ವಿಶಾಖಪಟ್ಟಣದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; 5 ಜನ ಸಾವು, ಹಲವರಿಗೆ ಗಾಯ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ 5 ಜನರು ಮೃತಪಟ್ಟಿದ್ದಾರೆ. ಬಿಜೆಪಿ ನಾಯಕ ವಿಷ್ಣು ವರ್ಧನ್ ರೆಡ್ಡಿ ಈ ದುರಂತ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. 5 ಜನರ ಸಾವಿನ ಬಗ್ಗೆ ರೆಡ್ಡಿ ಎಕ್ಸ್​ನಲ್ಲಿನ ಪೋಸ್ಟ್‌ನಲ್ಲಿ ದುಃಖ ವ್ಯಕ್ತಪಡಿಸಿದ್ದಾರೆ. ವಿಶಾಖಪಟ್ಟಣದಲ್ಲಿ 5 ಅಮಾಯಕರ ಜೀವಗಳನ್ನು ಬಲಿ ಪಡೆದ ದುರಂತ ಅನಿಲ ಸ್ಫೋಟದಿಂದ ತೀವ್ರ ದುಃಖಿತನಾಗಿದ್ದೇನೆ ಎಂದಿದ್ದಾರೆ.

ವಿಶಾಖಪಟ್ಟಣದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; 5 ಜನ ಸಾವು, ಹಲವರಿಗೆ ಗಾಯ
Visakhapatnam Blast

Updated on: Aug 07, 2025 | 10:19 PM

ವಿಶಾಖಪಟ್ಟಣಂ, ಆಗಸ್ಟ್ 7: ಆಂಧ್ರಪ್ರದೇಶದ ವಿಶಾಖಪಟ್ಟಣಂನ (Visakhapatnam Blast) ಬುಕ್ಕಾ ಸ್ಟ್ರೀಟ್ ಬಳಿ ಇಂದು (ಗುರುವಾರ) ಸಂಭವಿಸಿದ ಅನಿಲ ಸಿಲಿಂಡರ್ ಸ್ಫೋಟದಲ್ಲಿ 5 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಈ ಸ್ಫೋಟವು ಸ್ಕ್ರ್ಯಾಪ್ ಅಂಗಡಿಯಲ್ಲಿ ಸಂಭವಿಸಿದೆ. ಅಲ್ಲಿ ವೆಲ್ಡಿಂಗ್ ಸಿಲಿಂಡರ್ ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿತ್ತು. ಈ ವೇಳೆ ಸ್ಫೋಟವಾಗಿದೆ. ಸ್ಫೋಟದ ಪರಿಣಾಮ ಎಷ್ಟು ಪ್ರಬಲವಾಗಿತ್ತೆಂದರೆ ಮೃತರ ದೇಹಗಳು ಚದುರಿಹೋಗಿ ಗುರುತಿಸಲಾಗದಷ್ಟು ದೂರಕ್ಕೆ ಹಾರಿ ಬಿದ್ದಿದ್ದವು.

ಈ ಘಟನೆಯ ನಂತರ, ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಪೊಲೀಸರ ತಂಡಗಳು ತಕ್ಷಣ ಸ್ಥಳಕ್ಕೆ ಆಗಮಿಸಿದವು. ನಗರ ಪೊಲೀಸ್ ಆಯುಕ್ತ ಶಂಖಬ್ರತ ಬಾಗ್ಚಿ ಗಾಯಾಳುಗಳನ್ನು ನೋಡಲು ವಿಶಾಖಪಟ್ಟಣಂನ ಕಿಂಗ್ ಜಾರ್ಜ್ ಆಸ್ಪತ್ರೆಗೆ (ಕೆಜಿಹೆಚ್) ಭೇಟಿ ನೀಡಿದರು. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಸಂಪೂರ್ಣ ಕ್ರಮಗಳನ್ನು ಜಾರಿಗೆ ತರುವಂತೆ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ. ಅಧಿಕಾರಿಗಳು ಸ್ಫೋಟಕ್ಕೆ ಕಾರಣವಾದ ಅಂಶಗಳನ್ನು ಪರಿಶೀಲಿಸುತ್ತಲೇ ಇದ್ದಾರೆ, ಆದರೆ ಸ್ಥಳೀಯ ಜನರು ಈ ಘಟನೆಯಿಂದ ದಿಗ್ಭ್ರಮೆಗೊಂಡಿದ್ದಾರೆ.


ಇದನ್ನೂ ಓದಿ: ಮಂಗಳೂರು ಕುಕ್ಕರ್​ ಬಾಂಬ್​ ಸ್ಫೋಟ ಕೇಸ್​ಗೆ ಇಡಿ ಎಂಟ್ರಿ, ಆರೋಪಿ​ ಖಾತೆ ಸೀಜ್

ಬಿಜೆಪಿ ನಾಯಕ ವಿಷ್ಣುವರ್ಧನ್ ರೆಡ್ಡಿ ಈ ದುರಂತ ಘಟನೆಗೆ ಪ್ರತಿಕ್ರಿಯಿಸಿದ್ದಾರೆ. 5 ಜನರ ಸಾವಿಗೆ ರೆಡ್ಡಿ ಒಂದು ಪೋಸ್ಟ್‌ನಲ್ಲಿ ದುಃಖ ವ್ಯಕ್ತಪಡಿಸಿದ್ದಾರೆ. “ವಿಶಾಖಪಟ್ಟಣಂನಲ್ಲಿ 5 ಅಮಾಯಕರ ಜೀವಗಳನ್ನು ಬಲಿ ಪಡೆದ ದುರಂತ ಅನಿಲ ಸ್ಫೋಟದಿಂದ ತೀವ್ರ ದುಃಖಿತನಾಗಿದ್ದೇನೆ. ಆಂಧ್ರಪ್ರದೇಶ ಸರ್ಕಾರ ಮತ್ತು ಮಾನ್ಯ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಂತ್ರಸ್ತರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ನೀಡಬೇಕೆಂದು ಒತ್ತಾಯಿಸುತ್ತೇನೆ” ಎಂದು ಅವರು ಬರೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ