Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Air Force: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್​ ಚೀಫ್ ಮಾರ್ಷಲ್ ವಿ ಆರ್ ಚೌಧರಿ ನೇಮಕ

ವಾಯುಪಡೆಯ ಹಾಲಿ ಮುಖ್ಯಸ್ಥರಾದ ಏರ್​ಚೀಫ್ ಮಾರ್ಷಲ್ ಆರ್​.ಕೆ.ಎಸ್.ಬಧೌರಿಯಾ ಇದೇ ಸೆಪ್ಟೆಂಬರ್ 30ರಂದು ನಿವೃತ್ತರಾಗಲಿದ್ದಾರೆ.

Indian Air Force: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್​ ಚೀಫ್ ಮಾರ್ಷಲ್ ವಿ ಆರ್ ಚೌಧರಿ ನೇಮಕ
ಭಾರತೀಯ ವಾಯುಪಡೆಯ ನಿಯೋಜಿತ ಮುಖ್ಯಸ್ಥ ವಿ.ಆರ್.ಚೌಧರಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 21, 2021 | 9:02 PM

ದೆಹಲಿ: ನುರಿತ, ಅನುಭವಿ ಪೈಲಟ್ ಏರ್​ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರನ್ನು ಭಾರತೀಯ ವಾಯುಪಡೆಯ (Indian Air Force – IAF) ಮುಖ್ಯಸ್ಥರ ಸ್ಥಾನಕ್ಕೆ ನೇಮಿಸಲು ಭಾರತ ಸರ್ಕಾರ ನಿರ್ಧರಿಸಿದೆ. ವಾಯುಪಡೆಯ ಹಾಲಿ ಮುಖ್ಯಸ್ಥರಾದ ಏರ್​ಚೀಫ್ ಮಾರ್ಷಲ್ ಆರ್​.ಕೆ.ಎಸ್.ಬಧೌರಿಯಾ ಇದೇ ಸೆಪ್ಟೆಂಬರ್ 30ರಂದು ನಿವೃತ್ತರಾಗಲಿದ್ದಾರೆ. ನಂತರ ಮುಖ್ಯಸ್ಥರ ಸ್ಥಾನದಲ್ಲಿ ವಿ.ಆರ್.ಚೌಧರಿ ಕಾರ್ಯನಿರ್ವಹಿಸಲಿದ್ದಾರೆ.

ಪ್ರಸ್ತುತ ವಾಯುಪಡೆಯ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ, ಮಿಗ್​-29 ಯುದ್ಧವಿಮಾನದ ನಿಪುಣ ಪೈಲಟ್ ಎಂದೇ ಹೆಸರಾದವರು. ಆಗಸ್ಟ್ 1, 2020ರಿಂದಲೂ ಅವರು ಪಶ್ಚಿಮ ಏರ್​ ಕಮಾಂಡ್​ನ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಸೆಂಬರ್ 29, 1982ರಂದು ಫೈಟರ್ ಪೈಲಟ್ ಆಗಿ ನಿಯೋಜಿತರಾದ ಚೌಧರಿ 39 ವರ್ಷಗಳ ಸುದೀರ್ಘ ಸೇವಾವಧಿಯಲ್ಲಿ 3800 ಗಂಟೆಗಳ ಹಾರಾಟದ ಅನುಭವ ಹೊಂದಿದ್ದಾರೆ.

ಭಾರತ ಸರ್ಕಾರದ ರಕ್ಷಣಾ ಇಲಾಖೆಯ ವಕ್ತಾರರು ಏರ್​ ಮಾರ್ಷಲ್ ವಿವೇಕಾ ರಾಮ್ ಚೌಧರಿ ಅವರ ಪದೋನ್ನತಿಯನ್ನು ದೃಢಪಡಿಸಿದ್ದಾರೆ. ‘ಪ್ರಸ್ತುತ ವಾಯುಪಡೆಯ ಉಪಮುಖ್ಯಸ್ಥರಾಗಿರುವ ಏರ್​ ಮಾರ್ಷಲ್ ವಿ.ಆರ್.ಚೌಧರಿ ಅವರನ್ನು ವಾಯುಪಡೆಯ ಮುಖ್ಯಸ್ಥರಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ. ಆರ್​.ಕೆ.ಎಸ್.ಬಧೌರಿಯಾ ಸೆ.30ರಂದು ನಿವೃತ್ತರಾಗಲಿದ್ದಾರೆ’ ಎಂದು ಹೇಳಿದ್ದಾರೆ.

(Vivek Ram Chaudhari to be next IAF Indian Air Force Chief)

ಇದನ್ನೂ ಓದಿ: ರಕ್ಷಣಾ ವಿದ್ಯಮಾನ: ಹಗುರ ಯುದ್ಧವಿಮಾನ ತೇಜಸ್​ಗೆ ಶಕ್ತಿ ತುಂಬುವ ಕಾವೇರಿ ಸುಧಾರಣೆ ಈ ಕ್ಷಣದ ತುರ್ತು

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ಏರ್​ಲಿಫ್ಟ್​ಗೆ ನೆರವಾಗುತ್ತಿದೆ ತಜಕಿಸ್ತಾನದಲ್ಲಿರುವ ಭಾರತದ ವಾಯುನೆಲೆ

Published On - 9:02 pm, Tue, 21 September 21

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ