AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಡವಾಗಿ ಬಂದ ಶಿಕ್ಷಕಿಗೆ ಚಪ್ಪಲಿಯಲ್ಲಿ ಥಳಿಸಿದ ಪ್ರಿನ್ಸಿಪಾಲ್; ಶಾಕಿಂಗ್ ವಿಡಿಯೋ ವೈರಲ್

ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರು ಮಹಿಳಾ ಶಿಕ್ಷಕಿಗೆ ಥಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಆ ಪ್ರಾಂಶುಪಾಲರನ್ನುಅಮಾನತು ಮಾಡಲಾಗಿದೆ.

Viral Video: ತಡವಾಗಿ ಬಂದ ಶಿಕ್ಷಕಿಗೆ ಚಪ್ಪಲಿಯಲ್ಲಿ ಥಳಿಸಿದ ಪ್ರಿನ್ಸಿಪಾಲ್; ಶಾಕಿಂಗ್ ವಿಡಿಯೋ ವೈರಲ್
ಶಿಕ್ಷಕಿಗೆ ಚಪ್ಪಲಿಯಿಂದ ಥಳಿಸುತ್ತಿರುವ ಪ್ರಿನ್ಸಿಪಾಲ್Image Credit source: DNA
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 25, 2022 | 10:29 AM

ಲಖೀಂಪುರ ಖೇರಿ: ಶಾಲೆಗೆ ತಡವಾಗಿ ಬಂದಿದ್ದಕ್ಕೆ ಮಹಿಳಾ ಶಿಕ್ಷಕಿಗೆ ಪ್ರಾಂಶುಪಾಲರು ತನ್ನ ಚಪ್ಪಲಿಯಿಂದ ಥಳಿಸಿದ ಆಘಾತಕಾರಿ ಘಟನೆ (Shocking News) ಉತ್ತರ ಪ್ರದೇಶದ ಲಖಿಂಪುರ ಖೇರಿ (Lakhimpur Kheri) ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋವನ್ನು ಎಎನ್‌ಐ ಟ್ವಿಟ್ಟರ್ ಪೇಜ್‌ನಲ್ಲಿ ಹಂಚಿಕೊಂಡಿದ್ದು, ವೈರಲ್ ಆಗಿದೆ. ಶಾಲೆಯ ಸಹ ಶಿಕ್ಷಕಿಯನ್ನು ಥಳಿಸಿ, ಅಮಾನುಷವಾಗಿ ನಡೆಸಿಕೊಂಡ ಆರೋಪದ ಮೇಲೆ ಲಖೀಂಪುರ ಬ್ಲಾಕ್‌ನ ಸರ್ಕಾರಿ ಶಾಲೆಯ ಪ್ರಾಂಶುಪಾಲರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ಶಾಲೆಯ ಮಹಿಳಾ ಶಿಕ್ಷಕಿ ಮೇಲೆ ದೌರ್ಜನ್ಯ ಎಸಗಿರುವುದು, ಅವರ ಹುದ್ದೆ ಮತ್ತು ಇಲಾಖೆಯ ಗೌರವವನ್ನು ಹಾಳುಮಾಡಿರುವುದು ಮತ್ತು ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಪ್ರಾಂಶುಪಾಲ ಅಜೀತ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮುಖ್ಯ ಶಿಕ್ಷಕರು ಮಹಿಳಾ ಶಿಕ್ಷಕಿಗೆ ಥಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಈ ಸಂಬಂಧ ಲಖೀಂಪುರ ಬ್ಲಾಕ್ ಶಿಕ್ಷಣಾಧಿಕಾರಿ ಸುಭಾಷ್ ಚಂದ್ರ ಖೇರಿ ಮೂಲ ಶಿಕ್ಷಣಾಧಿಕಾರಿ ಲಕ್ಷ್ಮೀಕಾಂತ ಪಾಂಡೆ ಅವರಿಗೆ ವರದಿ ಕಳುಹಿಸಿದ್ದಾರೆ.

ಇದನ್ನೂ ಓದಿ: Viral Video: ಮದುವೆಯಲ್ಲಿ ಗೆಳೆಯನನ್ನೇ ಶೂಟ್ ಮಾಡಿದ ಮದುಮಗ; ಹಸೆಮಣೆ ಏರಬೇಕಾದ ವರ ಜೈಲು ಸೇರಿದ

ಈ ಪ್ರಕರಣದ ತನಿಖೆ ನಡೆಯುವವರೆಗೆ ತಪ್ಪಿತಸ್ಥ ಪ್ರಾಂಶುಪಾರನ್ನು ಪಾಸ್‌ಗಾವಾನ್ ಜೂನಿಯರ್ ಹೈಸ್ಕೂಲ್‌ಗೆ ಲಗತ್ತಿಸಲಾಗಿದೆ ಎಂದಿರುವ ಲಕ್ಷ್ಮಿಕಾಂತ್ ಪಾಂಡೆ, ಅಮಾನತುಗೊಂಡ ಮುಖ್ಯ ಶಿಕ್ಷಕರ ಹಾಜರಾತಿ ವರದಿಯನ್ನು ಪ್ರತಿದಿನ ತಮ್ಮ ಕಚೇರಿಗೆ ಸಲ್ಲಿಸುವಂತೆ ಬಿಇಒಗೆ ಸೂಚಿಸಲಾಗಿದೆ ಎಂದು ಹೇಳಿದರು. ಈ ಪ್ರಕರಣದ ತನಿಖೆ ನಡೆಸಿ ಆದಷ್ಟು ಬೇಗ ವರದಿ ಸಲ್ಲಿಸಲು ಮೂವರು ಸದಸ್ಯರ ತಂಡವನ್ನು ಕೂಡ ರಚಿಸಲಾಗಿದೆ.

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ