AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೇಟ್ ತೆರೆಯುವುದು ತಡವಾಗಿದ್ದಕ್ಕೆ ಸೆಕ್ಯುರಿಟಿ ಗಾರ್ಡ್​ಗೆ ಕಪಾಳಮೋಕ್ಷ; ಸೊಕ್ಕು ತುಂಬಿದ ಮಹಿಳೆಯ ವಿಡಿಯೋ ವೈರಲ್

ಉತ್ತರಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಕೃತ್ಯ ಎಸಗಲಾಗಿದೆ. ಗೇಟೆ ತೆರೆಯುವುದು ತಡವಾಯಿತು ಎಂದು ಆರೋಪಿಸಿ ಸೆಕ್ಯುರಿಟಿ ಗಾರ್ಡ್​ಗೆ ಮಹಿಳೆಯೊಬ್ಬಳು ಕಪಾಳಮೋಕ್ಷ ಮಾಡಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದೆ.

ಗೇಟ್ ತೆರೆಯುವುದು ತಡವಾಗಿದ್ದಕ್ಕೆ ಸೆಕ್ಯುರಿಟಿ ಗಾರ್ಡ್​ಗೆ ಕಪಾಳಮೋಕ್ಷ; ಸೊಕ್ಕು ತುಂಬಿದ ಮಹಿಳೆಯ ವಿಡಿಯೋ ವೈರಲ್
ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಮಹಿಳೆ
TV9 Web
| Edited By: Rakesh Nayak Manchi|

Updated on:Sep 12, 2022 | 3:19 PM

Share

ನೋಯ್ಡಾ: ಗೇಟ್ ತೆರೆಯಲು ತಡ ಮಾಡಿದರು ಎಂಬ ಸಣ್ಣ ಕಾರಣಕ್ಕೆ ಮಹಿಳೆಯೊಬ್ಬರು ಸೆಕ್ಯುರಿಟಿ ಗಾರ್ಡ್ ಮೇಲೆ ರೇಗಾಡಿದ್ದಲ್ಲದೆ ಕಪಾಳಮೋಕ್ಷ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ ಸಂಭವಿಸಿದ ಎರಡನೇ ಅಮಾನವೀಯ ಕೃತ್ಯ ಇದಾಗಿದೆ. ಸದ್ಯ ಇದರ ವಿಡಿಯೋ ವೈರಲ್ ಆಗುತ್ತಿದ್ದು, ಪೊಲೀಸರು ಮಹಿಳೆಯನ್ನು ಬಂಧಿಸಿದ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ವರದಿಯಾಗಿದೆ.

ಮಹಿಳಾ ಪ್ರೊಫೆಸರ್ ಸುತಾಪ ದಾಸ್ ಎಂಬವರು ತಮ್ಮ ಕಾರಿನಿಂದ ಇಳಿದು ಕೋಪದಿಂದ ಸೆಕ್ಯುರಿಟಿ ಗಾರ್ಡ್​ಗೆ ಬೆರಳನ್ನು ತೋರಿಸಿ ಬೈಯುತ್ತಾ ಗೇಟ್ ಮುಂದೆ ಬಂದಿದ್ದಲ್ಲದೆ ಕಪಾಳಮೋಕ್ಷ ಮಾಡಿದ್ದಾರೆ. ಅಷ್ಟಾದರೂ ಆಕೆಯ ಕೋಪ ತಣ್ಣಗಾದ ಹಾಗೆ ಕಾಣಿಸುತ್ತಿಲ್ಲ, ಏಕೆಂದರೆ ಮಹಿಳೆಯ ಒಂದು ಏಟು ತಿಂದ ಸಿಬ್ಬಂದಿ ಹಿಂದೆ ಸರಿದಿದ್ದಾರೆ. ಈ ವೇಳೆ ಗೇಟ್ ಒಳಗೆ ಬಂದ ಮಹಿಳೆ ಮತ್ತೆ ಎರಡು ಬಾರಿ ಕಪಾಳಕ್ಕೆ ಹೊಡೆದಿದ್ದಾರೆ. ಈ ವೇಳೆ ಉಳಿದ ಸಿಬ್ಬಂದಿಗಳು ಸಹಾಯಕ್ಕೆ ದಾವಿಸಿಲ್ಲ, ಆದರೆ ಸಿಬ್ಬಂದಿಯೊಬ್ಬರು ಮೊಬೈಲ್​ನಲ್ಲಿ ದೃಶ್ಯಾವಳಿಯನ್ನು ಸೆರೆಹಿಡಿದಿದ್ದಾರೆ.

ನೋಯ್ಡಾದ ಕ್ಲಿಯೋ ಕೌಂಟಿಯ ಈ ಕೃತ್ಯ ಎಸಗಲಾಗಿದ್ದು, ಸಿಬ್ಬಂದಿತ ಕೆನ್ನೆಗೆ ಬಾರಿಸುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಸಂತ್ರಸ್ತ ಸಿಬ್ಬಂದಿ ಸಚಿನ್, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಸಂಬಂಧ ಪೊಲೀಸರು ದಾಸ್ ಅವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ 3ನೇ ಹಂತದ ಪೊಲೀಸ್ ಠಾಣೆಯ ಅಧಿಕಾರಿ ವಿಜಯ್ ಕುಮಾರ್, ಕಾವಲುಗಾರನ ದೂರಿನ ಆಧಾರದ ಮೇಲೆ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅದರಂತೆ ಆಕೆಯನ್ನು ಬಂಧಿಸಲಾಗಿದ್ದು, ನಂತರ ಆಕೆಗೆ ಜಾಮೀನು ನೀಡಲಾಗಿದೆ ಎಂದಿದ್ದಾರೆ.

ಸಿಬಂದಿ ಗೇಟ್ ತೆರೆಯಲು ತಡ ಮಾಡಿದ್ದಾರೆ ಎಂಬುದು ಪ್ರಾಧ್ಯಾಪಕಿ ದಾಸ್ ಅವರ ಆರೋಪವಾಗಿದೆ. ಆದರೆ “ನಾವು RFID ಕೆಲಸ ಮಾಡುತ್ತಿದ್ದೆವು. RFID ನಲ್ಲಿ ಆಕೆಯ ಕಾರ್ ಸಂಖ್ಯೆ ತೋರಿಸುತ್ತಿಲ್ಲ. ಇದಾದ ನಂತರವೂ ನಾವು ಕಾರನ್ನು ಒಳಗೆ ಅನುಮತಿಸಿದ್ದೇವೆ. ಆದರೆ ಅವರು ಹೊರಬಂದು ನಿಂದಿಸಲು ಮತ್ತು ಹೊಡೆಯಲು ಪ್ರಾರಂಭಿಸಿದರು. ಈ ವೇಳೆ ನಾವು 112ಗೆ ಕರೆ ಮಾಡಿ ಮಾಹಿತಿ ನೀಡಿದೆವು” ಎಂದು ಗಾರ್ಡ್ ಸಚಿನ್ ಹೇಳಿದ್ದಾರೆ.

ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಇದು ಎರಡನೇ ಪ್ರಕರಣವಾಗಿದೆ. ಕಳೆದ ತಿಂಗಳು ಉತ್ತರಪ್ರದೇಶದ ಗುರ್ಗಾಂವ್‌ನಲ್ಲಿ ಒಬ್ಬ ವ್ಯಕ್ತಿ ಅಪಾರ್ಟ್‌ಮೆಂಟ್​ನ ಇಬ್ಬರು ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದ ವಿಡಿಯೋ ವೈರಲ್ ಆಗಿತ್ತು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:30 am, Mon, 12 September 22

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ