AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ವಿಡಿಯೋ: ಕಾರ್ಮಿಕನ ಶವವನ್ನು ಕಸದ ಗಾಡಿಗೆ ಹಾಕಿ ಸಾಗಿಸಿದ ಅಧಿಕಾರಿಗಳು

viral video: ದೆಹಲಿಯಲ್ಲಿದ್ದ ಕಾರ್ಮಿಕ ಸುಸ್ತು, ಆಯಾಸ, ಬಳಲಿಕೆಯಿದೆ ಎಂದು ಸ್ವಗ್ರಾಮಕ್ಕೆ ವಾಪಸಾಗಿದ್ದ. ಆದರೆ ಆತನಿಗೆ ಚಿಕಿತ್ಸೆ ಕೊಡುವ ಮೊದಲೇ ಮೃತಪಟ್ಟ ಎಂದು ಕಾರ್ಮಿಕನ ಪುತ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ ಇದರಲ್ಲಿ ಕಾರ್ಮಿಕನ ಕುಟುಂಬಸ್ಥರೂ ತಪ್ಪಿತಸ್ಥರು ಎಂಬ ಮಾತುಗಳು ಕೇಳಿಬಂದಿದೆ.

ವೈರಲ್ ವಿಡಿಯೋ: ಕಾರ್ಮಿಕನ ಶವವನ್ನು ಕಸದ ಗಾಡಿಗೆ ಹಾಕಿ ಸಾಗಿಸಿದ ಅಧಿಕಾರಿಗಳು
ವಿಡಿಯೋ: ಕಾರ್ಮಿಕನ ಶವವನ್ನು ಕಸದ ಗಾಡಿಗೆ ಹಾಕಿ ಸಾಗಿಸಿದ ಅಧಿಕಾರಿಗಳು
ಸಾಧು ಶ್ರೀನಾಥ್​
| Edited By: |

Updated on:May 31, 2021 | 12:31 PM

Share

ಲಖ್ನೋ: ಇತ್ತೀಚೆಗೆ ಗಂಗಾ ನದಿ ತಟದಲ್ಲಿ ಕೊರೊನಾ ಸೋಂಕಿತರ ಮೃತ ದೇಹಗಳನ್ನು ನದಿಗೆ ಎಸೆಯಲಾಗುತ್ತಿದೆ ಎಂಬ ಸುದ್ದಿ ಕೇಳಿಬಂದಿತ್ತು. ಇದೀಗ ಅಲ್ಲಿಂದಲೇ ಮತ್ತೊಂದು ವಿಡಿಯೋ ವಾರ್ತೆ ಕೇಳಿಬಂದಿದೆ. ದೆಹಲಿಯಲ್ಲಿ ಇತ್ತೀಚೆಗೆ 50 ವರ್ಷದ ಕಾರ್ಮಿಕರೊಬ್ಬರು ಅಸುನೀಗಿದ್ದರು. ಅವರ ಶವವನ್ನು ಮಹೋಬಾ ಜಿಲ್ಲೆಯ ಗ್ರಾಮಕ್ಕೆ ತರಲಾಗಿತ್ತು. ಆ ವೇಳೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಮಿಕನ ಶವವನ್ನು ಅಂತಿಮ ಸಂಸ್ಕಾರಕ್ಕಾಗಿ ಕಸದ ಗಾಡಿಗೆ ಎತ್ತೆಸೆದು ಸಾಗಿಸುವ ಶೋಚನೀಯ ದೃಶ್ಯ ಕಂಡುಬಂದಿದೆ.

ಲಖ್ನೋದಿಂದ 250 ಕಿ.ಮೀ. ದೂರದಲ್ಲಿರುವ ಮಹೋಬಾ ಪಟ್ಟಣದ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಈ ಘಟನೆ ನಡೆದಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆ ತನಿಖೆಗೆ ಆಜ್ಞಾಪಿಸಲಾಗಿದೆ. 24 ಗಂಟೆಯಲ್ಲಿ ತನಿಖೆ ನಡೆಸಿ, ವರದಿ ಒಪ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿರುವುದಾಗಿ ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿ ಆರ್​ಕೆ ಗೌತಂ ತಿಳಿಸಿದ್ದಾರೆ.

ಮಹೋಬಾ ಜಿಲ್ಲಾ ಆಸ್ಪತ್ರೆಯ ಶವಾಗಾರದ ಬಳಿ ಈ ಘಟನೆ ನಡೆದಿದ್ದು, ಇಬ್ಬರು ಪೊಲೀಸ್​ ಸಿಬ್ಬಂದಿ ಕಾರ್ಮಿಕನ ಶವವನ್ನು ಕಪ್ಪು ಬಟ್ಟೆಯಲ್ಲಿ ಸುತ್ತಿ, ಕಸ ಸಾಗಿಸುವ ಟ್ರಕ್​​ನೊಳಕ್ಕೆ ಹಾಕುವ ದೃಶ್ಯ ಮತ್ತು ಇದಕ್ಕೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೂಚನೆ ನೀಡುವ ದೃಶ್ಯ ಮೊಬೈಲ್​ನಲ್ಲಿ ವಿಡಿಯೋ ಮಾಡಲಾಗಿದೆ. ​

ದೆಹಲಿಯಲ್ಲಿದ್ದ ಕಾರ್ಮಿಕ ಸುಸ್ತು, ಆಯಾಸ, ಬಳಲಿಕೆಯಿದೆ ಎಂದು ಸ್ವಗ್ರಾಮಕ್ಕೆ ವಾಪಸಾಗಿದ್ದ. ಆದರೆ ಆತನಿಗೆ ಚಿಕಿತ್ಸೆ ಕೊಡುವ ಮೊದಲೇ ಮೃತಪಟ್ಟ ಎಂದು ಕಾರ್ಮಿಕನ ಪುತ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ ಇದರಲ್ಲಿ ಕಾರ್ಮಿಕನ ಕುಟುಂಬಸ್ಥರೂ ತಪ್ಪಿತಸ್ಥರು ಎಂಬ ಮಾತುಗಳು ಕೇಳಿಬಂದಿದೆ.

ಮೃತ ಕಾರ್ಮಿಕನನ್ನು ಜಿಲ್ಲಾ ಆಸ್ಪತ್ರೆಯಿಂದ ತೆಗೆದುಕೊಂಡು ಹೋಗುವಂತೆ ಆಸ್ಪತ್ರೆ ಸಿಬ್ಬಂದಿ ಆತನ ಕುಟುಂಬಸ್ಥರಿಗೆ ಹೇಳಿದ್ದಾರೆ. ಆದರೆ ಅವರು ಆಸ್ಪತ್ರೆಯತ್ತ ಸುಳಿದಿಲ್ಲ. ಕಾರ್ಮಿಕನ ಪುತ್ರ ಮಾತ್ರ ಆಸ್ಪತ್ರೆಗೆ ಬಂದು, ಶವಪರೀಕ್ಷೆಯ ಬಳಿಕ ತಂದೆಯ ಮೃತ ದೇಹ ಸಾಗಿಸಲು ಸ್ವತಃ ಆತನೇ ಕಸ ಸಾಗಿಸುವ ಟ್ರಕ್​ಗೆ ವ್ಯವಸ್ಥೆ ಮಾಡಿದ್ದ ಎಂಬ ಮಾತುಗಳು ಕೇಳಿಬಂದಿವೆ.

(viral video Uttar Pradesh police Caught Dumping Man Body Into Garbage Van in Mahoba district hospital) ಈ ಗಾಡಿಯಲ್ಲಿ ತುಂಬಾ ಹೆಣ ಸಾಗಿಸಿದ್ದೀನಿ, ಈಗ ಮಕ್ಕಳ ಶವವನ್ನೂ ಸಾಗಿಸಬೇಕಾ? ನಟ ಅರ್ಜುನ್​ ಗೌಡ ಆತಂಕ

Published On - 12:13 pm, Mon, 31 May 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!