AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ?; ಮಹಾ ಸಿಎಂಗೆ ಬಾಲಕಿಯ ಪ್ರಶ್ನೆ

ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ ಎಂದು ಬಾಲಕಿ ಕೇಳಿದ್ದಾಳೆ.  ಇದಕ್ಕೆ ನಗುತ್ತಾ ಉತ್ತರಿಸಿದ ಶಿಂಧೆ, ನೀವು ಖಂಡಿತವಾಗಿಯೂ ಮುಖ್ಯಮಂತ್ರಿ ಆಗಬಹುದು.

ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ?; ಮಹಾ ಸಿಎಂಗೆ ಬಾಲಕಿಯ ಪ್ರಶ್ನೆ
ಬಾಲಕಿ ಜತೆ ಮಾತನಾಡುತ್ತಿರುವ ಏಕನಾಥ್ ಶಿಂಧೆ
TV9 Web
| Edited By: |

Updated on:Jul 19, 2022 | 1:02 PM

Share

ಮಹಾರಾಷ್ಟ್ರ (Maharashtra) ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರನ್ನು ಭೇಟಿ ಮಾಡಿದ ಬಾಲಕಿಯೊಬ್ಬಳು ಮುಖ್ಯಮಂತ್ರಿಯಾಗಬೇಕಾದರೆ ಏನು ಮಾಡಬೇಕು? ಎಂದು ಕೇಳುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗಿದೆ. ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಿದರೆ ನಾನು ಮುಖ್ಯಮಂತ್ರಿ ಆಗಬಹುದೇ ಎಂದು ಬಾಲಕಿ ಅನ್ನದಾ ದಾಮ್ರೆ ಶಿಂಧೆ ಅವರಲ್ಲಿ ಕೇಳಿದ್ದಾರೆ. ಅಸ್ಸಾಂನಲ್ಲಿ ಪ್ರವಾಹ ಬಂದಾಗ ನೀವು ನೀರಲ್ಲೇ ಹೋಗಿ ಜನರಿಗೆ ಸಹಾಯ ಮಾಡಿದ್ದೀರಿ. ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ ಎಂದು ಬಾಲಕಿ ಕೇಳಿದ್ದಾಳೆ.  ಇದಕ್ಕೆ ನಗುತ್ತಾ ಉತ್ತರಿಸಿದ ಶಿಂಧೆ, ನೀವು ಖಂಡಿತವಾಗಿಯೂ ಮುಖ್ಯಮಂತ್ರಿ ಆಗಬಹುದು. ಈ ಬಗ್ಗೆ ನಾವು ನಿರ್ಣಯ ಅಂಗೀಕರಿಸುತ್ತೇವೆ ಎಂದಿದ್ದಾರೆ. ಈ ವರ್ಷ ದೀಪಾವಳಿಗೆ ನನ್ನನ್ನು ಗುವಾಹಟಿಗೆ ಕರೆದುಕೊಂಡು ಹೋಗಬೇಕು ಎಂದು ಬಾಲಕಿ ಶಿಂಧೆಯವರಲ್ಲಿ ಹೇಳಿದ್ದಾಳೆ. ಖಂಡಿತವಾಗಿಯೂ, ನೀನು ಗುವಾಹಟಿಯಲ್ಲಿರುವ ಕಾಮಾಕ್ಯ ದೇವಾಲಯಕ್ಕೆ ಹೋಗಲು ಬಯಸುತ್ತೀಯಾ ಎಂದು ಶಿಂಧೆ ಕೇಳಿದಾಗ ಬಾಲಕಿ ಹೂಂ ಎಂದಿದ್ದಾಳೆ.

ಬಾಲಕಿಯ ಚುರುಕುತನವನ್ನು ಮೆಚ್ಚಿದ ಶಿಂಧೆ ಈ ಬಾಲಕಿ ತುಂಬಾ ಬುದ್ಧಿವಂತೆ ಎಂದು ಹೇಳಿದ್ದಾರೆ. ಕಳೆದ ತಿಂಗಳು ಶಿವಸೇನಾದಲ್ಲಿ ಬಂಡಾಯವೆದ್ದ ಶಿಂಧೆ ಉದ್ಧವ್ ಠಾಕ್ರೆ ಅವರನ್ನು ಕೆಳಗಿಳಿಸಿ ಮುಖ್ಯಮಂತ್ರಿಯಾಗಿದ್ದರು. ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ ಶಿಂಧೆ ಜೂನ್ 30ರಂದು ಮುಖ್ಯಮಂತ್ರಿಯಾಗಿ ಮತ್ತು ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

Published On - 1:01 pm, Tue, 19 July 22

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?