AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿಯನ್ನು ಕಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋದ ವೈದ್ಯನ ವಿಡಿಯೋ ವೈರಲ್

ರಾಜಸ್ಥಾನದ ಜೋಧ್​ಪುರದಲ್ಲಿ ವೈದ್ಯರೊಬ್ಬರು ನಾಯಿಯ ಬಾಯಿಗೆ ಬಟ್ಟೆ ಕಟ್ಟಿ, ಆ ನಾಯಿಯನ್ನು ಹಗ್ಗದಿಂದ ಕಾರಿಗೆ ಕಟ್ಟಿಕೊಂಡು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Viral Video: ನಾಯಿಯನ್ನು ಕಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋದ ವೈದ್ಯನ ವಿಡಿಯೋ ವೈರಲ್
ಬೀದಿ ನಾಯಿಯನ್ನು ಕಾರಿನಲ್ಲಿ ಎಳೆದುಕೊಂಡು ಹೋದ ವೈದ್ಯ
TV9 Web
| Edited By: |

Updated on:Sep 19, 2022 | 8:40 AM

Share

ಜೋಧ್​ಪುರ: ಕೆಲವರು ನಾಯಿ (Dog), ಬೆಕ್ಕುಗಳನ್ನು (Cat) ತಮ್ಮ ಮಕ್ಕಳಿಗಿಂತಲೂ ಹೆಚ್ಚಾಗಿ ನೋಡಿಕೊಳ್ಳುತ್ತಾರೆ. ಇನ್ನು ಕೆಲವರಿಗೆ ಪ್ರಾಣಿಗಳ ಮುಖ ಕಂಡರೂ ಆಗುವುದಿಲ್ಲ. ನಾಯಿಗಳಿಗೆ ಥಳಿಸಿ ಹಿಂಸೆ ನೀಡಿ, ಕೊಂದಿರುವ ಘಟನೆಗಳು ಸಹ ಸಾಕಷ್ಟಿವೆ. ರಾಜಸ್ಥಾನದ ಜೋಧ್​ಪುರದಲ್ಲಿ (Jodhpur) ವೈದ್ಯರೊಬ್ಬರು ನಾಯಿಯ ಬಾಯಿಗೆ ಬಟ್ಟೆ ಕಟ್ಟಿ, ಆ ನಾಯಿಯನ್ನು ಹಗ್ಗದಿಂದ ಕಾರಿಗೆ ಕಟ್ಟಿಕೊಂಡು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Video Viral) ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆ ವೈದ್ಯನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಉದ್ದವಾದ ಹಗ್ಗದಲ್ಲಿ ನಾಯಿಯನ್ನು ಕಟ್ಟಿದ್ದರಿಂದ ಆ ನಾಯಿ ಬೇರೆ ವಾಹನಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿಕೊಳ್ಳಲು ಹೆಣಗಾಡುತ್ತಿತ್ತು. ಸಾಕಷ್ಟು ವಾಹನಗಳು ಓಡಾಡುತ್ತಿದ್ದ ರಸ್ತೆಯಲ್ಲಿ ಕಾರಿನಲ್ಲಿ ನಾಯಿಯನ್ನು ಎಳೆದುಕೊಂಡು ಹೋಗುತ್ತಿರುವ ಈ ವಿಡಿಯೋ ವೈರಲ್ ಆಗಿದೆ. ಕಾರಿಗೆ ಹಗ್ಗದಿಂದ ನಾಯಿಯನ್ನು ಕಟ್ಟಿಕೊಂಡು, ಕಾರನ್ನು ಚಲಾಯಿಸುತ್ತಿರುವ ವೈದ್ಯನಿಗೆ ಆ ರಸ್ತೆಯಲ್ಲಿ ಹೋಗುತ್ತಿದ್ದ ಇತರೆ ವಾಹನ ಸವಾರರು ಬುದ್ಧಿ ಹೇಳಿದರೂ ಕಾರನ್ನು ನಿಲ್ಲಿಸಲಿಲ್ಲ. ಕೊನೆಗೆ ಸ್ಥಳೀಯರು ಸೇರಿ ಆ ಕಾರನ್ನು ನಿಲ್ಲಿಸಿ ನಾಯಿಗೆ ಕಟ್ಟಿದ್ದ ಹಗ್ಗವನ್ನು ಬಿಚ್ಚಿದ್ದಾರೆ.

ಇದನ್ನೂ ಓದಿ: Viral Video: ಮೈಮೇಲೆ ಜಿರಳೆ ಬಿದ್ದಾಗ ಚೀರಾಡುವವರನ್ನು ನೆನಪಿಸುವಂತಿದೆ ಈ ವೈರಲ್ ವಿಡಿಯೋ

ನಂತರ ಎನ್​ಜಿಓಗೆ ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಜೀವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದ ನಾಯಿಯ ವಿಡಿಯೋ ನೋಡಿದ ಎನ್​ಜಿಓ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಆ ನಾಯಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಎನ್​ಜಿಓ ಡಾಗ್ ಹೋಮ್ ಫೌಂಡೇಶನ್ ಪೋಸ್ಟ್ ಮಾಡಿದ ಟ್ವೀಟ್ ಪ್ರಕಾರ, ವೈದ್ಯರ ಹೆಸರು ರಜನೀಶ್ ಗಾಲ್ವಾ. ತಮ್ಮ ಮನೆಯ ಹತ್ತಿರವಿದ್ದ ಬೀದಿ ನಾಯಿ ಅಲ್ಲೇ ಓಡಾಡುತ್ತಿದ್ದುದರಿಂದ ಅವರಿಗೆ ಕಿರಿಕಿರಿ ಆಗುತ್ತಿತ್ತು. ಇದರಿಂದ ಆ ಬೀದಿ ನಾಯಿಯನ್ನು ಬೇರೆಡೆ ಬಿಟ್ಟು ಬರಲು ಅವರು ಕಾರಿಗೆ ನಾಯಿಯನ್ನು ಕಟ್ಟಿಕೊಂಡು ಹೋಗಿದ್ದರು ಎನ್ನಲಾಗಿದೆ. ಡಾ. ರಜನೀಶ್ ಗ್ವಾಲಾ ಅವರ ಈ ಕೃತ್ಯದಿಂದ ಆ ನಾಯಿಯ ಕಾಲುಗಳಿಗೆ ಮೂಳೆ ಮುರಿತವಾಗಿದೆ. ಈ ಘಟನೆಯು ಶಾಸ್ತ್ರಿನಗರ ಜೋಧ್‌ಪುರದಲ್ಲಿ ನಡೆದ ಘಟನೆಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಅವರ ಪರವಾನಗಿಯನ್ನು ರದ್ದುಗೊಳಿಸಬೇಕು” ಎಂದು ಎನ್​ಜಿಓ ಸಿಬ್ಬಂದಿ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 am, Mon, 19 September 22

Follow Us
Web contact
Web contact

TV9 Kannada

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ