AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಾಂಕ್‌ಫರ್ಟ್‌ನಿಂದ ಬಂದ ವಿಸ್ತಾರಾ ಫ್ಲೈಟ್​​ಗೆ ಹುಸಿ ಬಾಂಬ್ ಬೆದರಿಕೆ, ಮುಂಬೈನಲ್ಲಿ ಸುರಕ್ಷಿತವಾಗಿ ಇಳಿದ ವಿಮಾನ

UK 028 ವಿಮಾನಕ್ಕೆ ಸಾಮಾಜಿಕ ಮಾಧ್ಯಮದ ಮೂಲಕ ಭದ್ರತಾ ಬೆದರಿಕೆ ಬಂದಿದೆ ಎಂದು ವಿಸ್ತಾರಾ ವಕ್ತಾರರು ಖಚಿತಪಡಿಸಿದ್ದಾರೆ. ಪ್ರೋಟೋಕಾಲ್ ಅನ್ನು ಅನುಸರಿಸಿ, ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ತಕ್ಷಣವೇ ಸೂಚಿಸಲಾಗಿದೆ. ವಿಮಾನವನ್ನು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು

ಫ್ರಾಂಕ್‌ಫರ್ಟ್‌ನಿಂದ ಬಂದ ವಿಸ್ತಾರಾ ಫ್ಲೈಟ್​​ಗೆ ಹುಸಿ ಬಾಂಬ್ ಬೆದರಿಕೆ, ಮುಂಬೈನಲ್ಲಿ ಸುರಕ್ಷಿತವಾಗಿ ಇಳಿದ ವಿಮಾನ
ವಿಸ್ತಾರಾ ವಿಮಾನ
ರಶ್ಮಿ ಕಲ್ಲಕಟ್ಟ
|

Updated on: Oct 17, 2024 | 5:46 PM

Share

ಮುಂಬೈ ಅಕ್ಟೋಬರ್ 17: ಒಂದು ವಾರದಲ್ಲಿ ಹಲವಾರು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿದೆ. ಗುರುವಾರ ಬೆಳಗ್ಗೆ ಫ್ರಾಂಕ್‌ಫರ್ಟ್‌ನಿಂದ ಮುಂಬೈಗೆ ಬರುತ್ತಿದ್ದ ವಿಸ್ತಾರಾ ವಿಮಾನಕ್ಕೂ ಇದೇ ರೀತಿಯ ಬೆದರಿಕೆ ಬಂದಿದ್ದು, ವಿಮಾನವನ್ನು ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ. ಅಂದಹಾಗೆ ಇದು 20ನೇ ಹುಸಿ ಬಾಂಬ್ ಬೆದರಿಕೆ ಕರೆಯಾಗಿದೆ. UK 028 ರ ವಿಮಾನವು ಪಾಕಿಸ್ತಾನದ ಮೇಲೆ ಹಾರಾಟ ನಡೆಸುತ್ತಿದ್ದಾಗ ಬೆದರಿಕೆ ಕರೆ ಬಂದಿದೆ. ಇದಾದ ಕೂಡಲೇ ಬೆಳಿಗ್ಗೆ 6 ಗಂಟೆಗೆ (IST) ಸಾಮಾನ್ಯ ತುರ್ತು ಪರಿಸ್ಥಿತಿಯನ್ನು ಸೂಚಿಸಿ ಮುಂಬೈನಲ್ಲಿ ಸುಮಾರು 7:40 ಕ್ಕೆ ವಿಮಾನ ಇಳಿದಿದೆ.

ಸೋಮವಾರ, ಭಾರತೀಯ ವಿಮಾನ ಸಂಸ್ಥೆಯ ಮೂರು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದವು. ಮಂಗಳವಾರ ಹತ್ತು ಬೆದರಿಕೆಗಳು ಬಂದವು. ಬುಧವಾರ ಕನಿಷ್ಠ ಆರು ಬೆದರಿಕೆಗಳು ವರದಿಯಾಗಿವೆ. ಈ ಎಲ್ಲಾ ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ಬಂದಿದ್ದು, ಇದೆಲ್ಲವೂ ಹುಸಿ ಬೆದರಿಕೆ ಆಗಿದೆ. ಪ್ರಮುಖ ನಿಗದಿತ ಭಾರತೀಯ ವಿಮಾನ ಮತ್ತು ಸಣ್ಣ ಪ್ರಾದೇಶಿಕ ವಿಮಾನಯಾನ ಸಂಸ್ಥೆಗಳು ಈ ಬೆದರಿಕೆಗಳಿಂದ ಪ್ರಭಾವಿತವಾಗಿವೆ.

UK 028 ವಿಮಾನಕ್ಕೆ ಸಾಮಾಜಿಕ ಮಾಧ್ಯಮದ ಮೂಲಕ ಭದ್ರತಾ ಬೆದರಿಕೆ ಬಂದಿದೆ ಎಂದು ವಿಸ್ತಾರಾ ವಕ್ತಾರರು ಖಚಿತಪಡಿಸಿದ್ದಾರೆ. ಪ್ರೋಟೋಕಾಲ್ ಅನ್ನು ಅನುಸರಿಸಿ, ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ತಕ್ಷಣವೇ ಸೂಚಿಸಲಾಗಿದೆ. ವಿಮಾನವನ್ನು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು

ಅಗತ್ಯ ಭದ್ರತಾ ತಪಾಸಣೆಗಳನ್ನು ನಡೆಸಲು ವಿಮಾನಯಾನ ಸಂಸ್ಥೆಯು ಭದ್ರತಾ ಏಜೆನ್ಸಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಿದೆ ಎಂದು ಏರ್‌ಲೈನ್ ಹೇಳಿದೆ.

ಅಕ್ಟೋಬರ್ 14 ರಂದು, ಮುಂಬೈನಿಂದ ಮಸ್ಕತ್‌ಗೆ ಇಂಡಿಗೋ ವಿಮಾನವು ಟೇಕಾಫ್ ಆಗುವ ನಿಮಿಷಗಳ ಮೊದಲು ಬಾಂಬ್ ಬೆದರಿಕೆಯನ್ನು ಹೊಂದಿತ್ತು. ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ದು ಭದ್ರತಾ ತಪಾಸಣೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರು ಇತ್ತೀಚಿನ ಚೇಷ್ಟೆ ಕೃತ್ಯಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅವರು ಈ “ಚೇಷ್ಟೆಯ ಮತ್ತು ಕಾನೂನುಬಾಹಿರ” ಕ್ರಮಗಳನ್ನು ಖಂಡಿಸಿದರು, ಅವರು ವಾಯುಯಾನ ಕ್ಷೇತ್ರದ ಸುರಕ್ಷತೆ, ಭದ್ರತೆ ಮತ್ತು ಕಾರ್ಯಾಚರಣೆಯ ಸಮಗ್ರತೆಗೆ ಒಡ್ಡುವ ಬೆದರಿಕೆಯನ್ನು ಎತ್ತಿ ತೋರಿಸಿದರು.

ಇದನ್ನೂ ಓದಿ: ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಗುಡ್​ ನ್ಯೂಸ್; 60 ದಿನ ಮೊದಲು ಟಿಕೆಟ್​ ಬುಕಿಂಗ್​ಗೆ ಅವಕಾಶ

ಮುಂಬೈ ಪೊಲೀಸರು ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಕ್ಕೆ ಸಂಬಂಧಿಸಿ ಅಪ್ರಾಪ್ತನನ್ನು ಬಂಧಿಸಿದ್ದಾರೆ ಎಂದು ನಾಯ್ಡು ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ. ಈ ಅಡೆತಡೆಗಳಲ್ಲಿ ಭಾಗಿಯಾಗಿರುವ ಇತರರನ್ನು ಗುರುತಿಸಲು ಮತ್ತು ಕಾನೂನು ಕ್ರಮ ಜರುಗಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಭರವಸೆ ನೀಡಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ; ಹೌಹಾರಿದ ಕುಟುಂಬಸ್ಥರು!
ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ; ಹೌಹಾರಿದ ಕುಟುಂಬಸ್ಥರು!
ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ
ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ
ಬೆಂಗಳೂರಿನಲ್ಲಿ ನಿಲ್ಲದ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ!
ಬೆಂಗಳೂರಿನಲ್ಲಿ ನಿಲ್ಲದ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ!
ದೇವರು ಕೈಗಳನ್ನು ಕೊಟ್ಟಿಲ್ಲ ಎಂಬ ವಿಷಾದವಿಲ್ಲ
ದೇವರು ಕೈಗಳನ್ನು ಕೊಟ್ಟಿಲ್ಲ ಎಂಬ ವಿಷಾದವಿಲ್ಲ
ಸಿದ್ದರಾಮಯ್ಯ ಗಟ್ಟಿಯಾಗಿ ನಿಲ್ಲಬೇಕು, ಆದರೆ ಅವರು ನಿಲ್ಲುತ್ತಿಲ್ಲ
ಸಿದ್ದರಾಮಯ್ಯ ಗಟ್ಟಿಯಾಗಿ ನಿಲ್ಲಬೇಕು, ಆದರೆ ಅವರು ನಿಲ್ಲುತ್ತಿಲ್ಲ
ಮನೆಯೊಳಗೆ ಅವಿತಿತ್ತು 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ! ವಿಡಿಯೋ ಇಲ್ಲಿದೆ
ಮನೆಯೊಳಗೆ ಅವಿತಿತ್ತು 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ! ವಿಡಿಯೋ ಇಲ್ಲಿದೆ