 12:30 PM

Share

ಮುಂಬೈ: ಮಹಾರಾಷ್ಟ್ರದ ಅಂಬರನಾಥ್ ರೋಟರಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಸ್ಕೂಲ್ ಬಸ್ಸೊಂದು (School Bus) ಪಲ್ಟಿಯಾಗಿ ಬಿದ್ದಿರುವ ವಿಡಿಯೋ ವೈರಲ್ (Video Viral) ಆಗಿದೆ. ಮುಂಬೈನ ಅಂಬರನಾಥ್ ಗ್ರೀನ್ ಸಿಟಿ ಕಾಂಪ್ಲೆಕ್ಸ್‌ ಬಳಿ ಸೋಮವಾರ ಬೆಳಿಗ್ಗೆ 6.50ರ ಸುಮಾರಿಗೆ ಶಾಲಾ ಬಸ್ ಚಾಲಕ ಇಳಿಜಾರಿರುವ ರಸ್ತೆಯಲ್ಲಿ ಬಸ್ ಅನ್ನು ರಿವರ್ಸ್​ ತೆಗೆಯಲು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ.

ಕಟ್ಟಡವೊಂದರ ಮುಂದೆ ಶಾಲಾ ಬಸ್ ಚಾಲಕ ಬಸ್ ಅನ್ನು ರಿವರ್ಸ್​ ತೆಗೆಯಲು ಪ್ರಯತ್ನಿಸುವಾಗ ಬಸ್ ನಿಯಂತ್ರಣ ಕಳೆದುಕೊಂಡು, ಪಲ್ಟಿ ಹೊಡೆಯಿತು. ಅಂಬರನಾಥದ ಗ್ರೀನ್ ಸಿಟಿ ಕಾಂಪ್ಲೆಕ್ಸ್ ಬಳಿಯಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಇಡೀ ಘಟನೆ ಸೆರೆಯಾಗಿದೆ. ಈ ವಿಡಿಯೋದಲ್ಲಿ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ನಂತರ ಶಾಲಾ ಬಸ್ ಪಲ್ಟಿಯಾದ ನಂತರ ಬಸ್ ಕೆಳಗೆ ಬಿದ್ದಿರುವುದನ್ನು ಕಾಣಬಹುದು.

ಇದನ್ನೂ ಓದಿ: Madhya Pradesh: 40 ಮಕ್ಕಳಿದ್ದ ಶಾಲಾ ಬಸ್ ಅಪಘಾತ, 1 ಮಗು ಸಾವು

ಅದೃಷ್ಟವಶಾತ್, ಸ್ಥಳೀಯರು ಮತ್ತು ಸುತ್ತಮುತ್ತಲಿನ ಜನರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪಲ್ಟಿಯಾದ ಬಸ್‌ನಿಂದ ಮಕ್ಕಳನ್ನು ರಕ್ಷಿಸಿದ್ದರಿಂದ ಯಾರಿಗೂ ಯಾವುದೇ ದೊಡ್ಡ ಗಾಯಗಳಾಗಿಲ್ಲ. ಈ ಬಸ್ ಶಾಲೆಗೆ ಸೇರಿದ್ದಲ್ಲ ಎಂದು ರೋಟರಿ ಶಾಲಾ ಆಡಳಿತ ಮಂಡಳಿ ಸ್ಪಷ್ಟಪಡಿಸಿದ್ದು, ಬಸ್‌ಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದಿದೆ. ಈ ಬಸ್ ಖಾಸಗಿಯಾಗಿದ್ದು, ಪೋಷಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಈ ಬಸ್ ಮೂಲಕ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ಮತ್ತೊಂದೆಡೆ ಸ್ಥಳೀಯರು ಬಸ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್‌ಗೆ ವಿಮೆ ಮಾಡಲಾಗಿಲ್ಲ ಮತ್ತು ಬಸ್‌ನ ಸ್ಥಿತಿ ತುಂಬಾ ಹದಗೆಟ್ಟಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!