AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Air Force: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್​ ಚೀಫ್ ಮಾರ್ಷಲ್ ವಿ ಆರ್ ಚೌಧರಿ ನೇಮಕ

ವಾಯುಪಡೆಯ ಹಾಲಿ ಮುಖ್ಯಸ್ಥರಾದ ಏರ್​ಚೀಫ್ ಮಾರ್ಷಲ್ ಆರ್​.ಕೆ.ಎಸ್.ಬಧೌರಿಯಾ ಇದೇ ಸೆಪ್ಟೆಂಬರ್ 30ರಂದು ನಿವೃತ್ತರಾಗಲಿದ್ದಾರೆ.

Indian Air Force: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್​ ಚೀಫ್ ಮಾರ್ಷಲ್ ವಿ ಆರ್ ಚೌಧರಿ ನೇಮಕ
ಭಾರತೀಯ ವಾಯುಪಡೆಯ ನಿಯೋಜಿತ ಮುಖ್ಯಸ್ಥ ವಿ.ಆರ್.ಚೌಧರಿ
TV9 Web
| Edited By: |

Updated on:Sep 21, 2021 | 9:02 PM

Share

ದೆಹಲಿ: ನುರಿತ, ಅನುಭವಿ ಪೈಲಟ್ ಏರ್​ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರನ್ನು ಭಾರತೀಯ ವಾಯುಪಡೆಯ (Indian Air Force – IAF) ಮುಖ್ಯಸ್ಥರ ಸ್ಥಾನಕ್ಕೆ ನೇಮಿಸಲು ಭಾರತ ಸರ್ಕಾರ ನಿರ್ಧರಿಸಿದೆ. ವಾಯುಪಡೆಯ ಹಾಲಿ ಮುಖ್ಯಸ್ಥರಾದ ಏರ್​ಚೀಫ್ ಮಾರ್ಷಲ್ ಆರ್​.ಕೆ.ಎಸ್.ಬಧೌರಿಯಾ ಇದೇ ಸೆಪ್ಟೆಂಬರ್ 30ರಂದು ನಿವೃತ್ತರಾಗಲಿದ್ದಾರೆ. ನಂತರ ಮುಖ್ಯಸ್ಥರ ಸ್ಥಾನದಲ್ಲಿ ವಿ.ಆರ್.ಚೌಧರಿ ಕಾರ್ಯನಿರ್ವಹಿಸಲಿದ್ದಾರೆ.

ಪ್ರಸ್ತುತ ವಾಯುಪಡೆಯ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ, ಮಿಗ್​-29 ಯುದ್ಧವಿಮಾನದ ನಿಪುಣ ಪೈಲಟ್ ಎಂದೇ ಹೆಸರಾದವರು. ಆಗಸ್ಟ್ 1, 2020ರಿಂದಲೂ ಅವರು ಪಶ್ಚಿಮ ಏರ್​ ಕಮಾಂಡ್​ನ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಸೆಂಬರ್ 29, 1982ರಂದು ಫೈಟರ್ ಪೈಲಟ್ ಆಗಿ ನಿಯೋಜಿತರಾದ ಚೌಧರಿ 39 ವರ್ಷಗಳ ಸುದೀರ್ಘ ಸೇವಾವಧಿಯಲ್ಲಿ 3800 ಗಂಟೆಗಳ ಹಾರಾಟದ ಅನುಭವ ಹೊಂದಿದ್ದಾರೆ.

ಭಾರತ ಸರ್ಕಾರದ ರಕ್ಷಣಾ ಇಲಾಖೆಯ ವಕ್ತಾರರು ಏರ್​ ಮಾರ್ಷಲ್ ವಿವೇಕಾ ರಾಮ್ ಚೌಧರಿ ಅವರ ಪದೋನ್ನತಿಯನ್ನು ದೃಢಪಡಿಸಿದ್ದಾರೆ. ‘ಪ್ರಸ್ತುತ ವಾಯುಪಡೆಯ ಉಪಮುಖ್ಯಸ್ಥರಾಗಿರುವ ಏರ್​ ಮಾರ್ಷಲ್ ವಿ.ಆರ್.ಚೌಧರಿ ಅವರನ್ನು ವಾಯುಪಡೆಯ ಮುಖ್ಯಸ್ಥರಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ. ಆರ್​.ಕೆ.ಎಸ್.ಬಧೌರಿಯಾ ಸೆ.30ರಂದು ನಿವೃತ್ತರಾಗಲಿದ್ದಾರೆ’ ಎಂದು ಹೇಳಿದ್ದಾರೆ.

(Vivek Ram Chaudhari to be next IAF Indian Air Force Chief)

ಇದನ್ನೂ ಓದಿ: ರಕ್ಷಣಾ ವಿದ್ಯಮಾನ: ಹಗುರ ಯುದ್ಧವಿಮಾನ ತೇಜಸ್​ಗೆ ಶಕ್ತಿ ತುಂಬುವ ಕಾವೇರಿ ಸುಧಾರಣೆ ಈ ಕ್ಷಣದ ತುರ್ತು

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ಏರ್​ಲಿಫ್ಟ್​ಗೆ ನೆರವಾಗುತ್ತಿದೆ ತಜಕಿಸ್ತಾನದಲ್ಲಿರುವ ಭಾರತದ ವಾಯುನೆಲೆ

Published On - 9:02 pm, Tue, 21 September 21

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು