Viral Video: ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆ ನಡೆಯಿತು ಅಚ್ಚರಿಯ ಘಟನೆ; ವೈರಲ್ ವಿಡಿಯೋ ಇಲ್ಲಿದೆ

ಉತ್ತರ ಪ್ರದೇಶದ ಮುಜರಾಯಿ ಸರ್ಕಾರಿ ಇಂಟರ್ ಕಾಲೇಜು ಮೈದಾನದಲ್ಲಿ ವಿಜಯದಶಮಿ ನಿಮಿತ್ತ ರಾವಣನ ಪ್ರತಿಕೃತಿ ದಹಿಸುವಾಗ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Viral Video: ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆ ನಡೆಯಿತು ಅಚ್ಚರಿಯ ಘಟನೆ; ವೈರಲ್ ವಿಡಿಯೋ ಇಲ್ಲಿದೆ
ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚಿರುವ ದೃಶ್ಯ
Follow us
| Updated By: ಸುಷ್ಮಾ ಚಕ್ರೆ

Updated on: Oct 06, 2022 | 11:25 AM

ನವದೆಹಲಿ: ನವರಾತ್ರಿಯ (Navaratri) ಕೊನೆಯ ದಿನ ರಾವಣನ ಸಂಹಾರ ಮಾಡುವುದು ಪದ್ಧತಿ. ವಿಜಯದಶಮಿಯಂದು (Vijayadashami) ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚಿ ಜನರು 9 ದಸರಾ (Dasara) ಉತ್ಸವ ಆಚರಿಸುತ್ತಾರೆ. ಆದರೆ, ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಬುಧವಾರ ದಸರಾ ಕಾರ್ಯಕ್ರಮದ ವೇಳೆ ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆ ವಿಚಿತ್ರವಾದ ಘಟನೆಯೊಂದು ನಡೆದಿದೆ. ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚಿದಾಗ ಆ ಬೆಂಕಿಯ ಕಿಡಿಗಳು ಹಾರಿಹೋಗಿ ಅಲ್ಲಿ ಸೇರಿದ್ದ ಜನರು, ಪೊಲೀಸರ ಮೇಲೆ ಬಿದ್ದಿವೆ. ಇದರಿಂದ ಜನರೆಲ್ಲ ದಿಕ್ಕಾಪಾಲಾಗಿ ಓಡಿದ್ದಾರೆ.

ಉತ್ತರ ಪ್ರದೇಶದ ಮುಜರಾಯಿ ಸರ್ಕಾರಿ ಇಂಟರ್ ಕಾಲೇಜು ಮೈದಾನದಲ್ಲಿ ವಿಜಯದಶಮಿ ನಿಮಿತ್ತ ರಾವಣನ ಪ್ರತಿಕೃತಿ ದಹಿಸುವಾಗ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ರಾವಣನ ಪ್ರತಿಕೃತಿಗಳನ್ನು ದಹಿಸುವ ಮೂಲಕ ಆಚರಿಸಲಾಗುವ ದಸರಾವನ್ನು ವೀಕ್ಷಿಸಲು ನೆರೆದಿದ್ದ ದೊಡ್ಡ ಜನಸಮೂಹದ ಮೇಲೆ ರಾವಣನ ಪ್ರತಿಕೃತಿಯಿಂದ ಬೆಂಕಿ ಹಾರಿ ಬೀಳುವುದನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನೂ ಓದಿ: ಐತಿಹಾಸಿಕ ಕುಲು ದಸರಾದಲ್ಲಿ ಪಾಲ್ಗೊಂಡ ಮೊದಲ ಪ್ರಧಾನಿಯೆಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ನರೇಂದ್ರ ಮೋದಿ

ಕೇವಲ ಜನಸಾಮಾನ್ಯರಿಗೆ ಮಾತ್ರವಲ್ಲದೆ ಪೊಲೀಸ್ ಅಧಿಕಾರಿಗಳು ಕೂಡ ರಕ್ಷಣೆಗಾಗಿ ಓಡುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ರಾವಣನ ಪ್ರತಿಕೃತಿಯಿಂದ ಬೆಂಕಿ ಹಾರುತ್ತಿರುವುದು ಕಡಿಮೆಯಾದ ಬಳಿಕ ಗೂಳಿಯೊಂದು ಮೈದಾನಕ್ಕೆ ನುಗ್ಗಿ ಮತ್ತಷ್ಟು ಆತಂಕ ಮೂಡಿಸಿತು. ಕೂಡಲೇ ಅಧಿಕಾರಿಗಳು ಆ ಗೂಳಿಯನ್ನು ಎಳೆದುಕೊಂಡು ಹೋಗಿದ್ದಾರೆ.

ಹರಿಯಾಣದ ಯಮುನಾನಗರದಲ್ಲಿ ಇದೇ ರೀತಿಯ ಘಟನೆ ವರದಿಯಾಗಿದ್ದು, ರಾವಣನ ದಹನ ಪ್ರತಿಕೃತಿ ಪ್ರೇಕ್ಷಕರ ಮೇಲೆ ಬಿದ್ದಿದೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಯಮುನಾನಗರ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ