AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೀರತ್​ನಲ್ಲಿ ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಇರಿದು ಕೊಂದ ದುಷ್ಟರು; ಸಿಸಿಟಿವಿ ವಿಡಿಯೋ ವೈರಲ್

Crime News Today: ಶನಿವಾರ ನನ್ನ ಮಗ ತನ್ನ ಚಿಕ್ಕಪ್ಪ ನೌಶಾದ್, ಜಾವೇದ್ ಮತ್ತು ಶಹಜಾದ್ ಅವರೊಂದಿಗೆ ಮನೆಯಲ್ಲಿ ಮದ್ಯ ಸೇವಿಸಿ ಜಗಳವಾಡಿದ್ದ. ಅದರಿಂದಲೇ ಕೊಲೆ ನಡೆದಿರುವ ಸಾಧ್ಯತೆಯಿದೆ ಎಂದು ಸಾಜಿದ್​ನ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

Viral Video: ಮೀರತ್​ನಲ್ಲಿ ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಇರಿದು ಕೊಂದ ದುಷ್ಟರು; ಸಿಸಿಟಿವಿ ವಿಡಿಯೋ ವೈರಲ್
ರಸ್ತೆಯಲ್ಲಿ ಯುವಕನಿಗೆ ಥಳಿಸಿದ ಆರೋಪಿಗಳು
TV9 Web
| Edited By: |

Updated on: Apr 25, 2022 | 12:59 PM

Share

ಮೀರತ್: ಉತ್ತರ ಪ್ರದೇಶದ ಮೀರತ್‌ನಲ್ಲಿ ನಡುರಸ್ತೆಯಲ್ಲಿ ಮೂವರು ವ್ಯಕ್ತಿಗಳು ವ್ಯಕ್ತಿಯೊಬ್ಬನನ್ನು ಇರಿದು (Murder) ಕೊಂದಿರುವ ಆಘಾತಕಾರಿ ವಿಡಿಯೋ (Shocking Video) ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಹಿಂದಿನ ದಿನ ಆಲ್ಕೋಹಾಲ್ ಕುಡಿದಾಗ ನಡೆದ ಗಲಾಟೆಯ ವಿಚಾರವಾಗಿ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಆತನನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಮೀರತ್​ನ ಹಳೆನಗರ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಲಿಸಾರಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಫಿರೋಜ್ ನಗರದ 25 ವರ್ಷದ ನಿವಾಸಿ ಸಾಜಿದ್ ಬ್ರಹ್ಮಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಇತ್ತೆಫಾಕ್ ನಗರಕ್ಕೆ ಯಾವುದೋ ಕೆಲಸಕ್ಕಾಗಿ ಹೋಗಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕೆಲವು ದಾಳಿಕೋರರು ಸಾಜಿದ್‌ನನ್ನು ಹಿಡಿದು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ.

ಆ ವೇಳೆ ಸಾಜಿದ್ ರಸ್ತೆಯಿಂದ ಮೇಲೇಳಲು ಯತ್ನಿಸಿದಾಗ ದಾಳಿಕೋರರಲ್ಲಿ ಒಬ್ಬ ಆತನಿಗೆ ಮತ್ತೊಮ್ಮೆ ಚಾಕುವಿನಿಂದ ಇರಿದಿದ್ದಾರೆ. ಇಡೀ ಪ್ರಸಂಗ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆಯ ನಂತರ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಮೃತಪಟ್ಟಿದ್ದಾರೆ. ಈ ಘಟನೆಯ ಲೈವ್ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಶನಿವಾರ ನನ್ನ ಮಗ ತನ್ನ ಚಿಕ್ಕಪ್ಪ ನೌಶಾದ್, ಜಾವೇದ್ ಮತ್ತು ಶಹಜಾದ್ ಅವರೊಂದಿಗೆ ಮನೆಯಲ್ಲಿ ಮದ್ಯ ಸೇವಿಸಿ ಜಗಳವಾಡಿದ್ದಾನೆ ಎಂದು ಸಾಜಿದ್​ನ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ, ತಡರಾತ್ರಿ ಕುಟುಂಬಸ್ಥರು ರಾಜಿ ಮಾಡಿಕೊಂಡಿದ್ದರು. ಈ ದ್ವೇಷದಿಂದಲೇ ಸಾಜಿದ್ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Murder: ಹೆತ್ತ ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಾಯಿ; ಕಾರಣವೇನು ಗೊತ್ತಾ?

Murder: ಗಂಡನನ್ನು ಕೊಂದು, ಶವವನ್ನು ಗೋಣಿಚೀಲದಲ್ಲಿ ತುಂಬಿ ಪಾರ್ಕ್​ನಲ್ಲಿ ಎಸೆದ ಹೆಂಡತಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​