AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಂಧ್ರದ ಹಾಸ್ಟೆಲ್​ನಲ್ಲಿ ರ್ಯಾಗಿಂಗ್; ಯುವಕನನ್ನು ಥಳಿಸಿ, ಐರನ್ ಬಾಕ್ಸ್​ನಿಂದ ಸುಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಹಾಸ್ಟೆಲ್ ರೂಮಿನೊಳಗೆ ಯುವಕರು ಸೇರಿ ಇನ್ನೋರ್ವ ಯುವಕನನ್ನು ಥಳಿಸಿದ ವಿಡಿಯೋ ವೈರಲ್ ಆಗಿದ್ದು, ಇಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

Viral Video: ಆಂಧ್ರದ ಹಾಸ್ಟೆಲ್​ನಲ್ಲಿ ರ್ಯಾಗಿಂಗ್; ಯುವಕನನ್ನು ಥಳಿಸಿ, ಐರನ್ ಬಾಕ್ಸ್​ನಿಂದ ಸುಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಆಂಧ್ರದ ಕಾಲೇಜಿನಲ್ಲಿ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆImage Credit source: NDTV
TV9 Web
| Edited By: |

Updated on: Nov 05, 2022 | 1:24 PM

Share

ಹೈದರಾಬಾದ್: ಕಾನೂನು ಎಷ್ಟೇ ಕಟ್ಟುನಿಟ್ಟಾಗಿದ್ದರೂ ಕಾಲೇಜು, ಹಾಸ್ಟೆಲ್​ಗಳಲ್ಲಿ ರ್ಯಾಗಿಂಗ್ ಇನ್ನೂ ಪೂರ್ತಿಯಾಗಿ ಕಡಿಮೆಯಾಗಿಲ್ಲ. ಈ ರ್ಯಾಗಿಂಗ್​​ನಿಂದಾಗಿ ಎಷ್ಟೋ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡ ಘಟನೆಗಳೂ ನಡೆದಿವೆ. ಆಂಧ್ರಪ್ರದೇಶದ (Andra Pradesh) ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್​ನ ರೂಮಿನಲ್ಲಿ ವಿದ್ಯಾರ್ಥಿಗಳು ಸೇರಿ ಒಬ್ಬ ಯುವಕನನ್ನು ಥಳಿಸಿ, ಇಸ್ತ್ರಿ ಪೆಟ್ಟಿಗೆಯಿಂದ ಆತನ ಮೈ ಸುಟ್ಟಿರುವ ವಿಡಿಯೋ ಭಾರೀ (Video Viral) ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಆ ಇಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಹಾಸ್ಟೆಲ್ ರೂಮಿನೊಳಗೆ ಯುವಕರು ಸೇರಿ ಇನ್ನೋರ್ವ ಯುವಕನನ್ನು ಥಳಿಸಿದ ವಿಡಿಯೋ ವೈರಲ್ ಆಗಿದ್ದು, ತನ್ನನ್ನು ಬಿಡುವಂತೆ ಆತ ಕೈ ಮುಗಿದು ಬೇಡಿಕೊಂಡರೂ ಕರುಣೆ ತೋರದೆ ಥಳಿಸಲಾಗಿದೆ.

ಕೋಲುಗಳನ್ನು ತಂದು ರೂಮಿನಲ್ಲಿ ಆ ಯುವಕನನ್ನು ಥಳಿಸುತ್ತಿರುವಾಗ ಆತ ಕ್ಷಮೆ ಯಾಚಿಸುತ್ತಾ, ತನ್ನನ್ನು ಬಿಟ್ಟು ಬಿಡುವಂತೆ ಬೇಡಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಆದರೂ ಕೇಳದ ಯುವಕರು ಶರ್ಟ್​ ಬಿಚ್ಚಲು ಹೇಳಿ ಮತ್ತೆ ಮತ್ತೆ ಥಳಿಸಿದ್ದಾರೆ. ಅದೇ ರೂಮಿನಲ್ಲಿದ್ದ ಇನ್ನೋರ್ವ ಯುವಕ ಈ ದೃಶ್ಯವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಆ ವಿಡಿಯೋ ಇದೀಗ ಆ ಯುವಕರ ಪಾಲಿಗೆ ಮುಳುವಾಗಿದೆ.

ಇದನ್ನೂ ಓದಿ: ರಸ್ತೆಯಲ್ಲೇ ಕುಳಿತು ಕೆಆರ್​​ ನಗರದ ಜನರ ನಿದ್ರೆಗೆಡಿಸಿದ್ದ ಭಯಾನಕ ಚಿರತೆ ಕೊನೆಗೂ ಸೆರೆ; ಇಲ್ಲಿದೆ ವಿಡಿಯೋ

ಹೊಡೆತ ತಿಂದ ಯುವಕ ಮತ್ತು ಎಲ್ಲಾ ಆರೋಪಿಗಳು ಎಸ್‌ಆರ್‌ಕೆಆರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದು, ಈ ಘಟನೆ ಒಂದೆರಡು ದಿನಗಳ ಹಿಂದೆ ನಡೆದಿದೆ ಎನ್ನಲಾಗಿದೆ. ಥಳಿತಕ್ಕೊಳಗಾದ ವಿದ್ಯಾರ್ಥಿ ಅಂಕಿತ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ದೇಹದ ತುಂಬ ಗಾಯಗಳಾಗಿವೆ. ಅವರ ಎದೆ ಮತ್ತು ಕೈಗಳ ಮೇಲೆ ಸುಟ್ಟ ಗಾಯಗಳಿವೆ. ಈ ಹಲ್ಲೆಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ