AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಸಿಎಗೆ ₹70 ಲಕ್ಷ ದಂಡ ಪಾವತಿಸಿದ ವಿಸ್ತಾರ ಏರ್‌ಲೈನ್ಸ್

Vistara Airlines ದೇಶದ ಈಶಾನ್ಯದ ಹಿಂದುಳಿದ ಪ್ರದೇಶಗಳಿಗೆ ಕನಿಷ್ಠ ಸಂಖ್ಯೆಯ ಕಡ್ಡಾಯ ವಿಮಾನಗಳನ್ನು ನಿರ್ವಹಿಸದಿದ್ದಕ್ಕಾಗಿ ಡಿಜಿಸಿಎ ಏರ್ ವಿಸ್ತಾರಗೆ ₹70 ಲಕ್ಷ ದಂಡ ವಿಧಿಸಿದೆ.

ಡಿಜಿಸಿಎಗೆ ₹70 ಲಕ್ಷ ದಂಡ ಪಾವತಿಸಿದ ವಿಸ್ತಾರ ಏರ್‌ಲೈನ್ಸ್
ವಿಸ್ತಾರ ಏರ್​​ಲೈನ್ಸ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 06, 2023 | 2:36 PM

Share

ದೇಶದ ಈಶಾನ್ಯ ಭಾಗದ ಹಿಂದುಳಿದ ಪ್ರದೇಶಗಳಿಗೆ ಕನಿಷ್ಠ ಸಂಖ್ಯೆಯ ಕಡ್ಡಾಯ ವಿಮಾನಗಳನ್ನು ನಿರ್ವಹಿಸಲು ವಿಫಲವಾದ ಕಾರಣಕ್ಕಾಗಿ ವಿಸ್ತಾರ ಏರ್‌ಲೈನ್ಸ್​ಗೆ (Vistara Airlines) ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) 70 ಲಕ್ಷ ರೂಪಾಯಿಗಳ ದಂಡ ವಿಧಿಸಿದ್ದು, ಪ್ರಸ್ತುತ ವಿಮಾನಯಾನ ಸಂಸ್ಥೆ ಅದನ್ನು ಪಾವತಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ದೇಶದ ಈಶಾನ್ಯದ ಹಿಂದುಳಿದ ಪ್ರದೇಶಗಳಿಗೆ ಕನಿಷ್ಠ ಸಂಖ್ಯೆಯ ಕಡ್ಡಾಯ ವಿಮಾನಗಳನ್ನು ನಿರ್ವಹಿಸದಿದ್ದಕ್ಕಾಗಿ ಡಿಜಿಸಿಎ ಏರ್ ವಿಸ್ತಾರಗೆ 70 ಲಕ್ಷ ರೂಪಾಯಿ ದಂಡ ವಿಧಿಸಿದೆ. ನಿಯಮಗಳನ್ನು ಪಾಲಿಸದಿದ್ದಕ್ಕಾಗಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ದಂಡವನ್ನು ವಿಧಿಸಲಾಯಿತು. ವಿಮಾನಯಾನ ಸಂಸ್ಥೆ ದಂಡ ಪಾವತಿಸಿದೆ ಎಂದು ಡಿಡಿಸಿಎ ಹೇಳಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.

ನಿಯಮಗಳನ್ನು ಪಾಲಿಸದ ಕಾರಣ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಾಗರಿಕ ವಿಮಾನಯಾನ ನಿಯಂತ್ರಕ ದಂಡವನ್ನು ವಿಧಿಸಿತ್ತು.ಏಪ್ರಿಲ್ 2022 ಕ್ಕೆ ಏರ್‌ಲೈನ್‌ನ ಲಭ್ಯವಿರುವ ಸೀಟ್ ಕಿಲೋಮೀಟರ್‌ಗಳು (ASKM) 0.99 ಶೇಕಡಾ ಎಂದು ಕಂಡುಬಂದಿದೆ, ಇದು ಈಶಾನ್ಯ ಮಾರ್ಗಗಳಲ್ಲಿ ಕಡ್ಡಾಯವಾಗಿ 1 ಶೇಕಡಾಕ್ಕಿಂತ ಕಡಿಮೆಯಾಗಿದೆ.

ಕಾನೂನು ಪಾಲಿಸುವ ಮತ್ತು ಆದೇಶವನ್ನು ಅನುಸರಿಸುವ ಸಂಸ್ಥೆಯಾಗಿ  ವಿಸ್ತಾರ ದಂಡವನ್ನು ಪಾವತಿಸಿದೆ ಎಂದು ವಿಸ್ತಾರ ವಕ್ತಾರರು ಶುಕ್ರವಾರ ಹಿಂದೂಸ್ತಾನ್ ಟೈಮ್ಸ್‌ಗೆ ತಿಳಿಸಿದರು. ನಾವು ಈ ಹಿಂದೆ ಮಾಡುತ್ತಿದ್ದಂತೆಯೇ, ಅಂದಿನಿಂದ ಆರ್‌ಡಿಜಿ (ಮಾರ್ಗ ಪ್ರಸರಣ ಮಾರ್ಗಸೂಚಿಗಳು) ಅಗತ್ಯಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ನಿಯೋಜಿಸಿದ್ದೇವೆ ಎಂದು ನಾವು ಖಚಿತಪಡಿಸುತ್ತೇವೆ ಎಂದು ವಕ್ತಾರರು ಹೇಳಿದ್ದಾರೆ.

ವಿಸ್ತಾರ ಬಾಗ್ಡೋಗ್ರಾದಿಂದ ಒಂದು ವಿಮಾನವನ್ನು ನಿರ್ವಹಿಸಲು ಸಾಧ್ಯವಾಗಲಿಲ್ಲ, ಇದರ ಪರಿಣಾಮವಾಗಿ ವಿಮಾನಯಾನ ಸಂಸ್ಥೆಗೆ ದಾಖಲೆಯ ದಂಡವನ್ನು ವಿಧಿಸಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Mon, 6 February 23

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ