AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಂಧ್ರದ ಹಾಸ್ಟೆಲ್​ನಲ್ಲಿ ರ್ಯಾಗಿಂಗ್; ಯುವಕನನ್ನು ಥಳಿಸಿ, ಐರನ್ ಬಾಕ್ಸ್​ನಿಂದ ಸುಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಹಾಸ್ಟೆಲ್ ರೂಮಿನೊಳಗೆ ಯುವಕರು ಸೇರಿ ಇನ್ನೋರ್ವ ಯುವಕನನ್ನು ಥಳಿಸಿದ ವಿಡಿಯೋ ವೈರಲ್ ಆಗಿದ್ದು, ಇಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

Viral Video: ಆಂಧ್ರದ ಹಾಸ್ಟೆಲ್​ನಲ್ಲಿ ರ್ಯಾಗಿಂಗ್; ಯುವಕನನ್ನು ಥಳಿಸಿ, ಐರನ್ ಬಾಕ್ಸ್​ನಿಂದ ಸುಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಆಂಧ್ರದ ಕಾಲೇಜಿನಲ್ಲಿ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆImage Credit source: NDTV
TV9 Web
| Edited By: |

Updated on: Nov 05, 2022 | 1:24 PM

Share

ಹೈದರಾಬಾದ್: ಕಾನೂನು ಎಷ್ಟೇ ಕಟ್ಟುನಿಟ್ಟಾಗಿದ್ದರೂ ಕಾಲೇಜು, ಹಾಸ್ಟೆಲ್​ಗಳಲ್ಲಿ ರ್ಯಾಗಿಂಗ್ ಇನ್ನೂ ಪೂರ್ತಿಯಾಗಿ ಕಡಿಮೆಯಾಗಿಲ್ಲ. ಈ ರ್ಯಾಗಿಂಗ್​​ನಿಂದಾಗಿ ಎಷ್ಟೋ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡ ಘಟನೆಗಳೂ ನಡೆದಿವೆ. ಆಂಧ್ರಪ್ರದೇಶದ (Andra Pradesh) ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್​ನ ರೂಮಿನಲ್ಲಿ ವಿದ್ಯಾರ್ಥಿಗಳು ಸೇರಿ ಒಬ್ಬ ಯುವಕನನ್ನು ಥಳಿಸಿ, ಇಸ್ತ್ರಿ ಪೆಟ್ಟಿಗೆಯಿಂದ ಆತನ ಮೈ ಸುಟ್ಟಿರುವ ವಿಡಿಯೋ ಭಾರೀ (Video Viral) ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಆ ಇಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಹಾಸ್ಟೆಲ್ ರೂಮಿನೊಳಗೆ ಯುವಕರು ಸೇರಿ ಇನ್ನೋರ್ವ ಯುವಕನನ್ನು ಥಳಿಸಿದ ವಿಡಿಯೋ ವೈರಲ್ ಆಗಿದ್ದು, ತನ್ನನ್ನು ಬಿಡುವಂತೆ ಆತ ಕೈ ಮುಗಿದು ಬೇಡಿಕೊಂಡರೂ ಕರುಣೆ ತೋರದೆ ಥಳಿಸಲಾಗಿದೆ.

ಕೋಲುಗಳನ್ನು ತಂದು ರೂಮಿನಲ್ಲಿ ಆ ಯುವಕನನ್ನು ಥಳಿಸುತ್ತಿರುವಾಗ ಆತ ಕ್ಷಮೆ ಯಾಚಿಸುತ್ತಾ, ತನ್ನನ್ನು ಬಿಟ್ಟು ಬಿಡುವಂತೆ ಬೇಡಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಆದರೂ ಕೇಳದ ಯುವಕರು ಶರ್ಟ್​ ಬಿಚ್ಚಲು ಹೇಳಿ ಮತ್ತೆ ಮತ್ತೆ ಥಳಿಸಿದ್ದಾರೆ. ಅದೇ ರೂಮಿನಲ್ಲಿದ್ದ ಇನ್ನೋರ್ವ ಯುವಕ ಈ ದೃಶ್ಯವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಆ ವಿಡಿಯೋ ಇದೀಗ ಆ ಯುವಕರ ಪಾಲಿಗೆ ಮುಳುವಾಗಿದೆ.

ಇದನ್ನೂ ಓದಿ: ರಸ್ತೆಯಲ್ಲೇ ಕುಳಿತು ಕೆಆರ್​​ ನಗರದ ಜನರ ನಿದ್ರೆಗೆಡಿಸಿದ್ದ ಭಯಾನಕ ಚಿರತೆ ಕೊನೆಗೂ ಸೆರೆ; ಇಲ್ಲಿದೆ ವಿಡಿಯೋ

ಹೊಡೆತ ತಿಂದ ಯುವಕ ಮತ್ತು ಎಲ್ಲಾ ಆರೋಪಿಗಳು ಎಸ್‌ಆರ್‌ಕೆಆರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದು, ಈ ಘಟನೆ ಒಂದೆರಡು ದಿನಗಳ ಹಿಂದೆ ನಡೆದಿದೆ ಎನ್ನಲಾಗಿದೆ. ಥಳಿತಕ್ಕೊಳಗಾದ ವಿದ್ಯಾರ್ಥಿ ಅಂಕಿತ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ದೇಹದ ತುಂಬ ಗಾಯಗಳಾಗಿವೆ. ಅವರ ಎದೆ ಮತ್ತು ಕೈಗಳ ಮೇಲೆ ಸುಟ್ಟ ಗಾಯಗಳಿವೆ. ಈ ಹಲ್ಲೆಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ