AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋದ ಟ್ರಕ್; ಭಯಾನಕ ವಿಡಿಯೋ ವೈರಲ್

ದೇವೇಂದ್ರ ಸಿಂಗ್ ಅವರ ಕಾರನ್ನು ಮೈನ್​ಪುರಿಯ ಸದರ್ ಕೊಟ್ವಾಲಿ ಪ್ರದೇಶದ ಅವರ ಮನೆಯ ಬಳಿ ಟ್ರಕ್ ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು.

ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋದ ಟ್ರಕ್; ಭಯಾನಕ ವಿಡಿಯೋ ವೈರಲ್
ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋದ ಟ್ರಕ್
TV9 Web
| Edited By: |

Updated on:Aug 08, 2022 | 1:32 PM

Share

ನವದೆಹಲಿ: ಸಮಾಜವಾದಿ ಪಕ್ಷದ ಮೈನ್​ಪುರಿ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ (Devendra Singh) ಅವರ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದ ನಂತರ ಅವರ ಕಾರನ್ನು ಸುಮಾರು 500 ಮೀಟರ್‌ಗಳವರೆಗೆ ಎಳೆದ ಘಟನೆ ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ನಡೆದಿದೆ. ಈ ಘಟನೆಯಿಂದ ಸಮಾಜವಾದಿ ಪಕ್ಷದ (Samajwadi Party) ನಾಯಕನಿಗೆ ಗಾಯಗಳಾಗಿದ್ದು, ಅಚ್ಚರಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ವೈರಲ್ (Video Viral) ಆಗಿದೆ.

ದೇವೇಂದ್ರ ಸಿಂಗ್ ಅವರ ಕಾರನ್ನು ಮೈನ್​ಪುರಿಯ ಸದರ್ ಕೊಟ್ವಾಲಿ ಪ್ರದೇಶದ ಅವರ ಮನೆಯ ಬಳಿ ಟ್ರಕ್ ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗುವುದನ್ನು ಕಾಣಬಹುದು. ನಂತರ ಸ್ಥಳೀಯರು ಕಾರಿನಲ್ಲಿದ್ದ ದೇವೇಂದ್ರ ಸಿಂಗ್ ಅವರನ್ನು ರಕ್ಷಿಸಿದರು. ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.

ಈ ಅಪಘಾತದ ವಿಡಿಯೋದಲ್ಲಿ ದೇವೇಂದ್ರ ಸಿಂಗ್ ಅವರ ವಾಹನವನ್ನು ನಿಲ್ಲಿಸುವ ಮೊದಲು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗುವುದನ್ನು ನೋಡಬಹುದು. ಕಾರು ನಿಂತ ತಕ್ಷಣ ರಸ್ತೆಯಲ್ಲಿದ್ದ ಹಲವರು ಸ್ಥಳಕ್ಕೆ ಧಾವಿಸಿ ಸಮಾಜವಾದಿ ಪಕ್ಷದ ನಾಯಕ ದೇವೇಂದ್ರ ಸಿಂಗ್ ಅವರನ್ನು ರಕ್ಷಿಸಲು ಯತ್ನಿಸಿದರು.

ಇದನ್ನೂ ಓದಿ: ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ನಾಯಕರ ಒಡೆತನದ ಆಸ್ತಿ ಮೇಲೆ ಐಟಿ ದಾಳಿ

ಭಾನುವಾರ ರಾತ್ರಿ ದೇವೇಂದ್ರ ಸಿಂಗ್ ಅವರು ಕರ್ಹಾಲ್ ರಸ್ತೆಯ ಮೂಲಕ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಮೈನ್‌ಪುರಿ ಸದರ್ ಕೊಟ್ವಾಲಿ ಪ್ರದೇಶದ ಭದಾವರ್ ಹೌಸ್ ಬಳಿ ಈ ಘಟನೆ ನಡೆದಿದೆ. ಘಟನೆ ವೇಳೆ ಅವರು ಕಾರಿನಲ್ಲಿ ಒಬ್ಬರೇ ಇದ್ದರು. ಪೊಲೀಸರ ಪ್ರಕಾರ, ಟ್ರಕ್ ಚಾಲಕ ಇಟಾವಾ ಮೂಲದವನು.

“ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ, ನಂತರ ಅದನ್ನು 500 ಮೀಟರ್‌ಗೂ ಹೆಚ್ಚು ಎಳೆದಿದೆ. ಇಟಾವಾದಲ್ಲಿ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಎಸ್‌ಪಿ ಕಮಲೇಶ್ ದೀಕ್ಷಿತ್ ಹೇಳಿದ್ದಾರೆ.

ಅಪಘಾತದ ನಂತರ, ದೇವೇಂದ್ರ ಯಾದವ್ ಮೈನ್‌ಪುರಿ ಸದರ್ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Mon, 8 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ