ಆಕೆ ಸಹಾಯಕ್ಕಾಗಿ ಅಂಗಲಾಚ್ತಿದ್ಲು, ಯುವತಿಯನ್ನು ಹೊತ್ತುಕೊಂಡು ಬಲವಂತವಾಗಿ ಮದುವೆಯಾದ ವ್ಯಕ್ತಿ, ವಿಡಿಯೋ ವೈರಲ್

ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಕೊಂಡಿರುವ ನಾಚಿಕೆಗೇಡಿನ ಪ್ರಕರಣವೊಂದು ಬೆಳಕಿಗೆ ಬಂದಿದೆ

ಆಕೆ ಸಹಾಯಕ್ಕಾಗಿ ಅಂಗಲಾಚ್ತಿದ್ಲು, ಯುವತಿಯನ್ನು ಹೊತ್ತುಕೊಂಡು ಬಲವಂತವಾಗಿ ಮದುವೆಯಾದ ವ್ಯಕ್ತಿ, ವಿಡಿಯೋ ವೈರಲ್
ಮದುವೆ

Updated on: Jun 07, 2023 | 12:10 PM

ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಕೊಂಡಿರುವ ನಾಚಿಕೆಗೇಡಿನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಯಾವುದೋ ನಿರ್ಜನ ಪ್ರದೇಶದಲ್ಲಿ ಅಗ್ನಿ ನಿರ್ಮಿಸಿ ಆಕೆ ಬೇಡ ಎಂದು ಅಂಗಲಾಚುತ್ತಿದ್ದರೂ ಆಕೆಯನ್ನು ಹೊತ್ತುಕೊಂಡೇ ಅಗ್ನಿಯನ್ನು ಸುತ್ತಿ ಮದುವೆಯಾಗಿದ್ದಾನೆ. ಆಕೆ ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು, ಯುವತಿಯನ್ನು ಅಪಹರಿಸಿರುವ ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಏಳು ದಿನಗಳು ಕಳೆದಿವೆ. ಮಗಳಿಗೆ ನ್ಯಾಯ ಸಿಗದೆ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತಂದೆ ನುಡಿದಿದ್ದಾರೆ.

ಬಾಲಕಿಯ ಸಂಬಂಧಿಕರು ಜಿಲ್ಲಾಧಿಕಾರಿ ಕಚೇರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಟೀನಾ ದಾಬಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಾಗ್ವಾನ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.
ಯಾರನ್ನೂ ಬಂಧಿಸದ ಕಾರಣ ಆರೋಪಿಗಳಿಗೆ ಧೈರ್ಯ ಹೆಚ್ಚಿದೆ, ಅವರು ಮುಕ್ತವಾಗಿ ತಿರುಗಾಡುತ್ತಿದ್ದಾರೆ.

ಮತ್ತಷ್ಟು ಓದಿ: Telangana: ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಈ ವೇಳೆ ಯುವತಿಯನ್ನು ಮತ್ತೆ ಅಪಹರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಆಕೆಗೆ ಬೇರೆ ಮದುವೆಯನ್ನೂ ಮಾಡುವಂತಿಲ್ಲ ಎಂದು ತಂದೆ ಬೇಸರ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

ಹುಡುಗಿಗೆ ಜೂನ್ 12 ರಂದು ಮದುವೆ ನಿಗದಿಯಾಗಿತ್ತು. ಇದಕ್ಕೂ ಮುನ್ನ ಪೂನಂ ನಗರದ ನಿವಾಸಿ ಪುಷ್ಪೇಂದ್ರ ಸಿಂಗ್ ಬಾಲಕಿಯನ್ನು ಅಪಹರಿಸಿದ್ದರು. ಸ್ಥಳೀಯ ಮೂಲಗಳ ಪ್ರಕಾರ, ಪುಷ್ಪೇಂದ್ರ ಸಿಂಗ್ ಈ ಹಿಂದೆ ಹುಡುಗಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಬಳಿಕ ಯುವತಿಯ ಸಂಬಂಧಿಕರು ಯುವಕನೊಂದಿಗೆ ಮಗಳ ನಿಶ್ಚಿತಾರ್ಥವನ್ನು ರದ್ದುಗೊಳಿಸಿದ್ದರು.

ಇದಾದ ನಂತರ ಬೇರೆ ಕುಟುಂಬದಲ್ಲಿ ಹುಡುಗಿಯ ನಿಶ್ಚಿತಾರ್ಥ ನಿಶ್ಚಯವಾಗಿತ್ತು. ಜೂನ್ 12 ರಂದು ಮದುವೆಯಾಗಲು ನಿರ್ಧರಿಸಲಾಯಿತು. ಆದರೆ ಈ ಮಧ್ಯೆ ಪುಷ್ಪೇಂದ್ರ ಸಿಂಗ್ (ಹಿಂದೆ ನಿಶ್ಚಿತಾರ್ಥ ಮಾಡಿಕೊಂಡ ಯುವಕ) ನಿಶ್ಚಿತಾರ್ಥವನ್ನು ಮುರಿದಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು ಯೋಜಿಸುತ್ತಾನೆ. ಯುವಕ ಯುವತಿಯನ್ನು ಅಪಹರಿಸಿ ಬಲವಂತವಾಗಿ ಕರೆದೊಯ್ದಿದ್ದಾನೆ ಎನ್ನಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us