AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಂಧ್ರದ ಹಾಸ್ಟೆಲ್​ನಲ್ಲಿ ರ್ಯಾಗಿಂಗ್; ಯುವಕನನ್ನು ಥಳಿಸಿ, ಐರನ್ ಬಾಕ್ಸ್​ನಿಂದ ಸುಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಹಾಸ್ಟೆಲ್ ರೂಮಿನೊಳಗೆ ಯುವಕರು ಸೇರಿ ಇನ್ನೋರ್ವ ಯುವಕನನ್ನು ಥಳಿಸಿದ ವಿಡಿಯೋ ವೈರಲ್ ಆಗಿದ್ದು, ಇಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

Viral Video: ಆಂಧ್ರದ ಹಾಸ್ಟೆಲ್​ನಲ್ಲಿ ರ್ಯಾಗಿಂಗ್; ಯುವಕನನ್ನು ಥಳಿಸಿ, ಐರನ್ ಬಾಕ್ಸ್​ನಿಂದ ಸುಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಆಂಧ್ರದ ಕಾಲೇಜಿನಲ್ಲಿ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆImage Credit source: NDTV
TV9 Web
| Updated By: ಸುಷ್ಮಾ ಚಕ್ರೆ|

Updated on: Nov 05, 2022 | 1:24 PM

Share

ಹೈದರಾಬಾದ್: ಕಾನೂನು ಎಷ್ಟೇ ಕಟ್ಟುನಿಟ್ಟಾಗಿದ್ದರೂ ಕಾಲೇಜು, ಹಾಸ್ಟೆಲ್​ಗಳಲ್ಲಿ ರ್ಯಾಗಿಂಗ್ ಇನ್ನೂ ಪೂರ್ತಿಯಾಗಿ ಕಡಿಮೆಯಾಗಿಲ್ಲ. ಈ ರ್ಯಾಗಿಂಗ್​​ನಿಂದಾಗಿ ಎಷ್ಟೋ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡ ಘಟನೆಗಳೂ ನಡೆದಿವೆ. ಆಂಧ್ರಪ್ರದೇಶದ (Andra Pradesh) ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್​ನ ರೂಮಿನಲ್ಲಿ ವಿದ್ಯಾರ್ಥಿಗಳು ಸೇರಿ ಒಬ್ಬ ಯುವಕನನ್ನು ಥಳಿಸಿ, ಇಸ್ತ್ರಿ ಪೆಟ್ಟಿಗೆಯಿಂದ ಆತನ ಮೈ ಸುಟ್ಟಿರುವ ವಿಡಿಯೋ ಭಾರೀ (Video Viral) ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಆ ಇಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಹಾಸ್ಟೆಲ್ ರೂಮಿನೊಳಗೆ ಯುವಕರು ಸೇರಿ ಇನ್ನೋರ್ವ ಯುವಕನನ್ನು ಥಳಿಸಿದ ವಿಡಿಯೋ ವೈರಲ್ ಆಗಿದ್ದು, ತನ್ನನ್ನು ಬಿಡುವಂತೆ ಆತ ಕೈ ಮುಗಿದು ಬೇಡಿಕೊಂಡರೂ ಕರುಣೆ ತೋರದೆ ಥಳಿಸಲಾಗಿದೆ.

ಕೋಲುಗಳನ್ನು ತಂದು ರೂಮಿನಲ್ಲಿ ಆ ಯುವಕನನ್ನು ಥಳಿಸುತ್ತಿರುವಾಗ ಆತ ಕ್ಷಮೆ ಯಾಚಿಸುತ್ತಾ, ತನ್ನನ್ನು ಬಿಟ್ಟು ಬಿಡುವಂತೆ ಬೇಡಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಆದರೂ ಕೇಳದ ಯುವಕರು ಶರ್ಟ್​ ಬಿಚ್ಚಲು ಹೇಳಿ ಮತ್ತೆ ಮತ್ತೆ ಥಳಿಸಿದ್ದಾರೆ. ಅದೇ ರೂಮಿನಲ್ಲಿದ್ದ ಇನ್ನೋರ್ವ ಯುವಕ ಈ ದೃಶ್ಯವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಆ ವಿಡಿಯೋ ಇದೀಗ ಆ ಯುವಕರ ಪಾಲಿಗೆ ಮುಳುವಾಗಿದೆ.

ಇದನ್ನೂ ಓದಿ: ರಸ್ತೆಯಲ್ಲೇ ಕುಳಿತು ಕೆಆರ್​​ ನಗರದ ಜನರ ನಿದ್ರೆಗೆಡಿಸಿದ್ದ ಭಯಾನಕ ಚಿರತೆ ಕೊನೆಗೂ ಸೆರೆ; ಇಲ್ಲಿದೆ ವಿಡಿಯೋ

ಹೊಡೆತ ತಿಂದ ಯುವಕ ಮತ್ತು ಎಲ್ಲಾ ಆರೋಪಿಗಳು ಎಸ್‌ಆರ್‌ಕೆಆರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದು, ಈ ಘಟನೆ ಒಂದೆರಡು ದಿನಗಳ ಹಿಂದೆ ನಡೆದಿದೆ ಎನ್ನಲಾಗಿದೆ. ಥಳಿತಕ್ಕೊಳಗಾದ ವಿದ್ಯಾರ್ಥಿ ಅಂಕಿತ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ದೇಹದ ತುಂಬ ಗಾಯಗಳಾಗಿವೆ. ಅವರ ಎದೆ ಮತ್ತು ಕೈಗಳ ಮೇಲೆ ಸುಟ್ಟ ಗಾಯಗಳಿವೆ. ಈ ಹಲ್ಲೆಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?