AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Air Force: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್​ ಚೀಫ್ ಮಾರ್ಷಲ್ ವಿ ಆರ್ ಚೌಧರಿ ನೇಮಕ

ವಾಯುಪಡೆಯ ಹಾಲಿ ಮುಖ್ಯಸ್ಥರಾದ ಏರ್​ಚೀಫ್ ಮಾರ್ಷಲ್ ಆರ್​.ಕೆ.ಎಸ್.ಬಧೌರಿಯಾ ಇದೇ ಸೆಪ್ಟೆಂಬರ್ 30ರಂದು ನಿವೃತ್ತರಾಗಲಿದ್ದಾರೆ.

Indian Air Force: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್​ ಚೀಫ್ ಮಾರ್ಷಲ್ ವಿ ಆರ್ ಚೌಧರಿ ನೇಮಕ
ಭಾರತೀಯ ವಾಯುಪಡೆಯ ನಿಯೋಜಿತ ಮುಖ್ಯಸ್ಥ ವಿ.ಆರ್.ಚೌಧರಿ
TV9 Web
| Edited By: |

Updated on:Sep 21, 2021 | 9:02 PM

Share

ದೆಹಲಿ: ನುರಿತ, ಅನುಭವಿ ಪೈಲಟ್ ಏರ್​ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರನ್ನು ಭಾರತೀಯ ವಾಯುಪಡೆಯ (Indian Air Force – IAF) ಮುಖ್ಯಸ್ಥರ ಸ್ಥಾನಕ್ಕೆ ನೇಮಿಸಲು ಭಾರತ ಸರ್ಕಾರ ನಿರ್ಧರಿಸಿದೆ. ವಾಯುಪಡೆಯ ಹಾಲಿ ಮುಖ್ಯಸ್ಥರಾದ ಏರ್​ಚೀಫ್ ಮಾರ್ಷಲ್ ಆರ್​.ಕೆ.ಎಸ್.ಬಧೌರಿಯಾ ಇದೇ ಸೆಪ್ಟೆಂಬರ್ 30ರಂದು ನಿವೃತ್ತರಾಗಲಿದ್ದಾರೆ. ನಂತರ ಮುಖ್ಯಸ್ಥರ ಸ್ಥಾನದಲ್ಲಿ ವಿ.ಆರ್.ಚೌಧರಿ ಕಾರ್ಯನಿರ್ವಹಿಸಲಿದ್ದಾರೆ.

ಪ್ರಸ್ತುತ ವಾಯುಪಡೆಯ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ, ಮಿಗ್​-29 ಯುದ್ಧವಿಮಾನದ ನಿಪುಣ ಪೈಲಟ್ ಎಂದೇ ಹೆಸರಾದವರು. ಆಗಸ್ಟ್ 1, 2020ರಿಂದಲೂ ಅವರು ಪಶ್ಚಿಮ ಏರ್​ ಕಮಾಂಡ್​ನ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಸೆಂಬರ್ 29, 1982ರಂದು ಫೈಟರ್ ಪೈಲಟ್ ಆಗಿ ನಿಯೋಜಿತರಾದ ಚೌಧರಿ 39 ವರ್ಷಗಳ ಸುದೀರ್ಘ ಸೇವಾವಧಿಯಲ್ಲಿ 3800 ಗಂಟೆಗಳ ಹಾರಾಟದ ಅನುಭವ ಹೊಂದಿದ್ದಾರೆ.

ಭಾರತ ಸರ್ಕಾರದ ರಕ್ಷಣಾ ಇಲಾಖೆಯ ವಕ್ತಾರರು ಏರ್​ ಮಾರ್ಷಲ್ ವಿವೇಕಾ ರಾಮ್ ಚೌಧರಿ ಅವರ ಪದೋನ್ನತಿಯನ್ನು ದೃಢಪಡಿಸಿದ್ದಾರೆ. ‘ಪ್ರಸ್ತುತ ವಾಯುಪಡೆಯ ಉಪಮುಖ್ಯಸ್ಥರಾಗಿರುವ ಏರ್​ ಮಾರ್ಷಲ್ ವಿ.ಆರ್.ಚೌಧರಿ ಅವರನ್ನು ವಾಯುಪಡೆಯ ಮುಖ್ಯಸ್ಥರಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ. ಆರ್​.ಕೆ.ಎಸ್.ಬಧೌರಿಯಾ ಸೆ.30ರಂದು ನಿವೃತ್ತರಾಗಲಿದ್ದಾರೆ’ ಎಂದು ಹೇಳಿದ್ದಾರೆ.

(Vivek Ram Chaudhari to be next IAF Indian Air Force Chief)

ಇದನ್ನೂ ಓದಿ: ರಕ್ಷಣಾ ವಿದ್ಯಮಾನ: ಹಗುರ ಯುದ್ಧವಿಮಾನ ತೇಜಸ್​ಗೆ ಶಕ್ತಿ ತುಂಬುವ ಕಾವೇರಿ ಸುಧಾರಣೆ ಈ ಕ್ಷಣದ ತುರ್ತು

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ಏರ್​ಲಿಫ್ಟ್​ಗೆ ನೆರವಾಗುತ್ತಿದೆ ತಜಕಿಸ್ತಾನದಲ್ಲಿರುವ ಭಾರತದ ವಾಯುನೆಲೆ

Published On - 9:02 pm, Tue, 21 September 21

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು