AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಿಂದೂ ದೇವರನ್ನು ಪೂಜಿಸುವುದಿಲ್ಲ; ಸಾಮೂಹಿಕ ಮತಾಂತರ ಸಭೆಯಲ್ಲಿ ಪಾಲ್ಗೊಂಡು ಪ್ರತಿಜ್ಞೆ ಮಾಡಿದ ಆಪ್ ಸಚಿವ

ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಪ್ ಸಚಿವ ರಾಜೇಂದ್ರ ಪಾಲ್ ಗೌತಮ್, ನನಗೆ ಬೌದ್ಧ ಧರ್ಮದಲ್ಲಿ ನಂಬಿಕೆ ಇದೆ. ಸಂವಿಧಾನವು ನಮಗೆ ಯಾವುದೇ ಧರ್ಮವನ್ನು ಅನುಸರಿಸಲು ಸ್ವಾತಂತ್ರ್ಯ ನೀಡಿದೆ ಎಂದಿದ್ದಾರೆ.

Viral Video: ಹಿಂದೂ ದೇವರನ್ನು ಪೂಜಿಸುವುದಿಲ್ಲ; ಸಾಮೂಹಿಕ ಮತಾಂತರ ಸಭೆಯಲ್ಲಿ ಪಾಲ್ಗೊಂಡು ಪ್ರತಿಜ್ಞೆ ಮಾಡಿದ ಆಪ್ ಸಚಿವ
ಸಾಮೂಹಿಕ ಮತಾಂತರ ಸಭೆಯಲ್ಲಿ ಭಾಗವಹಿಸಿದ್ದ ಆಮ್ ಆದ್ಮಿ ಪಕ್ಷದ ಸಚಿವ ರಾಜೇಂದ್ರ ಪಾಲ್ ಗೌತಮ್
TV9 Web
| Edited By: |

Updated on: Oct 07, 2022 | 4:43 PM

Share

ನವದೆಹಲಿ: ಇತ್ತೀಚೆಗೆ ಸಾಮೂಹಿಕ ಮತಾಂತರ ಸಭೆಯಲ್ಲಿ ಭಾಗವಹಿಸಿದ್ದ ಆಮ್ ಆದ್ಮಿ ಪಕ್ಷದ (AAP) ಸಚಿವ ರಾಜೇಂದ್ರ ಪಾಲ್ ಗೌತಮ್ ಅಲ್ಲಿ ಸೇರಿದ್ದ ಜನರ ಜೊತೆ “ಹಿಂದೂ ದೇವರು ಮತ್ತು ದೇವತೆಗಳನ್ನು ಪೂಜಿಸುವುದಿಲ್ಲ” ಎಂದು ಪ್ರತಿಜ್ಞೆ ಮಾಡಿದ್ದರು. ಅಕ್ಟೋಬರ್ 5ರಂದು ಬೌದ್ಧ ಧರ್ಮಕ್ಕೆ (Buddhism) ಮತಾಂತರಗೊಳ್ಳುವ ದೀಕ್ಷೆಯಲ್ಲಿ ಪಾಲ್ಗೊಳ್ಳಲು ಬುಧವಾರ 10,000ಕ್ಕೂ ಹೆಚ್ಚು ಜನರು ರಾಷ್ಟ್ರ ರಾಜಧಾನಿ ದೆಹಲಿಯ (Delhi) ಅಂಬೇಡ್ಕರ್ ಭವನದಲ್ಲಿ ಜಮಾಯಿಸಿದ್ದರು.

ಇದೀಗ ವೈರಲ್ ಆಗಿರುವ ಈ ಘಟನೆಯ ವೀಡಿಯೊದಲ್ಲಿ, ಆಪ್ ಸಚಿವರು ಮತ್ತು ಇತರರು ಪ್ರತಿಜ್ಞೆ ಸ್ವೀಕರಿಸುವುದನ್ನು ಕಾಣಬಹುದು. “ನನಗೆ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರನಲ್ಲಿ ನಂಬಿಕೆ ಇಲ್ಲ. ನಾನು ಅವರನ್ನು ಪೂಜಿಸುವುದಿಲ್ಲ. ನನಗೆ ರಾಮನಲ್ಲಿ ನಂಬಿಕೆ ಇಲ್ಲ. ಕೃಷ್ಣನನ್ನು ದೇವರ ಅವತಾರವೆಂದು ನಂಬಲಾಗಿದೆ ಆದರೆ, ನಾನು ಅವರನ್ನು ಪೂಜಿಸುವುದಿಲ್ಲ” ಎಂದು ಹೇಳಲಾಗಿದೆ.

ಇದನ್ನೂ ಓದಿ: Arun Singh: ಕೋರ್​ ಕಮಿಟಿ ಸಭೆಯಲ್ಲಿ ರಾಜ್ಯ ಬಿಜೆಪಿ ನಾಯಕರ ವಿರುದ್ದ ಉಸ್ತುವಾರಿ ಅರುಣ್ ಸಿಂಗ್ ಫುಲ್ ಗರಂ!

ಈ ಬಗ್ಗೆ ಸಚಿವ ರಾಜೇಂದ್ರ ಪಾಲ್ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಬುದ್ಧನ ಕಡೆಗಿನ ಈ ಮಿಷನ್ ಅನ್ನು ಜೈ ಭೀಮ್ ಎಂದು ಕರೆಯೋಣ. ಇಂದು ವಿಜಯದಶಮಿಯಂದು “ಮಿಷನ್ ಜೈ ಭೀಮ್” ಅಡಿಯಲ್ಲಿ 10,000ಕ್ಕೂ ಹೆಚ್ಚು ಬುದ್ಧಿಜೀವಿಗಳು ಜಾತಿ ಮತ್ತು ಅಸ್ಪೃಶ್ಯ ಮುಕ್ತ ಭಾರತವನ್ನು ಮಾಡುವ ಪ್ರತಿಜ್ಞೆ ಮಾಡಿದ್ದೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯಿಂದ ತಿರುಗೇಟು: ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಬಿಜೆಪಿ ಇದನ್ನು “ಬ್ರೇಕಿಂಗ್ ಇಂಡಿಯಾ” ಯೋಜನೆ ಎಂದು ಕರೆದಿದೆ. ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿಯ ಅಮಿತ್ ಮಾಳವಿಯಾ, ಅರವಿಂದ್ ಕೇಜ್ರಿವಾಲ್ ಅವರ ಸಂಪುಟದ ಸಚಿವ ರಾಜೇಂದ್ರ ಪಾಲ್ ಬ್ರೇಕಿಂಗ್ ಇಂಡಿಯಾ ಯೋಜನೆಯನ್ನು ಕಾರ್ಯಗತಗೊಳಿಸುತ್ತಿದ್ದಾರೆ. ಕೇಜ್ರಿವಾಲ್ ಈ ಹಿಂದೂ ದ್ವೇಷದ ಪ್ರಚಾರದ ಪ್ರಧಾನ ಪ್ರಾಯೋಜಕರು ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಬೌದ್ಧ, ಲಿಂಗಾಯತ, ಸಿಖ್, ಜೈನ ಇವೆಲ್ಲವೂ ಹಿಂದೂ ಧರ್ಮದ ಭಾಗವೆಂದು ಬಿಂಬಿಸಲಾಗುತ್ತಿದೆ: ಸಿದ್ದರಾಮಯ್ಯ

ಇದು ಹಿಂದೂ ಮತ್ತು ಬೌದ್ಧ ಧರ್ಮಕ್ಕೆ ಮಾಡಿದ ಅವಮಾನ. ಎಎಪಿ ಸಚಿವರು ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಿದ್ದಾರೆ. ಕೂಡಲೇ ಸಚಿವ ರಾಜೇಂದ್ರ ಪಾಲ್ ಅವರನ್ನು ಆಪ್ ಪಕ್ಷದಿಂದ ತೆಗೆದು ಹಾಕಬೇಕು. ನಾವು ಅವರ ವಿರುದ್ಧ ದೂರು ಸಲ್ಲಿಸುತ್ತಿದ್ದೇವೆ ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಪ್ ಸಚಿವ ರಾಜೇಂದ್ರ ಪಾಲ್ ಗೌತಮ್, ಬಿಜೆಪಿ ದೇಶ ವಿರೋಧಿಯಾಗಿದೆ. ನನಗೆ ಬೌದ್ಧ ಧರ್ಮದಲ್ಲಿ ನಂಬಿಕೆ ಇದೆ. ಯಾರಿಗಾದರೂ ಇದರಿಂದ ತೊಂದರೆ ಯಾಕಾಗಬೇಕು? ಅವರು ದೂರು ನೀಡಲಿ. ಸಂವಿಧಾನವು ನಮಗೆ ಸ್ವಾತಂತ್ರ್ಯ ನೀಡಿದೆ. ಯಾವುದೇ ಧರ್ಮವನ್ನು ಅನುಸರಿಸಲು ನಮಗೆ ಸ್ವಾತಂತ್ರ್ಯವಿದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು