AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕೆ ಸಹಾಯಕ್ಕಾಗಿ ಅಂಗಲಾಚ್ತಿದ್ಲು, ಯುವತಿಯನ್ನು ಹೊತ್ತುಕೊಂಡು ಬಲವಂತವಾಗಿ ಮದುವೆಯಾದ ವ್ಯಕ್ತಿ, ವಿಡಿಯೋ ವೈರಲ್

ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಕೊಂಡಿರುವ ನಾಚಿಕೆಗೇಡಿನ ಪ್ರಕರಣವೊಂದು ಬೆಳಕಿಗೆ ಬಂದಿದೆ

ಆಕೆ ಸಹಾಯಕ್ಕಾಗಿ ಅಂಗಲಾಚ್ತಿದ್ಲು, ಯುವತಿಯನ್ನು ಹೊತ್ತುಕೊಂಡು ಬಲವಂತವಾಗಿ ಮದುವೆಯಾದ ವ್ಯಕ್ತಿ, ವಿಡಿಯೋ ವೈರಲ್
ಮದುವೆ
ನಯನಾ ರಾಜೀವ್
|

Updated on: Jun 07, 2023 | 12:10 PM

Share

ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಕೊಂಡಿರುವ ನಾಚಿಕೆಗೇಡಿನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಯಾವುದೋ ನಿರ್ಜನ ಪ್ರದೇಶದಲ್ಲಿ ಅಗ್ನಿ ನಿರ್ಮಿಸಿ ಆಕೆ ಬೇಡ ಎಂದು ಅಂಗಲಾಚುತ್ತಿದ್ದರೂ ಆಕೆಯನ್ನು ಹೊತ್ತುಕೊಂಡೇ ಅಗ್ನಿಯನ್ನು ಸುತ್ತಿ ಮದುವೆಯಾಗಿದ್ದಾನೆ. ಆಕೆ ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು, ಯುವತಿಯನ್ನು ಅಪಹರಿಸಿರುವ ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಏಳು ದಿನಗಳು ಕಳೆದಿವೆ. ಮಗಳಿಗೆ ನ್ಯಾಯ ಸಿಗದೆ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತಂದೆ ನುಡಿದಿದ್ದಾರೆ.

ಬಾಲಕಿಯ ಸಂಬಂಧಿಕರು ಜಿಲ್ಲಾಧಿಕಾರಿ ಕಚೇರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಟೀನಾ ದಾಬಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಾಗ್ವಾನ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಯಾರನ್ನೂ ಬಂಧಿಸದ ಕಾರಣ ಆರೋಪಿಗಳಿಗೆ ಧೈರ್ಯ ಹೆಚ್ಚಿದೆ, ಅವರು ಮುಕ್ತವಾಗಿ ತಿರುಗಾಡುತ್ತಿದ್ದಾರೆ.

ಮತ್ತಷ್ಟು ಓದಿ: Telangana: ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಈ ವೇಳೆ ಯುವತಿಯನ್ನು ಮತ್ತೆ ಅಪಹರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಆಕೆಗೆ ಬೇರೆ ಮದುವೆಯನ್ನೂ ಮಾಡುವಂತಿಲ್ಲ ಎಂದು ತಂದೆ ಬೇಸರ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

ಹುಡುಗಿಗೆ ಜೂನ್ 12 ರಂದು ಮದುವೆ ನಿಗದಿಯಾಗಿತ್ತು. ಇದಕ್ಕೂ ಮುನ್ನ ಪೂನಂ ನಗರದ ನಿವಾಸಿ ಪುಷ್ಪೇಂದ್ರ ಸಿಂಗ್ ಬಾಲಕಿಯನ್ನು ಅಪಹರಿಸಿದ್ದರು. ಸ್ಥಳೀಯ ಮೂಲಗಳ ಪ್ರಕಾರ, ಪುಷ್ಪೇಂದ್ರ ಸಿಂಗ್ ಈ ಹಿಂದೆ ಹುಡುಗಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಬಳಿಕ ಯುವತಿಯ ಸಂಬಂಧಿಕರು ಯುವಕನೊಂದಿಗೆ ಮಗಳ ನಿಶ್ಚಿತಾರ್ಥವನ್ನು ರದ್ದುಗೊಳಿಸಿದ್ದರು.

ಇದಾದ ನಂತರ ಬೇರೆ ಕುಟುಂಬದಲ್ಲಿ ಹುಡುಗಿಯ ನಿಶ್ಚಿತಾರ್ಥ ನಿಶ್ಚಯವಾಗಿತ್ತು. ಜೂನ್ 12 ರಂದು ಮದುವೆಯಾಗಲು ನಿರ್ಧರಿಸಲಾಯಿತು. ಆದರೆ ಈ ಮಧ್ಯೆ ಪುಷ್ಪೇಂದ್ರ ಸಿಂಗ್ (ಹಿಂದೆ ನಿಶ್ಚಿತಾರ್ಥ ಮಾಡಿಕೊಂಡ ಯುವಕ) ನಿಶ್ಚಿತಾರ್ಥವನ್ನು ಮುರಿದಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು ಯೋಜಿಸುತ್ತಾನೆ. ಯುವಕ ಯುವತಿಯನ್ನು ಅಪಹರಿಸಿ ಬಲವಂತವಾಗಿ ಕರೆದೊಯ್ದಿದ್ದಾನೆ ಎನ್ನಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ