AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕ್ಷುಬ್ಧ ಹವಾಮಾನ: ಮುಂಬೈ-ಕೊಲ್ಕತ್ತಾ ವಿಮಾನದಲ್ಲಿದ್ದ 8 ಮಂದಿಗೆ ಗಾಯ

ಮುಂಬೈನಿಂದ ಕೊಲ್ಕತ್ತಾಗೆ ಬರುತ್ತಿದ್ದ ವಿಸ್ತಾರಾ ಕಂಪನಿಯು ಕೊಲ್ಕತ್ತಾದಲ್ಲಿ ಇಳಿಯುವ ಮೊದಲು ಪ್ರಕ್ಷುಬ್ಧ ಹವಾಮಾನದಿಂದ (ಟರ್ಬಲೆನ್ಸ್) ಜೋಲಿ ಹೊಡೆದಿದೆ. ಇದರಿಂದಾಗಿ ವಿಮಾನದಲ್ಲಿದ್ದ 8 ಮಂದಿಗೆ ಗಾಯಗಳಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

ಪ್ರಕ್ಷುಬ್ಧ ಹವಾಮಾನ: ಮುಂಬೈ-ಕೊಲ್ಕತ್ತಾ ವಿಮಾನದಲ್ಲಿದ್ದ 8 ಮಂದಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 07, 2021 | 9:46 PM

Share

ಕೊಲ್ಕತ್ತಾ: ಮುಂಬೈನಿಂದ ಕೊಲ್ಕತ್ತಾಗೆ ಬರುತ್ತಿದ್ದ ವಿಸ್ತಾರಾ ಕಂಪನಿಯು ಕೊಲ್ಕತ್ತಾದಲ್ಲಿ ಇಳಿಯುವ ಮೊದಲು ಪ್ರಕ್ಷುಬ್ಧ ಹವಾಮಾನದಿಂದ (ಟರ್ಬಲೆನ್ಸ್) ಜೋಲಿ ಹೊಡೆದಿದೆ. ಇದರಿಂದಾಗಿ ವಿಮಾನದಲ್ಲಿದ್ದ 8 ಮಂದಿಗೆ ಗಾಯಗಳಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ. ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಯುಕೆ 775 ವಿಮಾನವು ಸುರಕ್ಷಿತವಾಗಿ ಇಳಿದಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಸಿ.ಪಟ್ಟಾಭಿ ಹೇಳಿದರು.

ವಿಮಾನವು ಇಳಿಯವಾಗ ಕಾಣಿಸಿಕೊಂಡ ಪ್ರಕ್ಷುಬ್ಧ ಹವಾಮಾನದಿಂದಾಗಿ ವಿಮಾನ ತೀವ್ರವಾಗಿ ಅಲುಗಾಡಿತು. ಈ ಸಂದರ್ಭ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾದವು ಎಂದು ಅವರು ಮಾಹಿತಿ ನೀಡಿದರು. ತೀವ್ರವಾಗಿ ಗಾಯಗೊಂಡ ಪ್ರಯಾಣಿಕರನ್ನು ಚಾರ್ನೋಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡ ಐವರಿಗೆ ಪ್ರಥಮ ಚಿಕಿತ್ಸೆಯ ಬಳಿಕ ಅವರ ಮನೆಗಳಿಗೆ ಕಳಿಸಲಾಯಿತು ಎಂದು ತಿಳಿಸಿದರು.

ವಿಮಾನದಲ್ಲಿ 123 ಪ್ರಯಾಣಿಕರಿದ್ದರು. ವಿಮಾನವು ಕೊಲ್ಕತ್ತಾದಿಂದ 25 ನಾಟಿಕಲ್ ಮೈಲಿ ದೂರದಲ್ಲಿದ್ದಾಗ ಸಂಜೆ 4 ಗಂಟೆಯ ವೇಳೆ ಈ ಘಟನೆ ಸಂಭವಿಸಿದೆ. ಈ ಕುರತು ಪ್ರತಿಕ್ರಿಯಿಸಿರುವ ವಿಸ್ತಾರಾ ಕಂಪನಿಯ ವಕ್ತಾರರು, ಪ್ರಯಾಣಿಕರಿಗೆ ಆದ ಈ ಕೆಟ್ಟ ಅನುಭವದಿಂದ ನಮಗೆ ನೋವಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿಯನ್ನು ನಾವೂ ಗಮನಿಸುತ್ತಿದ್ದೇವೆ. ಇಂಥ ಘಟನೆ ಏಕೆ ನಡೆಯಿತು ಎಂಬ ಬಗ್ಗೆ ಆದ್ಯತೆಯ ಮೇಲೆ ತನಿಖೆ ನಡೆಸುತ್ತಿದ್ದೇವೆ. ಹೆಚ್ಚಿನ ಮಾಹಿತಿಯನ್ನು ಶೀಘ್ರ ನೀಡುತ್ತೇವೆ ಎಂದಿದ್ದಾರೆ.

(Vistara Mumbai Kolkata flight hits severe turbulence 8 injured)

ಇದನ್ನೂ ಓದಿ: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಪೋಟ; 6 ಮಂದಿಗೆ ಗಾಯ

ಇದನ್ನೂ ಓದಿ: ವಿಮಾನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಈ ಬೌಲರ್ ನನ್ನನ್ನು ಇನ್ನಿಲ್ಲದಂತೆ ಕಾಡಿದ್ದ: ಸಚಿನ್ ತೆಂಡೂಲ್ಕರ್

Published On - 9:44 pm, Mon, 7 June 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು