AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಂಧ್ರದ ಹಾಸ್ಟೆಲ್​ನಲ್ಲಿ ರ್ಯಾಗಿಂಗ್; ಯುವಕನನ್ನು ಥಳಿಸಿ, ಐರನ್ ಬಾಕ್ಸ್​ನಿಂದ ಸುಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಹಾಸ್ಟೆಲ್ ರೂಮಿನೊಳಗೆ ಯುವಕರು ಸೇರಿ ಇನ್ನೋರ್ವ ಯುವಕನನ್ನು ಥಳಿಸಿದ ವಿಡಿಯೋ ವೈರಲ್ ಆಗಿದ್ದು, ಇಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

Viral Video: ಆಂಧ್ರದ ಹಾಸ್ಟೆಲ್​ನಲ್ಲಿ ರ್ಯಾಗಿಂಗ್; ಯುವಕನನ್ನು ಥಳಿಸಿ, ಐರನ್ ಬಾಕ್ಸ್​ನಿಂದ ಸುಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಆಂಧ್ರದ ಕಾಲೇಜಿನಲ್ಲಿ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆImage Credit source: NDTV
TV9 Web
| Edited By: |

Updated on: Nov 05, 2022 | 1:24 PM

Share

ಹೈದರಾಬಾದ್: ಕಾನೂನು ಎಷ್ಟೇ ಕಟ್ಟುನಿಟ್ಟಾಗಿದ್ದರೂ ಕಾಲೇಜು, ಹಾಸ್ಟೆಲ್​ಗಳಲ್ಲಿ ರ್ಯಾಗಿಂಗ್ ಇನ್ನೂ ಪೂರ್ತಿಯಾಗಿ ಕಡಿಮೆಯಾಗಿಲ್ಲ. ಈ ರ್ಯಾಗಿಂಗ್​​ನಿಂದಾಗಿ ಎಷ್ಟೋ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡ ಘಟನೆಗಳೂ ನಡೆದಿವೆ. ಆಂಧ್ರಪ್ರದೇಶದ (Andra Pradesh) ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್​ನ ರೂಮಿನಲ್ಲಿ ವಿದ್ಯಾರ್ಥಿಗಳು ಸೇರಿ ಒಬ್ಬ ಯುವಕನನ್ನು ಥಳಿಸಿ, ಇಸ್ತ್ರಿ ಪೆಟ್ಟಿಗೆಯಿಂದ ಆತನ ಮೈ ಸುಟ್ಟಿರುವ ವಿಡಿಯೋ ಭಾರೀ (Video Viral) ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಆ ಇಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಹಾಸ್ಟೆಲ್ ರೂಮಿನೊಳಗೆ ಯುವಕರು ಸೇರಿ ಇನ್ನೋರ್ವ ಯುವಕನನ್ನು ಥಳಿಸಿದ ವಿಡಿಯೋ ವೈರಲ್ ಆಗಿದ್ದು, ತನ್ನನ್ನು ಬಿಡುವಂತೆ ಆತ ಕೈ ಮುಗಿದು ಬೇಡಿಕೊಂಡರೂ ಕರುಣೆ ತೋರದೆ ಥಳಿಸಲಾಗಿದೆ.

ಕೋಲುಗಳನ್ನು ತಂದು ರೂಮಿನಲ್ಲಿ ಆ ಯುವಕನನ್ನು ಥಳಿಸುತ್ತಿರುವಾಗ ಆತ ಕ್ಷಮೆ ಯಾಚಿಸುತ್ತಾ, ತನ್ನನ್ನು ಬಿಟ್ಟು ಬಿಡುವಂತೆ ಬೇಡಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಆದರೂ ಕೇಳದ ಯುವಕರು ಶರ್ಟ್​ ಬಿಚ್ಚಲು ಹೇಳಿ ಮತ್ತೆ ಮತ್ತೆ ಥಳಿಸಿದ್ದಾರೆ. ಅದೇ ರೂಮಿನಲ್ಲಿದ್ದ ಇನ್ನೋರ್ವ ಯುವಕ ಈ ದೃಶ್ಯವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಆ ವಿಡಿಯೋ ಇದೀಗ ಆ ಯುವಕರ ಪಾಲಿಗೆ ಮುಳುವಾಗಿದೆ.

ಇದನ್ನೂ ಓದಿ: ರಸ್ತೆಯಲ್ಲೇ ಕುಳಿತು ಕೆಆರ್​​ ನಗರದ ಜನರ ನಿದ್ರೆಗೆಡಿಸಿದ್ದ ಭಯಾನಕ ಚಿರತೆ ಕೊನೆಗೂ ಸೆರೆ; ಇಲ್ಲಿದೆ ವಿಡಿಯೋ

ಹೊಡೆತ ತಿಂದ ಯುವಕ ಮತ್ತು ಎಲ್ಲಾ ಆರೋಪಿಗಳು ಎಸ್‌ಆರ್‌ಕೆಆರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದು, ಈ ಘಟನೆ ಒಂದೆರಡು ದಿನಗಳ ಹಿಂದೆ ನಡೆದಿದೆ ಎನ್ನಲಾಗಿದೆ. ಥಳಿತಕ್ಕೊಳಗಾದ ವಿದ್ಯಾರ್ಥಿ ಅಂಕಿತ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ದೇಹದ ತುಂಬ ಗಾಯಗಳಾಗಿವೆ. ಅವರ ಎದೆ ಮತ್ತು ಕೈಗಳ ಮೇಲೆ ಸುಟ್ಟ ಗಾಯಗಳಿವೆ. ಈ ಹಲ್ಲೆಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ