AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ?; ಮಹಾ ಸಿಎಂಗೆ ಬಾಲಕಿಯ ಪ್ರಶ್ನೆ

ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ ಎಂದು ಬಾಲಕಿ ಕೇಳಿದ್ದಾಳೆ.  ಇದಕ್ಕೆ ನಗುತ್ತಾ ಉತ್ತರಿಸಿದ ಶಿಂಧೆ, ನೀವು ಖಂಡಿತವಾಗಿಯೂ ಮುಖ್ಯಮಂತ್ರಿ ಆಗಬಹುದು.

ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ?; ಮಹಾ ಸಿಎಂಗೆ ಬಾಲಕಿಯ ಪ್ರಶ್ನೆ
ಬಾಲಕಿ ಜತೆ ಮಾತನಾಡುತ್ತಿರುವ ಏಕನಾಥ್ ಶಿಂಧೆ
TV9 Web
| Edited By: |

Updated on:Jul 19, 2022 | 1:02 PM

Share

ಮಹಾರಾಷ್ಟ್ರ (Maharashtra) ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರನ್ನು ಭೇಟಿ ಮಾಡಿದ ಬಾಲಕಿಯೊಬ್ಬಳು ಮುಖ್ಯಮಂತ್ರಿಯಾಗಬೇಕಾದರೆ ಏನು ಮಾಡಬೇಕು? ಎಂದು ಕೇಳುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗಿದೆ. ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಿದರೆ ನಾನು ಮುಖ್ಯಮಂತ್ರಿ ಆಗಬಹುದೇ ಎಂದು ಬಾಲಕಿ ಅನ್ನದಾ ದಾಮ್ರೆ ಶಿಂಧೆ ಅವರಲ್ಲಿ ಕೇಳಿದ್ದಾರೆ. ಅಸ್ಸಾಂನಲ್ಲಿ ಪ್ರವಾಹ ಬಂದಾಗ ನೀವು ನೀರಲ್ಲೇ ಹೋಗಿ ಜನರಿಗೆ ಸಹಾಯ ಮಾಡಿದ್ದೀರಿ. ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ ಎಂದು ಬಾಲಕಿ ಕೇಳಿದ್ದಾಳೆ.  ಇದಕ್ಕೆ ನಗುತ್ತಾ ಉತ್ತರಿಸಿದ ಶಿಂಧೆ, ನೀವು ಖಂಡಿತವಾಗಿಯೂ ಮುಖ್ಯಮಂತ್ರಿ ಆಗಬಹುದು. ಈ ಬಗ್ಗೆ ನಾವು ನಿರ್ಣಯ ಅಂಗೀಕರಿಸುತ್ತೇವೆ ಎಂದಿದ್ದಾರೆ. ಈ ವರ್ಷ ದೀಪಾವಳಿಗೆ ನನ್ನನ್ನು ಗುವಾಹಟಿಗೆ ಕರೆದುಕೊಂಡು ಹೋಗಬೇಕು ಎಂದು ಬಾಲಕಿ ಶಿಂಧೆಯವರಲ್ಲಿ ಹೇಳಿದ್ದಾಳೆ. ಖಂಡಿತವಾಗಿಯೂ, ನೀನು ಗುವಾಹಟಿಯಲ್ಲಿರುವ ಕಾಮಾಕ್ಯ ದೇವಾಲಯಕ್ಕೆ ಹೋಗಲು ಬಯಸುತ್ತೀಯಾ ಎಂದು ಶಿಂಧೆ ಕೇಳಿದಾಗ ಬಾಲಕಿ ಹೂಂ ಎಂದಿದ್ದಾಳೆ.

ಬಾಲಕಿಯ ಚುರುಕುತನವನ್ನು ಮೆಚ್ಚಿದ ಶಿಂಧೆ ಈ ಬಾಲಕಿ ತುಂಬಾ ಬುದ್ಧಿವಂತೆ ಎಂದು ಹೇಳಿದ್ದಾರೆ. ಕಳೆದ ತಿಂಗಳು ಶಿವಸೇನಾದಲ್ಲಿ ಬಂಡಾಯವೆದ್ದ ಶಿಂಧೆ ಉದ್ಧವ್ ಠಾಕ್ರೆ ಅವರನ್ನು ಕೆಳಗಿಳಿಸಿ ಮುಖ್ಯಮಂತ್ರಿಯಾಗಿದ್ದರು. ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ ಶಿಂಧೆ ಜೂನ್ 30ರಂದು ಮುಖ್ಯಮಂತ್ರಿಯಾಗಿ ಮತ್ತು ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

Published On - 1:01 pm, Tue, 19 July 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ