ವಿಶಾಖಪಟ್ಟಣಂ ವಿಷ ಅನಿಲ: ರಾತ್ರೋರಾತ್ರಿ ಸುತ್ತಮುತ್ತ ಗ್ರಾಮಸ್ಥರು ಏನು ಮಾಡಿದರು?

ವಿಶಾಖಪಟ್ಟಣಂ: ಒಂದೇ ದಿನದಲ್ಲಿ 11 ಬಲಿಪಡೆದ ಆಂಧ್ರದ ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಅಲ್ಲಿನ ಸುತ್ತಮುತ್ತಲಿನ ಗ್ರಾಮಸ್ಥರು ರಾತ್ರಿ ಇಡೀ ನಿದ್ದೆ ಮಾಡದೆ ಓಡಾಟ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಟಿದ ಸುಳ್ಳು ಸುದ್ದಿಗಳ ಬಗ್ಗೆ ತಲೆಕೆಡಿಸಿಕೊಂಡು ಊರು ಬಿಡಲು ಮುಂದಾಗಿದ್ರು. ಪ್ರಕರಣಕ್ಕೆ ಸಂಬಂಧಿಸಿ ಸೋಷಿಯಲ್ ಮೀಡಿಯಾದಲ್ಲಿ ನಾನಾ ರೀತಿಯ ವದಂತಿಗಳು ಹರಿದಾಡುತ್ತಿವೆ. ಮತ್ತೆ ವಿಷಾನಿಲ ಸೋರಿಕೆಯಾಗುತ್ತಿದೆ ಹಾಗೂ ಬೇರೆ ರಸಾಯನ ಸ್ಫೋಟದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಹೀಗಾಗಿ ಭಯ ಭೀತರಾದ ನೆರೆಹೊರೆ ಗ್ರಾಮಸ್ಥರು ರಾತ್ರಿ ಇಡೀ […]

ವಿಶಾಖಪಟ್ಟಣಂ ವಿಷ ಅನಿಲ: ರಾತ್ರೋರಾತ್ರಿ ಸುತ್ತಮುತ್ತ ಗ್ರಾಮಸ್ಥರು ಏನು ಮಾಡಿದರು?
ಸಾಧು ಶ್ರೀನಾಥ್​

Updated on: May 08, 2020 | 7:55 AM

ವಿಶಾಖಪಟ್ಟಣಂ: ಒಂದೇ ದಿನದಲ್ಲಿ 11 ಬಲಿಪಡೆದ ಆಂಧ್ರದ ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಅಲ್ಲಿನ ಸುತ್ತಮುತ್ತಲಿನ ಗ್ರಾಮಸ್ಥರು ರಾತ್ರಿ ಇಡೀ ನಿದ್ದೆ ಮಾಡದೆ ಓಡಾಟ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಟಿದ ಸುಳ್ಳು ಸುದ್ದಿಗಳ ಬಗ್ಗೆ ತಲೆಕೆಡಿಸಿಕೊಂಡು ಊರು ಬಿಡಲು ಮುಂದಾಗಿದ್ರು.

ಪ್ರಕರಣಕ್ಕೆ ಸಂಬಂಧಿಸಿ ಸೋಷಿಯಲ್ ಮೀಡಿಯಾದಲ್ಲಿ ನಾನಾ ರೀತಿಯ ವದಂತಿಗಳು ಹರಿದಾಡುತ್ತಿವೆ. ಮತ್ತೆ ವಿಷಾನಿಲ ಸೋರಿಕೆಯಾಗುತ್ತಿದೆ ಹಾಗೂ ಬೇರೆ ರಸಾಯನ ಸ್ಫೋಟದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಹೀಗಾಗಿ ಭಯ ಭೀತರಾದ ನೆರೆಹೊರೆ ಗ್ರಾಮಸ್ಥರು ರಾತ್ರಿ ಇಡೀ ನಿದ್ದೆ ಮಾಡದೆ ಊರು ಬಿಡಲು ಯತ್ನಿಸಿದ್ದಾರೆ.

ವೆಂಕಟಾಪುರಂ, ಗೋಪಾಲಪಟ್ನಂ, ಪೆಂದುರ್ತಿ ಗ್ರಾಮಸ್ಥರು ಸುರಕ್ಷಿತ ಪ್ರದೇಶಗಳಿಗೆ ಹೋಗಲು ಮುಂದಾಗಿದ್ರು. ನಂತರ ಜನರು ವದಂತಿಗಳನ್ನ ನಂಬಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us