Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದಂಡದಿಂದ ಪಾರಾಗಲು ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು, 4 ಕಿ.ಮೀ ಎಳೆದುಕೊಂಡು ಹೋದ ಚಾಲಕ

ದಂಡ ಪಾವತಿಸದೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕಾರು ಚಾಲಕ ಟ್ರಾಫಿಕ್ ಪೊಲೀಸ್ ಅನ್ನು ಎಳೆದುಕೊಂಡು ಹೋಗುತ್ತಿರುವ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

Viral Video: ದಂಡದಿಂದ ಪಾರಾಗಲು ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು, 4 ಕಿ.ಮೀ ಎಳೆದುಕೊಂಡು ಹೋದ ಚಾಲಕ
ಮಧ್ಯಪ್ರದೇಶದಲ್ಲಿ ಟ್ರಾಫಿಕ್ ಪೊಲೀಸ್​ ಅನ್ನು ಎಳೆದುಕೊಂಡು ಹೋದ ಕಾರುImage Credit source: tv9
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 13, 2022 | 11:44 AM

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ (Indore) ಚಲನ್​ನಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಾರು ಚಾಲಕನೊಬ್ಬ ಟ್ರಾಫಿಕ್ ಪೋಲೀಸ್ ಅನ್ನು ತನ್ನ ಕಾರಿನ ಬಾನೆಟ್ ಮೇಲೆ ಹಾಕಿಕೊಂಡು, ಸುಮಾರು 4 ಕಿ.ಮೀ.ವರೆಗೆ ಎಳೆದುಕೊಂಡು ಹೋಗಿದ್ದಾನೆ. ಆ ಕಾರು ಚಾಲಕ ಕಾರನ್ನು ಚಾಲನೆ ಮಾಡುವಾಗ ಮೊಬೈಲ್ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಟ್ರಾಫಿಕ್ ಪೊಲೀಸ್ ದಂಡವನ್ನು ಹಾಕಲು ಅಡ್ಡಗಟ್ಟಿದ್ದರು. ಆಗ ಟ್ರಾಫಿಕ್ ಪೊಲೀಸ್​ನಿಂದ (Traffic Police) ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆತ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಆ ವೇಳೆ ಆ ಪೊಲೀಸ್ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ.

ದಂಡ ಪಾವತಿಸದೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕಾರು ಚಾಲಕ ಟ್ರಾಫಿಕ್ ಪೊಲೀಸ್ ಅನ್ನು ಎಳೆದುಕೊಂಡು ಹೋಗುತ್ತಿರುವ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಇಂದೋರ್​​ನ ಜನನಿಬಿಡ ಟ್ರಾಫಿಕ್ ಸಿಗ್ನಲ್‌ನಲ್ಲಿ ಈ ಘಟನೆ ನಡೆದಿದ್ದು, ಚಾಲಕನ ವೇಗದ ಚಾಲನೆಯಿಂದಾಗಿ ಪೊಲೀಸರು ಪ್ರಾಣಾಪಾಯದಿಂದ ಕಾರಿನ ಮುಂಭಾಗದಲ್ಲಿ ಬಿದ್ದು ನೇತಾಡುತ್ತಿರುವುದನ್ನು ನೋಡಬಹುದು.

ಇದನ್ನೂ ಓದಿ: ಕಾರಿನ ಬಾನೆಟ್ ಮೇಲೆ ಆಯಿಲ್ ಸುರಿದು ಅದರ ಮಾಲೀಕನ ಗಮನ ಅದರತ್ತ ಸೆಳೆದ ಕಳ್ಳರು 18 ಲಕ್ಷ ರೂ. ಹಾರಿಸಿಕೊಂಡು ಪರಾರಿಯಾದರು!

“ಫೋನಿನಲ್ಲಿ ಮಾತನಾಡುತ್ತಾ ಕಾರನ್ನು ಓಡಿಸುತ್ತಿದ್ದ ವ್ಯಕ್ತಿಯನ್ನು ನಾನು ನಿಲ್ಲಿಸಿದೆ. ನಾನು ಚಲನ್ ಪಾವತಿಸಲು ಕೇಳಿದೆ. ಆದರೆ ಅವನು ಪಾವತಿಸಲು ನಿರಾಕರಿಸಿದನು. ಆ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದನು. ನಾನು ಅವನ ಕಾರಿನ ಎದುರು ಹೋಗಿ ತಡೆಯಲು ಪ್ರಯತ್ನಿಸಿದಾಗ ನಾನು ಬಾನೆಟ್ ಮೇಲೆ ಬಿದ್ದೆ. ಆಗ ಆತ ನನ್ನನ್ನು ಸುಮಾರು 4ವರೆಗೆ ಎಳೆದುಕೊಂಡು ಹೋದ” ಎಂದು ಶಿವ ಸಿಂಗ್ ಚೌಹಾಣ್ ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!