AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲವಂತವಾಗಿ ಉತ್ತರ ಪ್ರದೇಶದ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಬಂಧನ; ವಿಡಿಯೋ ವೈರಲ್

Amitabh Thakur Arrest: 'ನೀವು ಎಫ್​ಐಆರ್​ ತೋರಿಸುವವರೆಗೂ ನಾನು ನಿಮ್ಮ ಜೊತೆ ಬರುವುದಿಲ್ಲ' ಎಂದು ಅಮಿತಾಭ್ ಠಾಕೂರ್ ತಮ್ಮನ್ನು ಬಂಧಿಸಲು ಬಂದು ಪೊಲೀಸರ ಮೇಲೆ ವಾದ ಮಾಡಿದ್ದು ಕೂಡ ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.

ಬಲವಂತವಾಗಿ ಉತ್ತರ ಪ್ರದೇಶದ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಬಂಧನ; ವಿಡಿಯೋ ವೈರಲ್
ಅಮಿತಾಭ್ ಠಾಕೂರ್ ಬಂಧನದ ವಿಡಿಯೋ
TV9 Web
| Edited By: |

Updated on:Aug 27, 2021 | 8:26 PM

Share

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎದುರಾಳಿಯಾಗಿ ಅಮಿತಾಭ್ ಠಾಕೂರ್ 2022ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ ಅವರನ್ನು ಸಿನಿಮೀಯವಾಗಿ ಇಂದು ಕಾರಿನಿಂದ ಕೆಳಗಿಳಿಸಿ, ಬಂಧಿಸಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದರ ವಿಡಿಯೋ ಕೂಡ ವೈರಲ್ ಆಗಿದೆ.

‘ನೀವು ಎಫ್​ಐಆರ್​ ತೋರಿಸುವವರೆಗೂ ನಾನು ನಿಮ್ಮ ಜೊತೆ ಬರುವುದಿಲ್ಲ’ ಎಂದು ಅಮಿತಾಭ್ ಠಾಕೂರ್ ತಮ್ಮನ್ನು ಬಂಧಿಸಲು ಬಂದು ಪೊಲೀಸರ ಮೇಲೆ ವಾದ ಮಾಡಿದ್ದು ಕೂಡ ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಆದರೂ ಅವರನ್ನು ಬಲವಂತವಾಗಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ 24 ವರ್ಷದ ಯುವತಿ ತನ್ನ ಗೆಳೆಯನೊಂದಿಗೆ ಸುಪ್ರೀಂ ಕೋರ್ಟ್​ ಎದುರು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಳು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಳು. 2019ರಲ್ಲಿ ಆ ಯುವತಿ ಬಿಎಸ್​ಪಿ ಸಂಸದ ಅತುಲ್ ರೈ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಳು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಫೇಸ್​ಬುಕ್ ಲೈವ್ ವಿಡಿಯೋದಲ್ಲಿ ಅಮಿತಾಭ್ ಠಾಕೂರ್ ಸೇರಿದಂತೆ ಹಲವು ಅಧಿಕಾರಿಗಳ ಹೆಸರನ್ನು ಹೇಳಿ ಆಕೆ ತನ್ನ ಗೆಳೆಯನೊಂದಿಗೆ ಸುಪ್ರೀಂ ಕೋರ್ಟ್​ ಎದುರು ಬೆಂಕಿ ಹಚ್ಚಿಕೊಂಡಿದ್ದಳು. ಈ ಆರೋಪದಲ್ಲಿ ಇಂದು ಅಮಿತಾಭ್ ಠಾಕೂರ್ ಅವರನ್ನು ಬಂಧಿಸಲಾಗಿದೆ.

ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಅವರ ಸೇವಾವಧಿ ಕೊನೆಗೊಳ್ಳುವ ಮೊದಲೇ ಕೇಂದ್ರ ಗೃಹ ಸಚಿವಾಲಯದ ಒತ್ತಡಕ್ಕೆ ಮಣಿದು ಕಳೆದ ಮಾರ್ಚ್ ತಿಂಗಳಲ್ಲಿ ನಿವೃತ್ತಿ ಘೋಷಿಸಿದ್ದರು. ಉತ್ತರ ಪ್ರದೇಶ ಕೇಡರ್​ನ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು.

ಕೇಂದ್ರ ಗೃಹಸಚಿವಾಲಯದ ಒಂದು ನಿರ್ಧಾರದ ನಂತರ ಅಮಿತಾಭ್ ಠಾಕೂರ್ ನಿವೃತ್ತಿ ತೆಗೆದುಕೊಳ್ಳುವ ಪರಿಸ್ಥಿತಿ ಉಂಟಾಗಿತ್ತು. ತಮ್ಮ ಬಕಿ ಉಳಿದ ಸೇವಾವಧಿಯಲ್ಲಿ ಮುಂದುವರಿಯಲು ಅಮಿತಾಬ್ ಠಾಕೂರ್ ಸಮರ್ಥರಲ್ಲ ಎಂದು ಗೃಹ ಸಚಿವಾಲಯ ಆದೇಶದಲ್ಲಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ 2028ರಲ್ಲಿ ನಿವೃತ್ತರಾಗಬೇಕಾಗಿದ್ದ ಅಮಿತಾಭ್ ಠಾಕೂರ್ ಕಳೆದ ಮಾರ್ಚ್​ನಲ್ಲಿ ನಿವೃತ್ತಿ ಪಡೆದಿದ್ದರು.

2017ರಲ್ಲಿ ಅಮಿತಾಬ್ ಠಾಕೂರ್ ತಮ್ಮ ಕೇಡರ್ ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಆ್ರಹಿಸಿದ್ದರು. 2015ರಲ್ಲಿ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರು ತನಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಅರೋಪಿಸಿದ ಹಿನ್ನೆಲೆಯಲ್ಲಿ ಆಗ ಅಧಿಕಾರದಲ್ಲಿದ್ದ ಅಖಿಲೇಶ್ ಯಾದವ್ ಸರ್ಕಾರ ಅಮಿತಾಭ್ ಠಾಕೂರ್ ಅವರನ್ನು ಅಮಾನತು ಮಾಡಿತ್ತು. 2016ರಲ್ಲಿ ಅವರು ಮತ್ತೆ ಉದ್ಯೋಗಕ್ಕೆ ಮರಳಿದ್ದರು. ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯ ಲಖನೌ ಪೀಠವು ಏಪ್ರಿಲ್ 2016ರಲ್ಲಿ ಠಾಕೂರ್ ಅವರ ಅಮಾನತು ಆದೇಶವನ್ನು ತಡೆಹಿಡಿದು, ಪುನರ್ ನೇಮಕ ಮಾಡಲು ಆದೇಶಿಸಿತ್ತು.

ಇದನ್ನೂ ಓದಿ: ನಾರಾಯಣ್​ ರಾಣೆ ಬಂಧನದ ಬೆನ್ನಲ್ಲೇ ವೈರಲ್ ಆಯ್ತು ಉದ್ಧವ್​ ಠಾಕ್ರೆ ಹಳೇ ವಿಡಿಯೋ; ಮಹಾ ಸಿಎಂ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿರುವ ನೆಟ್ಟಿಗರು

ಯೋಗಿ ಆದಿತ್ಯನಾಥ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ; ದೂರು ದಾಖಲು

(Viral Video Shows Dramatic Arrest Of UP Ex IPS Officer Amitabh Thakur in Rape Victim Suicide Case)

Published On - 8:23 pm, Fri, 27 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!