AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮುಖದ ಮೇಲೆ ಭಾರತದ ತ್ರಿವರ್ಣ ಧ್ವಜದ ಬಣ್ಣವನ್ನು ಹಚ್ಚಿಕೊಂಡಿದ್ದ ಯುವತಿಗೆ ಗೋಲ್ಡನ್ ಟೆಂಪಲ್​ಗೆ ಪ್ರವೇಶ ನಿರಾಕರಣೆ

ಪಂಜಾಬ್​ನ ಅಮೃತಸರದಲ್ಲಿರುವ ಗೋಲ್ಡನ್​ ಟೆಂಪಲ್​(Golden Temple) ನಲ್ಲಿ ಯುವತಿಯೊಬ್ಬಳು ತನ್ನ ಮುಖದ ಮೇಲೆ ಭಾರತದ ತ್ರಿವರ್ಣ ಧ್ವಜದ ಬಣ್ಣವನ್ನು ಹಚ್ಚಿಕೊಂಡಿದ್ದಾಳೆ ಎನ್ನುವ ಒಂದೇ ಒಂದು ಕಾರಣಕ್ಕೆ ಪ್ರವೇಶವನ್ನು ನಿರಾಕರಿಸಿರುವ ಘಟನೆ ನಡೆದಿದೆ.

Video: ಮುಖದ ಮೇಲೆ ಭಾರತದ ತ್ರಿವರ್ಣ ಧ್ವಜದ ಬಣ್ಣವನ್ನು ಹಚ್ಚಿಕೊಂಡಿದ್ದ ಯುವತಿಗೆ ಗೋಲ್ಡನ್ ಟೆಂಪಲ್​ಗೆ ಪ್ರವೇಶ ನಿರಾಕರಣೆ
ಗೋಲ್ಡನ್ ಟೆಂಪಲ್ ವಿಡಿಯೋ
ನಯನಾ ರಾಜೀವ್
|

Updated on: Apr 17, 2023 | 2:09 PM

Share

ಪಂಜಾಬ್​ನ ಅಮೃತಸರದಲ್ಲಿರುವ ಗೋಲ್ಡನ್​ ಟೆಂಪಲ್​(Golden Temple) ನಲ್ಲಿ ಯುವತಿಯೊಬ್ಬಳು ತನ್ನ ಮುಖದ ಮೇಲೆ ಭಾರತದ ತ್ರಿವರ್ಣ ಧ್ವಜದ ಬಣ್ಣವನ್ನು ಹಚ್ಚಿಕೊಂಡಿದ್ದಾಳೆ ಎನ್ನುವ ಒಂದೇ ಒಂದು ಕಾರಣಕ್ಕೆ ಪ್ರವೇಶವನ್ನು ನಿರಾಕರಿಸಿರುವ ಘಟನೆ ನಡೆದಿದೆ. ಇದಾದ ನಂತರ ಧಾರ್ಮಿಕ ಮತ್ತು ಆಧ್ಯಾತ್ಮಿಕ ವ್ಯಕ್ತಿಗಳ ಜೊತೆಗೆ ಸಿನಿಮಾ ನಟರು ಕೂಡ ಈ ಬಗ್ಗೆ ಟ್ವಿಟ್ಟರ್​ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಸ್ಕಾನ್​ನ ಉಪಾಧ್ಯಕ್ಷ ಮತ್ತು ವಕ್ತಾರ ರಾಧಾರಾಮನ್ ದಾಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆಗೆ ಕಾರಣರಾದವರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇಂತಹ ಚಟುವಟಿಕೆಗಳನ್ನು ಸಮಯಕ್ಕೆ ಸರಿಯಾಗಿ ನಿಲ್ಲಿಸದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂದು ರಾಧಾರಾಮನ್ ದಾಸ್ ಹೇಳಿದರು.

ರಾಧಾರಾಮನ್ ದಾಸ್ ಟ್ವೀಟ್ ನಲ್ಲಿ ಇದು ಆಘಾತಕಾರಿ ಮುಖದ ಮೇಲೆ ಭಾರತದ ಧ್ವಜದ ಹಚ್ಚೆ ಹಾಕಿಸಿಕೊಂಡಿದ್ದ ಕಾರಣಕ್ಕೆ ಯುವತಿಯನ್ನು ಗೋಲ್ಡನ್ ಟೆಂಪಲ್ ಪ್ರವೇಶಿಸದಂತೆ ತಡೆಹಿಡಿಯಲಾಗಿತ್ತು. ಈ ಖಲಿಸ್ತಾನಿಯನ್ನು ಕೂಡಲೇ ಬಂಧಿಸಬೇಕು. ದಿನದಿಂದ ದಿನಕ್ಕೆ ಅವರ ದುರಹಂಕಾರ ಹೆಚ್ಚಾಗುತ್ತಿರುವುದರಿಂದ ಅವರನ್ನು ನಿರ್ಲಕ್ಷಿಸುವುದು ಪರಿಹಾರವಲ್ಲ. ಅದೇ ಸಮಯದಲ್ಲಿ, ಚಲನಚಿತ್ರ ನಟ ದೇವೋಲೀನಾ ಭಟ್ಟಾಚಾರ್ಯ ಅವರು ಒಂದು ಕ್ಷಣ ನನಗೆ ಇದನ್ನು ನಂಬಲಾಗಲಿಲ್ಲ ಎಂದಿದ್ದಾರೆ.

ಮತ್ತಷ್ಟು ಓದಿ: ಗೋಲ್ಡನ್​ ಟೆಂಪಲ್​​ ಅಪವಿತ್ರಗೊಳಿಸಿದ ಯುವಕನ ಹತ್ಯೆ ಬೆನ್ನಲ್ಲೇ ಇನ್ನೊಂದು ಘಟನೆ; ಸಿಖ್ಖರ ಧ್ವಜ ಅಪವಿತ್ರಗೊಳಿಸಲು ಯತ್ನಿಸಿದವನಿಗೆ ಥಳಿತ

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದು ಸಿಖ್ ದೇಗುಲ ಪ್ರತಿಯೊಂದು ಧಾರ್ಮಿಕ ಸ್ಥಳಕ್ಕೂ ಅದರದ್ದೇ ಆದ ವಿಶೇಷತೆ ಇದೆ. ಎಲ್ಲರಿಗೂ ಸ್ವಾಗತವಿದೆ.

ಅಧಿಕಾರಿಗಳು ಅನುಚಿತವಾಗಿ ವರ್ತಿಸಿದ್ದರೆ ಕ್ಷಮೆಯಾಚಿಸುತ್ತೇವೆ. ಮಹಿಳೆಯ ಮುಖದಲ್ಲಿರುವ ಧ್ವಜ ನಮ್ಮ ರಾಷ್ಟ್ರಧ್ವಜವಾಗಿರಲಿಲ್ಲ, ಅದರಲ್ಲಿ ಅಶೋಕ ಚಕ್ರ ಇರಲಿಲ್ಲ, ಇದು ರಾಜಕೀಯ ಧ್ವಜವಾಗಿರಬಹುದು ಎಂದು ಎಸ್​ಜಿಪಿಸಿ ಪ್ರಧಾನ ಕಾರ್ಯದರ್ಶಿ ಗುರು ಚರಣ್​ ಸಿಂಗ್ ಗ್ರೆವಾಲ್ ವಿಡಿಯೋದಲ್ಲಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್