AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ?; ಮಹಾ ಸಿಎಂಗೆ ಬಾಲಕಿಯ ಪ್ರಶ್ನೆ

ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ ಎಂದು ಬಾಲಕಿ ಕೇಳಿದ್ದಾಳೆ.  ಇದಕ್ಕೆ ನಗುತ್ತಾ ಉತ್ತರಿಸಿದ ಶಿಂಧೆ, ನೀವು ಖಂಡಿತವಾಗಿಯೂ ಮುಖ್ಯಮಂತ್ರಿ ಆಗಬಹುದು.

ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ?; ಮಹಾ ಸಿಎಂಗೆ ಬಾಲಕಿಯ ಪ್ರಶ್ನೆ
ಬಾಲಕಿ ಜತೆ ಮಾತನಾಡುತ್ತಿರುವ ಏಕನಾಥ್ ಶಿಂಧೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 19, 2022 | 1:02 PM

Share

ಮಹಾರಾಷ್ಟ್ರ (Maharashtra) ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರನ್ನು ಭೇಟಿ ಮಾಡಿದ ಬಾಲಕಿಯೊಬ್ಬಳು ಮುಖ್ಯಮಂತ್ರಿಯಾಗಬೇಕಾದರೆ ಏನು ಮಾಡಬೇಕು? ಎಂದು ಕೇಳುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗಿದೆ. ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಿದರೆ ನಾನು ಮುಖ್ಯಮಂತ್ರಿ ಆಗಬಹುದೇ ಎಂದು ಬಾಲಕಿ ಅನ್ನದಾ ದಾಮ್ರೆ ಶಿಂಧೆ ಅವರಲ್ಲಿ ಕೇಳಿದ್ದಾರೆ. ಅಸ್ಸಾಂನಲ್ಲಿ ಪ್ರವಾಹ ಬಂದಾಗ ನೀವು ನೀರಲ್ಲೇ ಹೋಗಿ ಜನರಿಗೆ ಸಹಾಯ ಮಾಡಿದ್ದೀರಿ. ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ ಎಂದು ಬಾಲಕಿ ಕೇಳಿದ್ದಾಳೆ.  ಇದಕ್ಕೆ ನಗುತ್ತಾ ಉತ್ತರಿಸಿದ ಶಿಂಧೆ, ನೀವು ಖಂಡಿತವಾಗಿಯೂ ಮುಖ್ಯಮಂತ್ರಿ ಆಗಬಹುದು. ಈ ಬಗ್ಗೆ ನಾವು ನಿರ್ಣಯ ಅಂಗೀಕರಿಸುತ್ತೇವೆ ಎಂದಿದ್ದಾರೆ. ಈ ವರ್ಷ ದೀಪಾವಳಿಗೆ ನನ್ನನ್ನು ಗುವಾಹಟಿಗೆ ಕರೆದುಕೊಂಡು ಹೋಗಬೇಕು ಎಂದು ಬಾಲಕಿ ಶಿಂಧೆಯವರಲ್ಲಿ ಹೇಳಿದ್ದಾಳೆ. ಖಂಡಿತವಾಗಿಯೂ, ನೀನು ಗುವಾಹಟಿಯಲ್ಲಿರುವ ಕಾಮಾಕ್ಯ ದೇವಾಲಯಕ್ಕೆ ಹೋಗಲು ಬಯಸುತ್ತೀಯಾ ಎಂದು ಶಿಂಧೆ ಕೇಳಿದಾಗ ಬಾಲಕಿ ಹೂಂ ಎಂದಿದ್ದಾಳೆ.

ಬಾಲಕಿಯ ಚುರುಕುತನವನ್ನು ಮೆಚ್ಚಿದ ಶಿಂಧೆ ಈ ಬಾಲಕಿ ತುಂಬಾ ಬುದ್ಧಿವಂತೆ ಎಂದು ಹೇಳಿದ್ದಾರೆ. ಕಳೆದ ತಿಂಗಳು ಶಿವಸೇನಾದಲ್ಲಿ ಬಂಡಾಯವೆದ್ದ ಶಿಂಧೆ ಉದ್ಧವ್ ಠಾಕ್ರೆ ಅವರನ್ನು ಕೆಳಗಿಳಿಸಿ ಮುಖ್ಯಮಂತ್ರಿಯಾಗಿದ್ದರು. ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ ಶಿಂಧೆ ಜೂನ್ 30ರಂದು ಮುಖ್ಯಮಂತ್ರಿಯಾಗಿ ಮತ್ತು ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

Published On - 1:01 pm, Tue, 19 July 22

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?