AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆ ನಡೆಯಿತು ಅಚ್ಚರಿಯ ಘಟನೆ; ವೈರಲ್ ವಿಡಿಯೋ ಇಲ್ಲಿದೆ

ಉತ್ತರ ಪ್ರದೇಶದ ಮುಜರಾಯಿ ಸರ್ಕಾರಿ ಇಂಟರ್ ಕಾಲೇಜು ಮೈದಾನದಲ್ಲಿ ವಿಜಯದಶಮಿ ನಿಮಿತ್ತ ರಾವಣನ ಪ್ರತಿಕೃತಿ ದಹಿಸುವಾಗ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Viral Video: ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆ ನಡೆಯಿತು ಅಚ್ಚರಿಯ ಘಟನೆ; ವೈರಲ್ ವಿಡಿಯೋ ಇಲ್ಲಿದೆ
ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚಿರುವ ದೃಶ್ಯ
TV9 Web
| Edited By: |

Updated on: Oct 06, 2022 | 11:25 AM

Share

ನವದೆಹಲಿ: ನವರಾತ್ರಿಯ (Navaratri) ಕೊನೆಯ ದಿನ ರಾವಣನ ಸಂಹಾರ ಮಾಡುವುದು ಪದ್ಧತಿ. ವಿಜಯದಶಮಿಯಂದು (Vijayadashami) ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚಿ ಜನರು 9 ದಸರಾ (Dasara) ಉತ್ಸವ ಆಚರಿಸುತ್ತಾರೆ. ಆದರೆ, ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಬುಧವಾರ ದಸರಾ ಕಾರ್ಯಕ್ರಮದ ವೇಳೆ ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆ ವಿಚಿತ್ರವಾದ ಘಟನೆಯೊಂದು ನಡೆದಿದೆ. ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚಿದಾಗ ಆ ಬೆಂಕಿಯ ಕಿಡಿಗಳು ಹಾರಿಹೋಗಿ ಅಲ್ಲಿ ಸೇರಿದ್ದ ಜನರು, ಪೊಲೀಸರ ಮೇಲೆ ಬಿದ್ದಿವೆ. ಇದರಿಂದ ಜನರೆಲ್ಲ ದಿಕ್ಕಾಪಾಲಾಗಿ ಓಡಿದ್ದಾರೆ.

ಉತ್ತರ ಪ್ರದೇಶದ ಮುಜರಾಯಿ ಸರ್ಕಾರಿ ಇಂಟರ್ ಕಾಲೇಜು ಮೈದಾನದಲ್ಲಿ ವಿಜಯದಶಮಿ ನಿಮಿತ್ತ ರಾವಣನ ಪ್ರತಿಕೃತಿ ದಹಿಸುವಾಗ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ರಾವಣನ ಪ್ರತಿಕೃತಿಗಳನ್ನು ದಹಿಸುವ ಮೂಲಕ ಆಚರಿಸಲಾಗುವ ದಸರಾವನ್ನು ವೀಕ್ಷಿಸಲು ನೆರೆದಿದ್ದ ದೊಡ್ಡ ಜನಸಮೂಹದ ಮೇಲೆ ರಾವಣನ ಪ್ರತಿಕೃತಿಯಿಂದ ಬೆಂಕಿ ಹಾರಿ ಬೀಳುವುದನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನೂ ಓದಿ: ಐತಿಹಾಸಿಕ ಕುಲು ದಸರಾದಲ್ಲಿ ಪಾಲ್ಗೊಂಡ ಮೊದಲ ಪ್ರಧಾನಿಯೆಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ನರೇಂದ್ರ ಮೋದಿ

ಕೇವಲ ಜನಸಾಮಾನ್ಯರಿಗೆ ಮಾತ್ರವಲ್ಲದೆ ಪೊಲೀಸ್ ಅಧಿಕಾರಿಗಳು ಕೂಡ ರಕ್ಷಣೆಗಾಗಿ ಓಡುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ರಾವಣನ ಪ್ರತಿಕೃತಿಯಿಂದ ಬೆಂಕಿ ಹಾರುತ್ತಿರುವುದು ಕಡಿಮೆಯಾದ ಬಳಿಕ ಗೂಳಿಯೊಂದು ಮೈದಾನಕ್ಕೆ ನುಗ್ಗಿ ಮತ್ತಷ್ಟು ಆತಂಕ ಮೂಡಿಸಿತು. ಕೂಡಲೇ ಅಧಿಕಾರಿಗಳು ಆ ಗೂಳಿಯನ್ನು ಎಳೆದುಕೊಂಡು ಹೋಗಿದ್ದಾರೆ.

ಹರಿಯಾಣದ ಯಮುನಾನಗರದಲ್ಲಿ ಇದೇ ರೀತಿಯ ಘಟನೆ ವರದಿಯಾಗಿದ್ದು, ರಾವಣನ ದಹನ ಪ್ರತಿಕೃತಿ ಪ್ರೇಕ್ಷಕರ ಮೇಲೆ ಬಿದ್ದಿದೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಯಮುನಾನಗರ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ