AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಜಸ್ಥಾನದ ಮಹಿಳೆ ಮೇಲೆ ಜೆಸಿಬಿ ಹತ್ತಿಸಲು ಪ್ರಯತ್ನಿಸಿದ ವಿಡಿಯೋ ವೈರಲ್; ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ಬರ್ಮರ್​ನ ಈ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಭುಗಿಲೆದ್ದಿತ್ತು. ಅದೇ ಕಾರಣದಿಂದ ಈ ಗಲಾಟೆಯೂ ನಡೆದಿದೆ.

Viral Video: ರಾಜಸ್ಥಾನದ ಮಹಿಳೆ ಮೇಲೆ ಜೆಸಿಬಿ ಹತ್ತಿಸಲು ಪ್ರಯತ್ನಿಸಿದ ವಿಡಿಯೋ ವೈರಲ್; ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ
ರಾಜಸ್ಥಾನದಲ್ಲಿ ಮಹಿಳೆ ಮೇಲೆ ಹತ್ತಲು ಪ್ರಯತ್ನಿಸಿದ ಜೆಸಿಬಿ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 19, 2021 | 1:16 PM

Share

ಬರ್ಮರ್: ರಾಜಸ್ಥಾನದ ಬರ್ಮರ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಜೆಸಿಬಿ ಹತ್ತಿಸಲು ಪ್ರಯತ್ನಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Video Viral) ಆಗಿದೆ. ತನ್ನ ಮೇಲೆ ಬರಲು ಪ್ರಯತ್ನಿಸಿದ ಜೆಸಿಬಿ (JCB) ಯಂತ್ರದ ಮೇಲೆ ಮಹಿಳೆ ಕಲ್ಲು ಮತ್ತು ಇಟ್ಟಿಗೆಗಳನ್ನು ಎಸೆದಿರುವ ವಿಡಿಯೋ ವೈರಲ್ ಆಗಿದೆ. ರಾಜಸ್ಥಾನದಲ್ಲಿ (Rajasthan) ಮಹಿಳೆಯರು ಸುರಕ್ಷಿತವಾಗಿಲ್ಲ ಎಂದು ಬಿಜೆಪಿ ಹೇಳಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಘಟನೆ ಎರಡು ಗುಂಪುಗಳ ನಡುವಿನ ವಿವಾದಕ್ಕೆ ಸಂಬಂಧಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಬರ್ಮರ್​ನ ಈ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಭುಗಿಲೆದ್ದಿತ್ತು. ಅದೇ ಕಾರಣದಿಂದ ಈ ಗಲಾಟೆಯೂ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಬರ್ಮರ್ ಎಸ್‌ಪಿ ದೀಪಕ್ ಭಾರ್ಗವ್ ಹೇಳಿದ್ದಾರೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಮತ್ತೊಮ್ಮೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಹರಿಹಾಯ್ದಿದ್ದು, ಮಹಿಳೆಯರ ಸುರಕ್ಷತೆಯ ವಿಷಯದಲ್ಲಿ ಕಾಂಗ್ರೆಸ್ ಜನರನ್ನು ಮೂರ್ಖರನ್ನಾಗಿಸುತ್ತಿದೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದೆ.

ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿಯವರು ತಮ್ಮ ‘ಲಡ್ಕಿ ಹೂ ಲಾಡ್ ಸಕ್ತಿ ಹೂ’ ಘೋಷಣೆಯ ಮೂಲಕ ಜನರನ್ನು ಮೂರ್ಖರನ್ನಾಗಿಸುತ್ತಿದ್ದರೆ, ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ಇಂದು ಹಗಲು ಹೊತ್ತಿನಲ್ಲಿ ಯಾವುದೇ ಭಯವಿಲ್ಲದ ಪುಂಡ ಪೋಕರಿಗಳಿಂದ ಒಂಟಿ ಮಹಿಳೆಯ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ ಎಂದು ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಟೀಕಿಸಿದ್ದಾರೆ.

ರಾಜಸ್ಥಾನ ರಾಜ್ಯದಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿವೆ ಎಂದು ರಾಜಸ್ಥಾನ ಸಂಸದ ರಾಜ್ಯವರ್ಧನ್ ರಾಥೋಡ್ ಹೇಳಿದ್ದಾರೆ. ಎನ್‌ಸಿಆರ್‌ಬಿ ಅಂಕಿ-ಅಂಶಗಳು ರಾಜಸ್ಥಾನದಲ್ಲಿ ಗಂಭೀರ ಅಪರಾಧಗಳು ಹೆಚ್ಚಳವಾಗಿದೆ ಎಂದು ಖಚಿತಪಡಿಸಿವೆ. ಆದರೆ, ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಮಾತ್ರ ಮೂಕಪ್ರೇಕ್ಷಕನಂತೆ ಕುಳಿತಿದೆ. ಅವರು ಕುರ್ಚಿಯ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ, ಸಾರ್ವಜನಿಕರ ಬಗ್ಗೆ ಅವರಿಗೆ ಯಾವುದೇ ಕಾಳಜಿಯಿಲ್ಲ ಎಂದು ಅವರು ಹೇಳಿದ್ದಾರೆ. ನವೆಂಬರ್ 13ರಂದು ಈ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆದ ನಂತರವೇ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: Viral News: ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ; 11 ಲಕ್ಷ ರೂ. ಪರಿಹಾರ ನೀಡಲು ಆಸ್ಪತ್ರೆಗೆ ಆದೇಶ

Viral News: ಬರೋಬ್ಬರಿ 2,700 ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ; ಏನಿದರ ವಿಶೇಷತೆ?

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ