AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೀರತ್​ನಲ್ಲಿ ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಇರಿದು ಕೊಂದ ದುಷ್ಟರು; ಸಿಸಿಟಿವಿ ವಿಡಿಯೋ ವೈರಲ್

Crime News Today: ಶನಿವಾರ ನನ್ನ ಮಗ ತನ್ನ ಚಿಕ್ಕಪ್ಪ ನೌಶಾದ್, ಜಾವೇದ್ ಮತ್ತು ಶಹಜಾದ್ ಅವರೊಂದಿಗೆ ಮನೆಯಲ್ಲಿ ಮದ್ಯ ಸೇವಿಸಿ ಜಗಳವಾಡಿದ್ದ. ಅದರಿಂದಲೇ ಕೊಲೆ ನಡೆದಿರುವ ಸಾಧ್ಯತೆಯಿದೆ ಎಂದು ಸಾಜಿದ್​ನ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

Viral Video: ಮೀರತ್​ನಲ್ಲಿ ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಇರಿದು ಕೊಂದ ದುಷ್ಟರು; ಸಿಸಿಟಿವಿ ವಿಡಿಯೋ ವೈರಲ್
ರಸ್ತೆಯಲ್ಲಿ ಯುವಕನಿಗೆ ಥಳಿಸಿದ ಆರೋಪಿಗಳು
TV9 Web
| Edited By: |

Updated on: Apr 25, 2022 | 12:59 PM

Share

ಮೀರತ್: ಉತ್ತರ ಪ್ರದೇಶದ ಮೀರತ್‌ನಲ್ಲಿ ನಡುರಸ್ತೆಯಲ್ಲಿ ಮೂವರು ವ್ಯಕ್ತಿಗಳು ವ್ಯಕ್ತಿಯೊಬ್ಬನನ್ನು ಇರಿದು (Murder) ಕೊಂದಿರುವ ಆಘಾತಕಾರಿ ವಿಡಿಯೋ (Shocking Video) ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಹಿಂದಿನ ದಿನ ಆಲ್ಕೋಹಾಲ್ ಕುಡಿದಾಗ ನಡೆದ ಗಲಾಟೆಯ ವಿಚಾರವಾಗಿ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಆತನನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಮೀರತ್​ನ ಹಳೆನಗರ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಲಿಸಾರಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಫಿರೋಜ್ ನಗರದ 25 ವರ್ಷದ ನಿವಾಸಿ ಸಾಜಿದ್ ಬ್ರಹ್ಮಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಇತ್ತೆಫಾಕ್ ನಗರಕ್ಕೆ ಯಾವುದೋ ಕೆಲಸಕ್ಕಾಗಿ ಹೋಗಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕೆಲವು ದಾಳಿಕೋರರು ಸಾಜಿದ್‌ನನ್ನು ಹಿಡಿದು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ.

ಆ ವೇಳೆ ಸಾಜಿದ್ ರಸ್ತೆಯಿಂದ ಮೇಲೇಳಲು ಯತ್ನಿಸಿದಾಗ ದಾಳಿಕೋರರಲ್ಲಿ ಒಬ್ಬ ಆತನಿಗೆ ಮತ್ತೊಮ್ಮೆ ಚಾಕುವಿನಿಂದ ಇರಿದಿದ್ದಾರೆ. ಇಡೀ ಪ್ರಸಂಗ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆಯ ನಂತರ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಮೃತಪಟ್ಟಿದ್ದಾರೆ. ಈ ಘಟನೆಯ ಲೈವ್ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಶನಿವಾರ ನನ್ನ ಮಗ ತನ್ನ ಚಿಕ್ಕಪ್ಪ ನೌಶಾದ್, ಜಾವೇದ್ ಮತ್ತು ಶಹಜಾದ್ ಅವರೊಂದಿಗೆ ಮನೆಯಲ್ಲಿ ಮದ್ಯ ಸೇವಿಸಿ ಜಗಳವಾಡಿದ್ದಾನೆ ಎಂದು ಸಾಜಿದ್​ನ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ, ತಡರಾತ್ರಿ ಕುಟುಂಬಸ್ಥರು ರಾಜಿ ಮಾಡಿಕೊಂಡಿದ್ದರು. ಈ ದ್ವೇಷದಿಂದಲೇ ಸಾಜಿದ್ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Murder: ಹೆತ್ತ ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಾಯಿ; ಕಾರಣವೇನು ಗೊತ್ತಾ?

Murder: ಗಂಡನನ್ನು ಕೊಂದು, ಶವವನ್ನು ಗೋಣಿಚೀಲದಲ್ಲಿ ತುಂಬಿ ಪಾರ್ಕ್​ನಲ್ಲಿ ಎಸೆದ ಹೆಂಡತಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?