AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vistara Flights: ಬೆಂಗಳೂರು ಸೇರಿ ಹಲವೆಡೆ ಇಂದೂ 38 ವಿಸ್ತಾರ ವಿಮಾನ ಸಂಚಾರ ರದ್ದು, ವರದಿ ಕೇಳಿದ ಕೇಂದ್ರ

ಪರಿಷ್ಕೃತ ವೇತನದ ಪ್ರಸ್ತಾವ ವಿರೋಧಿಸಿ ಪೈಲಟ್​ಗಳು ಹಠಾತ್ ಪ್ರತಿಭಟನೆ ವ್ಯಕ್ತಪಡಿಸುತ್ತಿರುವುದರಿಂದ ವಿಸ್ತಾರ ಏರ್​ಲೈನ್ಸ್ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಸೋಮವಾರ 50 ಕ್ಕೂ ಹೆಚ್ಚು ವಿಸ್ತಾರಾ ವಿಮಾನಗಳ ಸಂಚಾರ ರದ್ದುಗೊಂಡಿದ್ದರೆ, ಇಂದು (ಮಂಗಳವಾರ) ಬೆಂಗಳೂರು ಸೇರಿದಂತೆ ಹಲವು ನಗರಗಳಿಂದ ಸಂಚರಿಸಬೇಕಿದ್ದ 38 ವಿಮಾನಗಳ ಹಾರಾಟ ರದ್ದಾಗಿದೆ.

Vistara Flights: ಬೆಂಗಳೂರು ಸೇರಿ ಹಲವೆಡೆ ಇಂದೂ 38 ವಿಸ್ತಾರ ವಿಮಾನ ಸಂಚಾರ ರದ್ದು, ವರದಿ ಕೇಳಿದ ಕೇಂದ್ರ
ವಿಸ್ತಾರ ವಿಮಾನ
Ganapathi Sharma
|

Updated on:Apr 02, 2024 | 11:08 AM

Share

ನವದೆಹಲಿ, ಏಪ್ರಿಲ್ 2: ವಿಸ್ತಾರ ವಿಮಾನಯಾನ (Vistara Airlines) ಸಂಸ್ಥೆಯ ಸಂಕಷ್ಟ ಮುಂದುವರಿದಿದ್ದು, ಮಂಗಳವಾರ ಬೆಳಗ್ಗೆ ಬೆಂಗಳೂರು (Bangalore) ಸೇರಿದಂತೆ ವಿವಿಧ ನಗರಗಳಿಂದ ಸಂಚರಿಸಬೇಕಿದ್ದ 38 ವಿಮಾನಗಳ ಹಾರಾಟ ರದ್ದುಗೊಂಡಿದೆ. ಪೈಲಟ್‌ಗಳ ಲಭ್ಯತೆಯಿಲ್ಲದ ಕಾರಣ ವಿಮಾನ ಸಂಚಾರ ಸ್ಥಗಿತಗೊಂಡಿದ್ದು, ಮುಂಬೈನಿಂದ 15 ವಿಮಾನಗಳು, ದೆಹಲಿಯಿಂದ 12 ಮತ್ತು ಬೆಂಗಳೂರಿನಿಂದ 11 ವಿಮಾನಗಳ ಹಾರಾಟ ರದ್ದಾಗಿವೆ. ಸೋಮವಾರ 50 ಕ್ಕೂ ಹೆಚ್ಚು ವಿಸ್ತಾರಾ ವಿಮಾನಗಳ ಸಂಚಾರ ರದ್ದುಗೊಂಡಿತ್ತು. ನಂತರ ಸುಮಾರು 160 ವಿಮಾನಗಳು ವಿಳಂಬವಾಗಿ ಹಾರಾಟ ಆರಂಭಿಸಿದ್ದವು.

ವಿಮಾನ ನಿಲ್ದಾಣದಲ್ಲಿ ಗಂಟೆಗಳ ಕಾಲ ಕಾಯಬೇಕಾಗಿ ಬಂದಿರುವ ಬಗ್ಗೆ ಪ್ರಯಾಣಿಕರು ಸೋಮವಾರ ಆಕ್ಷೇಪ ವ್ಯಕ್ತಪಡಿಸಿದ್ದರು. ವಿಮಾನಯಾನ ಸಂಸ್ಥೆಯ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಸಿಬ್ಬಂದಿ ಅಲಭ್ಯತೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಗಮನಾರ್ಹ ಸಂಖ್ಯೆಯ ವಿಮಾನ ರದ್ದುಗೊಂಡಿದ್ದು, ಅನೇಕ ವಿಮಾನಗಳು ವಿಳಂಬವಾಗಿ ಸಂಚಾರ ಮಾಡಿವೆ. ಇದರಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ ಎಂದು ವಿಸ್ತಾರ ವಿಮಾನಯಾನ ಸಂಸ್ಥೆಯ ಪ್ರಕಟಣೆ ಸೋಮವಾರ ತಿಳಿಸಿತ್ತು.

‘ನಮ್ಮ ಗ್ರಾಹಕರಿಗೆ ಅನಾನುಕೂಲತೆ ಆಗಿರುವುದನ್ನು ನಾವು ಒಪ್ಪಿಕೊಳ್ಳುತ್ತೇವೆ. ಅದಕ್ಕಾಗಿ ತೀವ್ರ ಕಳವಳ ವ್ಯಕ್ತಪಡಿಸುತ್ತೇವೆ. ಪ್ರಯಾಣಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ನಮ್ಮ ತಂಡ ಕೆಲಸ ಮಾಡುತ್ತಿದೆ’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ವಿಸ್ತಾರ ಸಂಕಷ್ಟಕ್ಕೆ ಕಾರಣವೇನು?

ಏರ್ ಇಂಡಿಯಾದೊಂದಿಗೆ ವಿಸ್ತಾರ ಏರ್‌ಲೈನ್ ವಿಲೀನಕ್ಕೆ ಮುಂಚಿತವಾಗಿ ಪರಿಷ್ಕೃತ ವೇತನ ಪ್ರಸ್ತಾವ ಕಳುಹಿಸಿರುವುದನ್ನು ಸಂಸ್ಥೆಯ ಪೈಲಟ್​ಗಳು ವಿರೋಧಿಸುತ್ತಿದ್ದಾರೆ. ಸಂಸ್ಥೆಯ ಕ್ರಮದಿಂದ ಅಸಮಾಧಾನಗೊಂಡಿರುವ ಪೈಲಟ್​ಗಳು ಹೆಚ್ಚಿನ ಸಂಖ್ಯೆಯಲ್ಲಿ ಅನಾರೋಗ್ಯದ ಕಾರಣ ನೀಡಿ ಹಠಾತ್​ ರಜೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಒಟ್ಟಾರೆ ಕಾರ್ಯಾಚರಣೆ ಮೇಲೆ ಪರಿಣಾಮ ಉಂಟಾಗಿದೆ.

ಪೈಲಟ್‌ಗಳಿಗೆ ಪರಿಷ್ಕೃತ ವೇತನ ಪ್ರಸ್ತಾವವನ್ನು ಇ-ಮೇಲ್ ಮೂಲಕ ಕಳುಹಿಸಲಾಗಿದ್ದು, ಸಹಿ ಮಾಡುವಂತೆ ಸೂಚಿಸಲಾಗಿದೆ. ಸಹಿ ಮಾಡದವರನ್ನು ವಿಲೀನದಿಂದ ಹೊರಗಿಡಲಾಗುವುದು ಎಂದು ಪೈಲಟ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ. ಪರಿಣಾಮವಾಗಿ ಪೈಲಟ್​ಗಳು ಅಸಹನೆ ತೋರ್ಪಡಿಸುತ್ತಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಐವರ ಸಾವು

ಸದ್ಯ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಯಾಣಿಕರು ಕುಂದುಕೊರತೆಗಳನ್ನು ಹೇಳಿಕೊಳ್ಳುತ್ತಿದ್ದಾರೆ.

ವರದಿ ಕೇಳಿದ ಕೇಂದ್ರ

ವಿಮಾನ ರದ್ದತಿ ಮತ್ತು ವಿಳಂಬ ಸಂಚಾರಗಳ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ವಿಸ್ತಾರದಿಂದ ವಿವರವಾದ ವರದಿಯನ್ನು ಕೇಳಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:43 am, Tue, 2 April 24

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್