AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆಲವೇ ಸೆಕೆಂಡಲ್ಲಿ ನೆಲಸಮ; ಒಂದೇ ವಾರದಲ್ಲಿ ಬಿಹಾರದಲ್ಲಿ 2ನೇ ಸೇತುವೆ ಕುಸಿತ

ನೋಡನೋಡುತ್ತಿದ್ದಂತೆ ಸೇತುವೆ ಮುರಿದು ಬಿದ್ದಿರುವ ಕ್ಷಣಗಳ ವಿಡಿಯೋ ವೈರಲ್ ಆಗಿದೆ. 1991ರಲ್ಲಿ ಆ ಸಮಯದಲ್ಲಿ ಮಹಾರಾಜ್‌ಗಂಜ್ ಶಾಸಕರಾಗಿದ್ದ ಉಮಾ ಶಂಕರ್ ಸಿಂಗ್ ಅವರ ಕೊಡುಗೆಯೊಂದಿಗೆ ಈ ಸೇತುವೆಯನ್ನು ನಿರ್ಮಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Viral Video: ಕೆಲವೇ ಸೆಕೆಂಡಲ್ಲಿ ನೆಲಸಮ; ಒಂದೇ ವಾರದಲ್ಲಿ ಬಿಹಾರದಲ್ಲಿ 2ನೇ ಸೇತುವೆ ಕುಸಿತ
ಒಂದೇ ವಾರದಲ್ಲಿ ಬಿಹಾರದಲ್ಲಿ 2ನೇ ಸೇತುವೆ ಕುಸಿತ
ಸುಷ್ಮಾ ಚಕ್ರೆ
|

Updated on: Jun 22, 2024 | 7:15 PM

Share

ಪಾಟ್ನಾ: ಬಿಹಾರದ ಅರಾರಿಯಾದಲ್ಲಿ (Araria) ಸೇತುವೆಯೊಂದು ಉದ್ಘಾಟನೆಗೂ ಮೊದಲೇ ಕುಸಿದ 4 ದಿನಗಳ ನಂತರ ಬಿಹಾರ (Bihar) ರಾಜ್ಯದ ಸಿವಾನ್ ಜಿಲ್ಲೆಯಲ್ಲಿ ಇಂದು (ಶನಿವಾರ) ಮತ್ತೊಂದು ಸೇತುವೆ ಕುಸಿದಿದೆ. ದಾರೌಂಡಾ ಮತ್ತು ಮಹಾರಾಜ್‌ಗಂಜ್ ಬ್ಲಾಕ್‌ಗಳಲ್ಲಿ ಕಾಲುವೆ ಮತ್ತು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸಣ್ಣ ಸೇತುವೆಯೊಂದು ಇಂದು ಮುಂಜಾನೆ 5 ಗಂಟೆಯ ಸುಮಾರಿಗೆ ಕುಸಿದು ಬಿದ್ದಿದೆ.

“ಸೇತುವೆ ಕುಸಿತವಾದ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಇದು ತುಂಬಾ ಹಳೆಯ ಸೇತುವೆಯಾಗಿದ್ದು, ಮೇಲ್ನೋಟಕ್ಕೆ ಕಾಲುವೆಯ ಮೂಲಕ ನೀರು ಬಿಡುವಾಗ ಸೇತುವೆಯ ಪಿಲ್ಲರ್‌ಗಳು ಕುಸಿದಿವೆ. ಅದನ್ನು ಪುನಃಸ್ಥಾಪಿಸುವವರೆಗೆ ಪೀಡಿತ ಹಳ್ಳಿಗಳ ನಿವಾಸಿಗಳು ಸಾಧ್ಯವಾದಷ್ಟು ಕಡಿಮೆ ಅನಾನುಕೂಲತೆಯನ್ನು ಎದುರಿಸುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ಹೇಳಿದ್ದಾರೆ.

ಇದನ್ನೂ ಓದಿ: Viral Video: ಕಳ್ಳನೊಬ್ಬ ಬುರ್ಖಾ ಧರಿಸಿ ಜ್ಯುವೆಲ್ಲರಿ ಶಾಪ್​ನಲ್ಲಿ ದರೋಡೆಗೆ ಯತ್ನ; ಸಿಸಿಟಿವಿ ವಿಡಿಯೋ ವೈರಲ್

ಸೇತುವೆಯು ನೋಡನೋಡುತ್ತಿದ್ದಂತೆ ಎರಡಾಗಿ ಮುರಿದು ಬಿದ್ದಿರುವ ಕ್ಷಣಗಳ ವಿಡಿಯೋ ವೈರಲ್ ಆಗಿದೆ. 1991ರಲ್ಲಿ ಆ ಸಮಯದಲ್ಲಿ ಮಹಾರಾಜ್‌ಗಂಜ್ ಶಾಸಕರಾಗಿದ್ದ ಉಮಾ ಶಂಕರ್ ಸಿಂಗ್ ಅವರ ಕೊಡುಗೆಯೊಂದಿಗೆ ಈ ಸೇತುವೆಯನ್ನು ನಿರ್ಮಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು ಬಳಸಿಕೊಂಡು 20 ಅಡಿ ಉದ್ದದ ಸೇತುವೆಯನ್ನು ನಿರ್ಮಿಸಲಾಗಿದೆ ಎಂದು ಮಹಾರಾಜ್‌ಗಂಜ್‌ನ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅನಿಲ್ ಕುಮಾರ್ ತಿಳಿಸಿದ್ದಾರೆ. ಇತ್ತೀಚಿನ ಸೇತುವೆ ಕುಸಿತದ ಘಟನೆಯ ನಂತರ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಬಿಹಾರ ಸರ್ಕಾರದ ಮೇಲೆ ತೀವ್ರ ಟೀಕಾಪ್ರಹಾರ ನಡೆಸಿದೆ.

“ಡಬಲ್ ಇಂಜಿನ್ ಸರ್ಕಾರದ ಶೋಷಣೆ ನೋಡಿ! ಪ್ರತಿ ವಾರ ಯಾವುದಾದರೂ ಸೇತುವೆ ಕುಸಿಯುವುದು ಶೇ. 100ರಷ್ಟು ಖಚಿತ! ಕಮಿಷನ್ ತೆಗೆದುಕೊಳ್ಳುವುದು, ಅಧಿಕಾರಶಾಹಿ ಮತ್ತು ಭ್ರಷ್ಟಾಚಾರದ ಇಂತಹ ಅಪರೂಪದ ಪ್ರದರ್ಶನ ಜಗತ್ತಿನಲ್ಲಿ ಬೇರೆಲ್ಲಿಯೂ ಕಾಣುವುದಿಲ್ಲ” ಎಂದು ಆರ್​ಜೆಡಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: Nana Patole: ಕಾಂಗ್ರೆಸ್ ಕಾರ್ಯಕರ್ತ ನಾನಾ ಪಟೋಲೆಯ ಪಾದ ತೊಳೆಯುತ್ತಿರುವ ವಿಡಿಯೋ ವೈರಲ್; ಬಿಜೆಪಿ ಟೀಕೆ

ಒಂದು ವಾರದಲ್ಲಿ ಎರಡನೇ ಸೇತುವೆ ಕುಸಿತ:

ಬಿಹಾರದ ಅರಾರಿಯಾದಲ್ಲಿ ಹೊಸದಾಗಿ ನಿರ್ಮಿಸಲಾದ ಸೇತುವೆ ಕುಸಿದ 4 ದಿನಗಳ ನಂತರ ಇಂದಿನ ಈ ಘಟನೆ ನಡೆದಿತ್ತು. ಸೇತುವೆಯ ಸಮೀಪ ರಸ್ತೆಗಳು ಇನ್ನೂ ನಿರ್ಮಾಣವಾಗದ ಕಾರಣ ಸೇತುವೆಯನ್ನು ಸಾರ್ವಜನಿಕರಿಗೆ ತೆರೆದಿರಲಿಲ್ಲ. ಈ ಸೇತುವೆಯು ಕುರ್ಸಾ ಕಾಂತಾ ಮತ್ತು ಅರಾರಿಯಾ ಜಿಲ್ಲೆಯ ಸಿಕ್ಟಿ ಪ್ರದೇಶಗಳನ್ನು ಸಂಪರ್ಕಿಸುತ್ತದೆ.

ಅರಾರಿಯಾ ಸೇತುವೆ ಕುಸಿತಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಗ್ರಾಮೀಣ ಕಾಮಗಾರಿ ಇಲಾಖೆ ಕ್ರಮಕ್ಕೆ ಮುಂದಾಗಿದೆ. 183 ಮೀಟರ್ ಉದ್ದದ ಸೇತುವೆ ಕುಸಿತವು ಶೀಘ್ರದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಇದು 2023ರಿಂದ ಬಿಹಾರದಲ್ಲಿ 7ನೇ ಸೇತುವೆ ಕುಸಿತವಾಗಿದೆ. ಈ ವರ್ಷ ಕುಸಿತವಾದ ಎರಡನೇ ಸೇತುವೆಯಾಗಿದೆ. 12 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದಿತ್ತು.

ಮಾರ್ಚ್‌ನಲ್ಲಿ ಸುಪೌಲ್ ಜಿಲ್ಲೆಯ ಕೋಸಿ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು, ಒಬ್ಬ ಸಾವನ್ನಪ್ಪಿದ್ದ. ಇದರಲ್ಲಿ 10 ಮಂದಿ ಗಾಯಗೊಂಡಿದ್ದರು. ಕಳೆದ ವರ್ಷ, ಪುರ್ನಿಯಾದ ಬೈಸಿ ಬ್ಲಾಕ್‌ನಲ್ಲಿ ದುಮುಹ್ನಿ ನದಿಯ ಮೇಲೆ 20.1 ಮೀಟರ್ ನಿರ್ಮಾಣ ಹಂತದ ಸೇತುವೆಯು ಕಾಂಕ್ರೀಟ್ ಕೆಲಸ ಮುಗಿದ ಕೆಲವೇ ದಿನಗಳಲ್ಲಿ ಕುಸಿದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ