AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದಂಡದಿಂದ ಪಾರಾಗಲು ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು, 4 ಕಿ.ಮೀ ಎಳೆದುಕೊಂಡು ಹೋದ ಚಾಲಕ

ದಂಡ ಪಾವತಿಸದೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕಾರು ಚಾಲಕ ಟ್ರಾಫಿಕ್ ಪೊಲೀಸ್ ಅನ್ನು ಎಳೆದುಕೊಂಡು ಹೋಗುತ್ತಿರುವ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

Viral Video: ದಂಡದಿಂದ ಪಾರಾಗಲು ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು, 4 ಕಿ.ಮೀ ಎಳೆದುಕೊಂಡು ಹೋದ ಚಾಲಕ
ಮಧ್ಯಪ್ರದೇಶದಲ್ಲಿ ಟ್ರಾಫಿಕ್ ಪೊಲೀಸ್​ ಅನ್ನು ಎಳೆದುಕೊಂಡು ಹೋದ ಕಾರುImage Credit source: tv9
TV9 Web
| Edited By: |

Updated on: Dec 13, 2022 | 11:44 AM

Share

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ (Indore) ಚಲನ್​ನಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಾರು ಚಾಲಕನೊಬ್ಬ ಟ್ರಾಫಿಕ್ ಪೋಲೀಸ್ ಅನ್ನು ತನ್ನ ಕಾರಿನ ಬಾನೆಟ್ ಮೇಲೆ ಹಾಕಿಕೊಂಡು, ಸುಮಾರು 4 ಕಿ.ಮೀ.ವರೆಗೆ ಎಳೆದುಕೊಂಡು ಹೋಗಿದ್ದಾನೆ. ಆ ಕಾರು ಚಾಲಕ ಕಾರನ್ನು ಚಾಲನೆ ಮಾಡುವಾಗ ಮೊಬೈಲ್ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಟ್ರಾಫಿಕ್ ಪೊಲೀಸ್ ದಂಡವನ್ನು ಹಾಕಲು ಅಡ್ಡಗಟ್ಟಿದ್ದರು. ಆಗ ಟ್ರಾಫಿಕ್ ಪೊಲೀಸ್​ನಿಂದ (Traffic Police) ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆತ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಆ ವೇಳೆ ಆ ಪೊಲೀಸ್ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ.

ದಂಡ ಪಾವತಿಸದೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕಾರು ಚಾಲಕ ಟ್ರಾಫಿಕ್ ಪೊಲೀಸ್ ಅನ್ನು ಎಳೆದುಕೊಂಡು ಹೋಗುತ್ತಿರುವ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಇಂದೋರ್​​ನ ಜನನಿಬಿಡ ಟ್ರಾಫಿಕ್ ಸಿಗ್ನಲ್‌ನಲ್ಲಿ ಈ ಘಟನೆ ನಡೆದಿದ್ದು, ಚಾಲಕನ ವೇಗದ ಚಾಲನೆಯಿಂದಾಗಿ ಪೊಲೀಸರು ಪ್ರಾಣಾಪಾಯದಿಂದ ಕಾರಿನ ಮುಂಭಾಗದಲ್ಲಿ ಬಿದ್ದು ನೇತಾಡುತ್ತಿರುವುದನ್ನು ನೋಡಬಹುದು.

ಇದನ್ನೂ ಓದಿ: ಕಾರಿನ ಬಾನೆಟ್ ಮೇಲೆ ಆಯಿಲ್ ಸುರಿದು ಅದರ ಮಾಲೀಕನ ಗಮನ ಅದರತ್ತ ಸೆಳೆದ ಕಳ್ಳರು 18 ಲಕ್ಷ ರೂ. ಹಾರಿಸಿಕೊಂಡು ಪರಾರಿಯಾದರು!

“ಫೋನಿನಲ್ಲಿ ಮಾತನಾಡುತ್ತಾ ಕಾರನ್ನು ಓಡಿಸುತ್ತಿದ್ದ ವ್ಯಕ್ತಿಯನ್ನು ನಾನು ನಿಲ್ಲಿಸಿದೆ. ನಾನು ಚಲನ್ ಪಾವತಿಸಲು ಕೇಳಿದೆ. ಆದರೆ ಅವನು ಪಾವತಿಸಲು ನಿರಾಕರಿಸಿದನು. ಆ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದನು. ನಾನು ಅವನ ಕಾರಿನ ಎದುರು ಹೋಗಿ ತಡೆಯಲು ಪ್ರಯತ್ನಿಸಿದಾಗ ನಾನು ಬಾನೆಟ್ ಮೇಲೆ ಬಿದ್ದೆ. ಆಗ ಆತ ನನ್ನನ್ನು ಸುಮಾರು 4ವರೆಗೆ ಎಳೆದುಕೊಂಡು ಹೋದ” ಎಂದು ಶಿವ ಸಿಂಗ್ ಚೌಹಾಣ್ ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ