AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ತಾತನಿಗೆ 20 ವರ್ಷ ಜೈಲು ಶಿಕ್ಷೆ

ವಿಜಯನಗರಂ ಜಿಲ್ಲೆಯ ಗಜುಲರೇಗದಲ್ಲಿ ಮೊಮ್ಮಗಳ ಮೇಲೆ ಆ ಬಾಲಕಿಯ ತಾತನೇ ಅತ್ಯಾಚಾರ ನಡೆಸಿದ್ದರು. ಈ ವಿಷಯ ತಿಳಿದ ಆಕೆಯ ತಾಯಿ ತನ್ನ ಮಾವನ ಮೇಲೆ ಪೊಲೀಸರಿಗೆ ದೂರು ನೀಡಿದ್ದರು. ನಡೆದ ಈ ಅಮಾನವೀಯ ಘಟನೆಯ ಕುರಿತು ಇಂದು ಪೋಕ್ಸೊ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ತಾತನಿಗೆ 20 ವರ್ಷ ಜೈಲು ಶಿಕ್ಷೆ
Representative Image
ಸುಷ್ಮಾ ಚಕ್ರೆ
|

Updated on: Dec 08, 2025 | 9:47 PM

Share

ಆಂಧ್ರಪ್ರದೇಶ, ಡಿಸೆಂಬರ್ 8: ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಗಜುಲರೇಗದಲ್ಲಿ ನಡೆದ ಅಮಾನವೀಯ ಘಟನೆಯ ಕುರಿತು ಪೋಕ್ಸೊ (POCSO) ವಿಶೇಷ ನ್ಯಾಯಾಲಯವು ಇಂದು ಮಹತ್ವದ ತೀರ್ಪು ನೀಡಿದೆ. ತನ್ನ ಸ್ವಂತ ಮೊಮ್ಮಗಳ ಮೇಲೆ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 59 ವರ್ಷದ ಆರೋಪಿ ಬೊಂಡಪಲ್ಲಿ ಸತ್ಯರಾವ್ ಅವರಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಲಾಗಿದೆ.

ಹಾಗೇ, ಆ ಬಾಲಕಿಯ ಪುನರ್ವಸತಿಗಾಗಿ 5 ಲಕ್ಷ ಪರಿಹಾರವನ್ನು ಘೋಷಿಸಿದೆ. ವಿಜಯನಗರಂ ಜಿಲ್ಲೆಯಲ್ಲಿ ನಡೆದ ಈ ಕ್ರೂರ ಘಟನೆ ಆಗಸ್ಟ್ 18, 2025ರಂದು ಬೆಳಕಿಗೆ ಬಂದಿತ್ತು. ಮನೆಯಲ್ಲಿ ತಾತ-ಮೊಮ್ಮಗಳು ಮಾತ್ರ ಇದ್ದಾಗ ಆ ಮುಗ್ಧ ಹುಡುಗಿಯ ಮೇಲೆ ಆರೋಪಿ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಬಳಿಕ ಆರೋಪಿ ಸತ್ಯ ರಾವ್ ಅಲ್ಲಿಂದ ಪರಾರಿಯಾಗಿದ್ದರು.

ಇದನ್ನೂ ಓದಿ: ಚಾಲಕನ ಜೊತೆ ಸ್ನೇಹ, ಗೆಳೆಯನ ಮೇಲೂ ಮೋಹ: ಅತ್ಯಾಚಾರ​ ಕತೆ ಹೇಳಿ ಸಿಕ್ಕಿಬಿದ್ದಳಾ ಯುವತಿ?

ಸ್ವಲ್ಪ ಸಮಯದ ನಂತರ, ಆ ಹುಡುಗಿಯ ತಾಯಿ ಮನೆಗೆ ಬಂದು ಮಗಳು ಅಳುತ್ತಿರುವುದರಿಂದ ಕಾರಣ ಕೇಳಿದರು. ಆಗ ಆಕೆ ತನ್ನ ಅಮ್ಮನ ಬಳಿ ತನ್ನ ಅಜ್ಜ ತನಗೆ ಏನು ಮಾಡಿದರು ಎಂಬುದನ್ನೆಲ್ಲ ವಿವರಿಸಿದಳು. ಇದರಿಂದ ಆಘಾತಗೊಂಡ ಆ ಮಹಿಳೆ ತನ್ನ ಮಾವನ ವಿರುದ್ಧ ಮಹಿಳಾ ಪೊಲೀಸರಿಗೆ ದೂರು ನೀಡಿದ್ದರು. ಮಹಿಳಾ ಪೊಲೀಸ್ ಠಾಣೆಯ ಎಸ್‌ಐಜಿ ಸಿರಿಷಾ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಡಿಎಸ್‌ಪಿ ಆರ್. ಗೋವಿಂದ ರಾವ್ ಅವರ ಮೇಲ್ವಿಚಾರಣೆಯಲ್ಲಿ ತನಿಖೆಯನ್ನು ಪೂರ್ಣಗೊಳಿಸಿದರು. ನಂತರ, ಆರೋಪಿಯನ್ನು ಬಂಧಿಸಿ ರಿಮಾಂಡ್‌ಗೆ ಕಳುಹಿಸಲಾಯಿತು. ಅವರಿಗೆ ಇಂದು ಶಿಕ್ಷೆ ಪ್ರಕಟವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ