AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋದ ಟ್ರಕ್; ಭಯಾನಕ ವಿಡಿಯೋ ವೈರಲ್

ದೇವೇಂದ್ರ ಸಿಂಗ್ ಅವರ ಕಾರನ್ನು ಮೈನ್​ಪುರಿಯ ಸದರ್ ಕೊಟ್ವಾಲಿ ಪ್ರದೇಶದ ಅವರ ಮನೆಯ ಬಳಿ ಟ್ರಕ್ ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು.

ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋದ ಟ್ರಕ್; ಭಯಾನಕ ವಿಡಿಯೋ ವೈರಲ್
ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋದ ಟ್ರಕ್
TV9 Web
| Edited By: |

Updated on:Aug 08, 2022 | 1:32 PM

Share

ನವದೆಹಲಿ: ಸಮಾಜವಾದಿ ಪಕ್ಷದ ಮೈನ್​ಪುರಿ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ (Devendra Singh) ಅವರ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದ ನಂತರ ಅವರ ಕಾರನ್ನು ಸುಮಾರು 500 ಮೀಟರ್‌ಗಳವರೆಗೆ ಎಳೆದ ಘಟನೆ ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ನಡೆದಿದೆ. ಈ ಘಟನೆಯಿಂದ ಸಮಾಜವಾದಿ ಪಕ್ಷದ (Samajwadi Party) ನಾಯಕನಿಗೆ ಗಾಯಗಳಾಗಿದ್ದು, ಅಚ್ಚರಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ವೈರಲ್ (Video Viral) ಆಗಿದೆ.

ದೇವೇಂದ್ರ ಸಿಂಗ್ ಅವರ ಕಾರನ್ನು ಮೈನ್​ಪುರಿಯ ಸದರ್ ಕೊಟ್ವಾಲಿ ಪ್ರದೇಶದ ಅವರ ಮನೆಯ ಬಳಿ ಟ್ರಕ್ ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗುವುದನ್ನು ಕಾಣಬಹುದು. ನಂತರ ಸ್ಥಳೀಯರು ಕಾರಿನಲ್ಲಿದ್ದ ದೇವೇಂದ್ರ ಸಿಂಗ್ ಅವರನ್ನು ರಕ್ಷಿಸಿದರು. ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.

ಈ ಅಪಘಾತದ ವಿಡಿಯೋದಲ್ಲಿ ದೇವೇಂದ್ರ ಸಿಂಗ್ ಅವರ ವಾಹನವನ್ನು ನಿಲ್ಲಿಸುವ ಮೊದಲು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗುವುದನ್ನು ನೋಡಬಹುದು. ಕಾರು ನಿಂತ ತಕ್ಷಣ ರಸ್ತೆಯಲ್ಲಿದ್ದ ಹಲವರು ಸ್ಥಳಕ್ಕೆ ಧಾವಿಸಿ ಸಮಾಜವಾದಿ ಪಕ್ಷದ ನಾಯಕ ದೇವೇಂದ್ರ ಸಿಂಗ್ ಅವರನ್ನು ರಕ್ಷಿಸಲು ಯತ್ನಿಸಿದರು.

ಇದನ್ನೂ ಓದಿ: ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ನಾಯಕರ ಒಡೆತನದ ಆಸ್ತಿ ಮೇಲೆ ಐಟಿ ದಾಳಿ

ಭಾನುವಾರ ರಾತ್ರಿ ದೇವೇಂದ್ರ ಸಿಂಗ್ ಅವರು ಕರ್ಹಾಲ್ ರಸ್ತೆಯ ಮೂಲಕ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಮೈನ್‌ಪುರಿ ಸದರ್ ಕೊಟ್ವಾಲಿ ಪ್ರದೇಶದ ಭದಾವರ್ ಹೌಸ್ ಬಳಿ ಈ ಘಟನೆ ನಡೆದಿದೆ. ಘಟನೆ ವೇಳೆ ಅವರು ಕಾರಿನಲ್ಲಿ ಒಬ್ಬರೇ ಇದ್ದರು. ಪೊಲೀಸರ ಪ್ರಕಾರ, ಟ್ರಕ್ ಚಾಲಕ ಇಟಾವಾ ಮೂಲದವನು.

“ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ, ನಂತರ ಅದನ್ನು 500 ಮೀಟರ್‌ಗೂ ಹೆಚ್ಚು ಎಳೆದಿದೆ. ಇಟಾವಾದಲ್ಲಿ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಎಸ್‌ಪಿ ಕಮಲೇಶ್ ದೀಕ್ಷಿತ್ ಹೇಳಿದ್ದಾರೆ.

ಅಪಘಾತದ ನಂತರ, ದೇವೇಂದ್ರ ಯಾದವ್ ಮೈನ್‌ಪುರಿ ಸದರ್ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Mon, 8 August 22

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್