AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Air Force: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್​ ಚೀಫ್ ಮಾರ್ಷಲ್ ವಿ ಆರ್ ಚೌಧರಿ ನೇಮಕ

ವಾಯುಪಡೆಯ ಹಾಲಿ ಮುಖ್ಯಸ್ಥರಾದ ಏರ್​ಚೀಫ್ ಮಾರ್ಷಲ್ ಆರ್​.ಕೆ.ಎಸ್.ಬಧೌರಿಯಾ ಇದೇ ಸೆಪ್ಟೆಂಬರ್ 30ರಂದು ನಿವೃತ್ತರಾಗಲಿದ್ದಾರೆ.

Indian Air Force: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್​ ಚೀಫ್ ಮಾರ್ಷಲ್ ವಿ ಆರ್ ಚೌಧರಿ ನೇಮಕ
ಭಾರತೀಯ ವಾಯುಪಡೆಯ ನಿಯೋಜಿತ ಮುಖ್ಯಸ್ಥ ವಿ.ಆರ್.ಚೌಧರಿ
TV9 Web
| Edited By: |

Updated on:Sep 21, 2021 | 9:02 PM

Share

ದೆಹಲಿ: ನುರಿತ, ಅನುಭವಿ ಪೈಲಟ್ ಏರ್​ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರನ್ನು ಭಾರತೀಯ ವಾಯುಪಡೆಯ (Indian Air Force – IAF) ಮುಖ್ಯಸ್ಥರ ಸ್ಥಾನಕ್ಕೆ ನೇಮಿಸಲು ಭಾರತ ಸರ್ಕಾರ ನಿರ್ಧರಿಸಿದೆ. ವಾಯುಪಡೆಯ ಹಾಲಿ ಮುಖ್ಯಸ್ಥರಾದ ಏರ್​ಚೀಫ್ ಮಾರ್ಷಲ್ ಆರ್​.ಕೆ.ಎಸ್.ಬಧೌರಿಯಾ ಇದೇ ಸೆಪ್ಟೆಂಬರ್ 30ರಂದು ನಿವೃತ್ತರಾಗಲಿದ್ದಾರೆ. ನಂತರ ಮುಖ್ಯಸ್ಥರ ಸ್ಥಾನದಲ್ಲಿ ವಿ.ಆರ್.ಚೌಧರಿ ಕಾರ್ಯನಿರ್ವಹಿಸಲಿದ್ದಾರೆ.

ಪ್ರಸ್ತುತ ವಾಯುಪಡೆಯ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ, ಮಿಗ್​-29 ಯುದ್ಧವಿಮಾನದ ನಿಪುಣ ಪೈಲಟ್ ಎಂದೇ ಹೆಸರಾದವರು. ಆಗಸ್ಟ್ 1, 2020ರಿಂದಲೂ ಅವರು ಪಶ್ಚಿಮ ಏರ್​ ಕಮಾಂಡ್​ನ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಸೆಂಬರ್ 29, 1982ರಂದು ಫೈಟರ್ ಪೈಲಟ್ ಆಗಿ ನಿಯೋಜಿತರಾದ ಚೌಧರಿ 39 ವರ್ಷಗಳ ಸುದೀರ್ಘ ಸೇವಾವಧಿಯಲ್ಲಿ 3800 ಗಂಟೆಗಳ ಹಾರಾಟದ ಅನುಭವ ಹೊಂದಿದ್ದಾರೆ.

ಭಾರತ ಸರ್ಕಾರದ ರಕ್ಷಣಾ ಇಲಾಖೆಯ ವಕ್ತಾರರು ಏರ್​ ಮಾರ್ಷಲ್ ವಿವೇಕಾ ರಾಮ್ ಚೌಧರಿ ಅವರ ಪದೋನ್ನತಿಯನ್ನು ದೃಢಪಡಿಸಿದ್ದಾರೆ. ‘ಪ್ರಸ್ತುತ ವಾಯುಪಡೆಯ ಉಪಮುಖ್ಯಸ್ಥರಾಗಿರುವ ಏರ್​ ಮಾರ್ಷಲ್ ವಿ.ಆರ್.ಚೌಧರಿ ಅವರನ್ನು ವಾಯುಪಡೆಯ ಮುಖ್ಯಸ್ಥರಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ. ಆರ್​.ಕೆ.ಎಸ್.ಬಧೌರಿಯಾ ಸೆ.30ರಂದು ನಿವೃತ್ತರಾಗಲಿದ್ದಾರೆ’ ಎಂದು ಹೇಳಿದ್ದಾರೆ.

(Vivek Ram Chaudhari to be next IAF Indian Air Force Chief)

ಇದನ್ನೂ ಓದಿ: ರಕ್ಷಣಾ ವಿದ್ಯಮಾನ: ಹಗುರ ಯುದ್ಧವಿಮಾನ ತೇಜಸ್​ಗೆ ಶಕ್ತಿ ತುಂಬುವ ಕಾವೇರಿ ಸುಧಾರಣೆ ಈ ಕ್ಷಣದ ತುರ್ತು

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ಏರ್​ಲಿಫ್ಟ್​ಗೆ ನೆರವಾಗುತ್ತಿದೆ ತಜಕಿಸ್ತಾನದಲ್ಲಿರುವ ಭಾರತದ ವಾಯುನೆಲೆ

Published On - 9:02 pm, Tue, 21 September 21

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ