AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿ, ಇದು ನನ್ನ ಆದೇಶ; ಭಾರತದ ಸ್ವಾಮೀಜಿಯ ವಿಡಿಯೋ ವೈರಲ್

38 ಸೆಕೆಂಡ್‌ಗಳ ಈ ವಿಡಿಯೋ ಕ್ಲಿಪ್‌ನಲ್ಲಿ ಭಾರತೀಯ ಸ್ವಾಮೀಜಿಯೊಬ್ಬರು ರಷ್ಯಾ ರುಕ್ ಜಾಯೆ. ಉಕ್ರೇನ್ ಝುಕ್ ಜಾಯೆ. ಇದು ನನ್ನ ಆದೇಶ, ಯುದ್ಧ ನಿಲ್ಲಿಸಿ! ಎಂದು ಆದೇಶಿಸಿದ್ದಾರೆ.

Viral Video: ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿ, ಇದು ನನ್ನ ಆದೇಶ; ಭಾರತದ ಸ್ವಾಮೀಜಿಯ ವಿಡಿಯೋ ವೈರಲ್
ಭಾರತದ ಸ್ವಾಮೀಜಿ
TV9 Web
| Updated By: ಸುಷ್ಮಾ ಚಕ್ರೆ|

Updated on: Mar 04, 2022 | 7:20 PM

Share

ನವದೆಹಲಿ: ರಷ್ಯಾ ಮತ್ತು ಉಕ್ರೇನ್ (Ukraine) ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ ಜಗತ್ತಿನ ಹಲವು ರಾಷ್ಟ್ರಗಳು ಈ ಯುದ್ಧವನ್ನು ನಿಲ್ಲಿಸಲು ಪ್ರಯತ್ನಿಸುತ್ತಿವೆ. ಈ ಪಟ್ಟಿಯಲ್ಲಿ ಭಾರತ ಕೂಡ ಸೇರಿದೆ. ಉಕ್ರೇನ್ ಮತ್ತು ರಷ್ಯಾ (Russia) ನಾಯಕರು ಮುಖಾಮುಖಿಯಾಗಿ ಕುಳಿತು ಮಾತುಕತೆ ನಡೆಸಿಕೊಂಡು, ಯುದ್ಧಕ್ಕೆ ಅಂತ್ಯ ಹಾಡಬೇಕೆಂದು ಭಾರತ ಒತ್ತಾಯಿಸಿದೆ. ಹಿಂಸಾಚಾರವನ್ನು ನಿಲ್ಲಿಸಿ, ಹಗೆತನವನ್ನು ಕೊನೆಗೊಳಿಸಲು ಭಾರತ ಕರೆ ನೀಡಿದೆ. ಇದರ ನಡುವೆ ಭಾರತದ ಸ್ವಾಮೀಜಿಯೊಬ್ಬರು ಯುರೋಪ್ ದೇಶಗಳಿಗೆ ಯುದ್ಧವನ್ನು ‘ನಿಲ್ಲಿಸಿ’ ಎಂದು ‘ಆದೇಶ’ ನೀಡಿರುವ ವಿಡಿಯೋವೊಂದು ವೈರಲ್ ಆಗಿದೆ.

38 ಸೆಕೆಂಡ್‌ಗಳ ಈ ವಿಡಿಯೋ ಕ್ಲಿಪ್‌ನಲ್ಲಿ ಭಾರತೀಯ ಸ್ವಾಮೀಜಿಯೊಬ್ಬರು ರಷ್ಯಾ ರುಕ್ ಜಾಯೆ. ಉಕ್ರೇನ್ ಝುಕ್ ಜಾಯೆ. ಇದು ನನ್ನ ಆದೇಶ, ಯುದ್ಧ ನಿಲ್ಲಿಸಿ! ಎಂದು ಆದೇಶಿಸಿದ್ದಾರೆ. ರಷ್ಯಾ ಅದ್ಭುತವಾದ ದೇಶ. ಆದ್ದರಿಂದ ಅದು ಯುದ್ಧವನ್ನು ನಿಲ್ಲಿಸಬೇಕು. ಉಕ್ರೇನ್ ತಪ್ಪು ಮಾಡಿದೆ, ಆದ್ದರಿಂದ ಅದು ಕ್ಷಮೆ ಯಾಚಿಸಬೇಕು. ಇದರಿಂದ ಎಲ್ಲರಿಗೂ ಪ್ರಯೋಜನವಾಗಲಿದೆ. ಹೀಗೆ ಮಾಡಿದರೆ ಮಾತ್ರ ದುರಂತವನ್ನು ನಿಲ್ಲಿಸಬಹುದು ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

ಟ್ವಿಟರ್ ಬಳಕೆದಾರ ಗೌರವ್ ಸಿಂಗ್ ಸೆಂಗಾರ್ ಶೇರ್ ಮಾಡಿರುವ ಈ ವೀಡಿಯೊ 1 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳು, 5,200 ಲೈಕ್‌ಗಳು ಮತ್ತು 1200ಕ್ಕೂ ಹೆಚ್ಚು ರೀಟ್ವೀಟ್‌ಗಳನ್ನು ಗಳಿಸಿದೆ.

ಕಳೆದ ವಾರ ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಒಳಗೊಂಡಿರುವ ಕೆಲವು ಮೀಮ್‌ಗಳೊಂದಿಗೆ ನೆಟ್ಟಿಗರು ಈ ವೀಡಿಯೊಗೆ ಪ್ರತಿಕ್ರಿಯಿಸಿದ್ದಾರೆ.

ಸಂಜೀವ್ ಗುಪ್ತಾ ಎಂಬುವವರು ಈ ವಿಡಿಯೋಗೆ ಕಮೆಂಟ್ ಮಾಡಿದ್ದು, ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶವಿದು. ರಷ್ಯಾ ಮತ್ತು ಉಕ್ರೇನ್ ಪಾಲಿಸಲೇಬೇಕು. ಈ ಆದೇಶದ ಮುಂದೆ ಬೇರಾವ ಆದೇಶವೂ ನಿಲ್ಲುವುದಿಲ್ಲ. ಉಕ್ರೇನ್ ಅಧ್ಯಕ್ಷ ಕ್ಷಮೆ ಕೇಳಲೇಬೇಕು. ಆಗ ಮಾತ್ರ ಯುದ್ಧ ನಿಲ್ಲುತ್ತದೆ ಎಂದು ಈ ಮನುಷ್ಯ ಹೇಳಿದ ಮೇಲೆ ಎಲ್ಲರೂ ಕೇಳಲೇಬೇಕು ಎಂದು ಲೇವಡಿ ಮಾಡಿದ್ದಾರೆ.

ಇದರ ಜೊತೆಗೆ, ಆಪರೇಷನ್ ಗಂಗಾ ಯೋಜನೆಯ ಅಡಿಯಲ್ಲಿ ಉಕ್ರೇನ್‌ನ ನೆರೆಯ ದೇಶಗಳಿಂದ ವಿಶೇಷ ವಿಮಾನಗಳ ಮೂಲಕ ಸುಮಾರು 10,800 ಭಾರತೀಯರನ್ನು ಮರಳಿ ಕರೆತರಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಭಾರತೀಯ ವಾಯುಪಡೆಯ ಮೂರು C-17 ವಿಮಾನಗಳು ಮತ್ತು 14 ನಾಗರಿಕ ವಿಮಾನಗಳ ಮೂಲಕ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ನಡೆಸಲಾಯಿತು. ಶನಿವಾರ 11 ವಿಶೇಷ ನಾಗರಿಕ ವಿಮಾನಗಳು 2,200ಕ್ಕೂ ಹೆಚ್ಚು ಭಾರತೀಯರನ್ನು ಮರಳಿ ಕರೆತರುವ ನಿರೀಕ್ಷೆಯಿದೆ.

ಇದನ್ನೂ ಓದಿ: Ukraine Crisis: ಆಪರೇಷನ್ ಗಂಗಾ; ಯುದ್ಧಪೀಡಿತ ಉಕ್ರೇನ್​ನಿಂದ 10,800 ಭಾರತೀಯರ ಸ್ಥಳಾಂತರ

Operation Ganga: ಉಕ್ರೇನ್​ ಸಂಘರ್ಷ; ಪ್ರಧಾನಿ ಮೋದಿ ನೇತೃತ್ವದಲ್ಲಿ 5ನೇ ಬಾರಿಗೆ ಉನ್ನತ ಮಟ್ಟದ ಸಭೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ