AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲವಂತವಾಗಿ ಉತ್ತರ ಪ್ರದೇಶದ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಬಂಧನ; ವಿಡಿಯೋ ವೈರಲ್

Amitabh Thakur Arrest: 'ನೀವು ಎಫ್​ಐಆರ್​ ತೋರಿಸುವವರೆಗೂ ನಾನು ನಿಮ್ಮ ಜೊತೆ ಬರುವುದಿಲ್ಲ' ಎಂದು ಅಮಿತಾಭ್ ಠಾಕೂರ್ ತಮ್ಮನ್ನು ಬಂಧಿಸಲು ಬಂದು ಪೊಲೀಸರ ಮೇಲೆ ವಾದ ಮಾಡಿದ್ದು ಕೂಡ ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.

ಬಲವಂತವಾಗಿ ಉತ್ತರ ಪ್ರದೇಶದ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಬಂಧನ; ವಿಡಿಯೋ ವೈರಲ್
ಅಮಿತಾಭ್ ಠಾಕೂರ್ ಬಂಧನದ ವಿಡಿಯೋ
TV9 Web
| Updated By: ಸುಷ್ಮಾ ಚಕ್ರೆ|

Updated on:Aug 27, 2021 | 8:26 PM

Share

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎದುರಾಳಿಯಾಗಿ ಅಮಿತಾಭ್ ಠಾಕೂರ್ 2022ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ ಅವರನ್ನು ಸಿನಿಮೀಯವಾಗಿ ಇಂದು ಕಾರಿನಿಂದ ಕೆಳಗಿಳಿಸಿ, ಬಂಧಿಸಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದರ ವಿಡಿಯೋ ಕೂಡ ವೈರಲ್ ಆಗಿದೆ.

‘ನೀವು ಎಫ್​ಐಆರ್​ ತೋರಿಸುವವರೆಗೂ ನಾನು ನಿಮ್ಮ ಜೊತೆ ಬರುವುದಿಲ್ಲ’ ಎಂದು ಅಮಿತಾಭ್ ಠಾಕೂರ್ ತಮ್ಮನ್ನು ಬಂಧಿಸಲು ಬಂದು ಪೊಲೀಸರ ಮೇಲೆ ವಾದ ಮಾಡಿದ್ದು ಕೂಡ ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಆದರೂ ಅವರನ್ನು ಬಲವಂತವಾಗಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ 24 ವರ್ಷದ ಯುವತಿ ತನ್ನ ಗೆಳೆಯನೊಂದಿಗೆ ಸುಪ್ರೀಂ ಕೋರ್ಟ್​ ಎದುರು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಳು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಳು. 2019ರಲ್ಲಿ ಆ ಯುವತಿ ಬಿಎಸ್​ಪಿ ಸಂಸದ ಅತುಲ್ ರೈ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಳು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಫೇಸ್​ಬುಕ್ ಲೈವ್ ವಿಡಿಯೋದಲ್ಲಿ ಅಮಿತಾಭ್ ಠಾಕೂರ್ ಸೇರಿದಂತೆ ಹಲವು ಅಧಿಕಾರಿಗಳ ಹೆಸರನ್ನು ಹೇಳಿ ಆಕೆ ತನ್ನ ಗೆಳೆಯನೊಂದಿಗೆ ಸುಪ್ರೀಂ ಕೋರ್ಟ್​ ಎದುರು ಬೆಂಕಿ ಹಚ್ಚಿಕೊಂಡಿದ್ದಳು. ಈ ಆರೋಪದಲ್ಲಿ ಇಂದು ಅಮಿತಾಭ್ ಠಾಕೂರ್ ಅವರನ್ನು ಬಂಧಿಸಲಾಗಿದೆ.

ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಅವರ ಸೇವಾವಧಿ ಕೊನೆಗೊಳ್ಳುವ ಮೊದಲೇ ಕೇಂದ್ರ ಗೃಹ ಸಚಿವಾಲಯದ ಒತ್ತಡಕ್ಕೆ ಮಣಿದು ಕಳೆದ ಮಾರ್ಚ್ ತಿಂಗಳಲ್ಲಿ ನಿವೃತ್ತಿ ಘೋಷಿಸಿದ್ದರು. ಉತ್ತರ ಪ್ರದೇಶ ಕೇಡರ್​ನ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು.

ಕೇಂದ್ರ ಗೃಹಸಚಿವಾಲಯದ ಒಂದು ನಿರ್ಧಾರದ ನಂತರ ಅಮಿತಾಭ್ ಠಾಕೂರ್ ನಿವೃತ್ತಿ ತೆಗೆದುಕೊಳ್ಳುವ ಪರಿಸ್ಥಿತಿ ಉಂಟಾಗಿತ್ತು. ತಮ್ಮ ಬಕಿ ಉಳಿದ ಸೇವಾವಧಿಯಲ್ಲಿ ಮುಂದುವರಿಯಲು ಅಮಿತಾಬ್ ಠಾಕೂರ್ ಸಮರ್ಥರಲ್ಲ ಎಂದು ಗೃಹ ಸಚಿವಾಲಯ ಆದೇಶದಲ್ಲಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ 2028ರಲ್ಲಿ ನಿವೃತ್ತರಾಗಬೇಕಾಗಿದ್ದ ಅಮಿತಾಭ್ ಠಾಕೂರ್ ಕಳೆದ ಮಾರ್ಚ್​ನಲ್ಲಿ ನಿವೃತ್ತಿ ಪಡೆದಿದ್ದರು.

2017ರಲ್ಲಿ ಅಮಿತಾಬ್ ಠಾಕೂರ್ ತಮ್ಮ ಕೇಡರ್ ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಆ್ರಹಿಸಿದ್ದರು. 2015ರಲ್ಲಿ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರು ತನಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಅರೋಪಿಸಿದ ಹಿನ್ನೆಲೆಯಲ್ಲಿ ಆಗ ಅಧಿಕಾರದಲ್ಲಿದ್ದ ಅಖಿಲೇಶ್ ಯಾದವ್ ಸರ್ಕಾರ ಅಮಿತಾಭ್ ಠಾಕೂರ್ ಅವರನ್ನು ಅಮಾನತು ಮಾಡಿತ್ತು. 2016ರಲ್ಲಿ ಅವರು ಮತ್ತೆ ಉದ್ಯೋಗಕ್ಕೆ ಮರಳಿದ್ದರು. ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯ ಲಖನೌ ಪೀಠವು ಏಪ್ರಿಲ್ 2016ರಲ್ಲಿ ಠಾಕೂರ್ ಅವರ ಅಮಾನತು ಆದೇಶವನ್ನು ತಡೆಹಿಡಿದು, ಪುನರ್ ನೇಮಕ ಮಾಡಲು ಆದೇಶಿಸಿತ್ತು.

ಇದನ್ನೂ ಓದಿ: ನಾರಾಯಣ್​ ರಾಣೆ ಬಂಧನದ ಬೆನ್ನಲ್ಲೇ ವೈರಲ್ ಆಯ್ತು ಉದ್ಧವ್​ ಠಾಕ್ರೆ ಹಳೇ ವಿಡಿಯೋ; ಮಹಾ ಸಿಎಂ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿರುವ ನೆಟ್ಟಿಗರು

ಯೋಗಿ ಆದಿತ್ಯನಾಥ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ; ದೂರು ದಾಖಲು

(Viral Video Shows Dramatic Arrest Of UP Ex IPS Officer Amitabh Thakur in Rape Victim Suicide Case)

Published On - 8:23 pm, Fri, 27 August 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!