AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿಯನ್ನು ಕಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋದ ವೈದ್ಯನ ವಿಡಿಯೋ ವೈರಲ್

ರಾಜಸ್ಥಾನದ ಜೋಧ್​ಪುರದಲ್ಲಿ ವೈದ್ಯರೊಬ್ಬರು ನಾಯಿಯ ಬಾಯಿಗೆ ಬಟ್ಟೆ ಕಟ್ಟಿ, ಆ ನಾಯಿಯನ್ನು ಹಗ್ಗದಿಂದ ಕಾರಿಗೆ ಕಟ್ಟಿಕೊಂಡು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Viral Video: ನಾಯಿಯನ್ನು ಕಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋದ ವೈದ್ಯನ ವಿಡಿಯೋ ವೈರಲ್
ಬೀದಿ ನಾಯಿಯನ್ನು ಕಾರಿನಲ್ಲಿ ಎಳೆದುಕೊಂಡು ಹೋದ ವೈದ್ಯ
TV9 Web
| Edited By: |

Updated on:Sep 19, 2022 | 8:40 AM

Share

ಜೋಧ್​ಪುರ: ಕೆಲವರು ನಾಯಿ (Dog), ಬೆಕ್ಕುಗಳನ್ನು (Cat) ತಮ್ಮ ಮಕ್ಕಳಿಗಿಂತಲೂ ಹೆಚ್ಚಾಗಿ ನೋಡಿಕೊಳ್ಳುತ್ತಾರೆ. ಇನ್ನು ಕೆಲವರಿಗೆ ಪ್ರಾಣಿಗಳ ಮುಖ ಕಂಡರೂ ಆಗುವುದಿಲ್ಲ. ನಾಯಿಗಳಿಗೆ ಥಳಿಸಿ ಹಿಂಸೆ ನೀಡಿ, ಕೊಂದಿರುವ ಘಟನೆಗಳು ಸಹ ಸಾಕಷ್ಟಿವೆ. ರಾಜಸ್ಥಾನದ ಜೋಧ್​ಪುರದಲ್ಲಿ (Jodhpur) ವೈದ್ಯರೊಬ್ಬರು ನಾಯಿಯ ಬಾಯಿಗೆ ಬಟ್ಟೆ ಕಟ್ಟಿ, ಆ ನಾಯಿಯನ್ನು ಹಗ್ಗದಿಂದ ಕಾರಿಗೆ ಕಟ್ಟಿಕೊಂಡು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Video Viral) ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆ ವೈದ್ಯನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಉದ್ದವಾದ ಹಗ್ಗದಲ್ಲಿ ನಾಯಿಯನ್ನು ಕಟ್ಟಿದ್ದರಿಂದ ಆ ನಾಯಿ ಬೇರೆ ವಾಹನಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿಕೊಳ್ಳಲು ಹೆಣಗಾಡುತ್ತಿತ್ತು. ಸಾಕಷ್ಟು ವಾಹನಗಳು ಓಡಾಡುತ್ತಿದ್ದ ರಸ್ತೆಯಲ್ಲಿ ಕಾರಿನಲ್ಲಿ ನಾಯಿಯನ್ನು ಎಳೆದುಕೊಂಡು ಹೋಗುತ್ತಿರುವ ಈ ವಿಡಿಯೋ ವೈರಲ್ ಆಗಿದೆ. ಕಾರಿಗೆ ಹಗ್ಗದಿಂದ ನಾಯಿಯನ್ನು ಕಟ್ಟಿಕೊಂಡು, ಕಾರನ್ನು ಚಲಾಯಿಸುತ್ತಿರುವ ವೈದ್ಯನಿಗೆ ಆ ರಸ್ತೆಯಲ್ಲಿ ಹೋಗುತ್ತಿದ್ದ ಇತರೆ ವಾಹನ ಸವಾರರು ಬುದ್ಧಿ ಹೇಳಿದರೂ ಕಾರನ್ನು ನಿಲ್ಲಿಸಲಿಲ್ಲ. ಕೊನೆಗೆ ಸ್ಥಳೀಯರು ಸೇರಿ ಆ ಕಾರನ್ನು ನಿಲ್ಲಿಸಿ ನಾಯಿಗೆ ಕಟ್ಟಿದ್ದ ಹಗ್ಗವನ್ನು ಬಿಚ್ಚಿದ್ದಾರೆ.

ಇದನ್ನೂ ಓದಿ: Viral Video: ಮೈಮೇಲೆ ಜಿರಳೆ ಬಿದ್ದಾಗ ಚೀರಾಡುವವರನ್ನು ನೆನಪಿಸುವಂತಿದೆ ಈ ವೈರಲ್ ವಿಡಿಯೋ

ನಂತರ ಎನ್​ಜಿಓಗೆ ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಜೀವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದ ನಾಯಿಯ ವಿಡಿಯೋ ನೋಡಿದ ಎನ್​ಜಿಓ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಆ ನಾಯಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಎನ್​ಜಿಓ ಡಾಗ್ ಹೋಮ್ ಫೌಂಡೇಶನ್ ಪೋಸ್ಟ್ ಮಾಡಿದ ಟ್ವೀಟ್ ಪ್ರಕಾರ, ವೈದ್ಯರ ಹೆಸರು ರಜನೀಶ್ ಗಾಲ್ವಾ. ತಮ್ಮ ಮನೆಯ ಹತ್ತಿರವಿದ್ದ ಬೀದಿ ನಾಯಿ ಅಲ್ಲೇ ಓಡಾಡುತ್ತಿದ್ದುದರಿಂದ ಅವರಿಗೆ ಕಿರಿಕಿರಿ ಆಗುತ್ತಿತ್ತು. ಇದರಿಂದ ಆ ಬೀದಿ ನಾಯಿಯನ್ನು ಬೇರೆಡೆ ಬಿಟ್ಟು ಬರಲು ಅವರು ಕಾರಿಗೆ ನಾಯಿಯನ್ನು ಕಟ್ಟಿಕೊಂಡು ಹೋಗಿದ್ದರು ಎನ್ನಲಾಗಿದೆ. ಡಾ. ರಜನೀಶ್ ಗ್ವಾಲಾ ಅವರ ಈ ಕೃತ್ಯದಿಂದ ಆ ನಾಯಿಯ ಕಾಲುಗಳಿಗೆ ಮೂಳೆ ಮುರಿತವಾಗಿದೆ. ಈ ಘಟನೆಯು ಶಾಸ್ತ್ರಿನಗರ ಜೋಧ್‌ಪುರದಲ್ಲಿ ನಡೆದ ಘಟನೆಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಅವರ ಪರವಾನಗಿಯನ್ನು ರದ್ದುಗೊಳಿಸಬೇಕು” ಎಂದು ಎನ್​ಜಿಓ ಸಿಬ್ಬಂದಿ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 am, Mon, 19 September 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ