AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ತಾತನಿಗೆ 20 ವರ್ಷ ಜೈಲು ಶಿಕ್ಷೆ

ವಿಜಯನಗರಂ ಜಿಲ್ಲೆಯ ಗಜುಲರೇಗದಲ್ಲಿ ಮೊಮ್ಮಗಳ ಮೇಲೆ ಆ ಬಾಲಕಿಯ ತಾತನೇ ಅತ್ಯಾಚಾರ ನಡೆಸಿದ್ದರು. ಈ ವಿಷಯ ತಿಳಿದ ಆಕೆಯ ತಾಯಿ ತನ್ನ ಮಾವನ ಮೇಲೆ ಪೊಲೀಸರಿಗೆ ದೂರು ನೀಡಿದ್ದರು. ನಡೆದ ಈ ಅಮಾನವೀಯ ಘಟನೆಯ ಕುರಿತು ಇಂದು ಪೋಕ್ಸೊ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ತಾತನಿಗೆ 20 ವರ್ಷ ಜೈಲು ಶಿಕ್ಷೆ
Representative Image
ಸುಷ್ಮಾ ಚಕ್ರೆ
|

Updated on: Dec 08, 2025 | 9:47 PM

Share

ಆಂಧ್ರಪ್ರದೇಶ, ಡಿಸೆಂಬರ್ 8: ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಗಜುಲರೇಗದಲ್ಲಿ ನಡೆದ ಅಮಾನವೀಯ ಘಟನೆಯ ಕುರಿತು ಪೋಕ್ಸೊ (POCSO) ವಿಶೇಷ ನ್ಯಾಯಾಲಯವು ಇಂದು ಮಹತ್ವದ ತೀರ್ಪು ನೀಡಿದೆ. ತನ್ನ ಸ್ವಂತ ಮೊಮ್ಮಗಳ ಮೇಲೆ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 59 ವರ್ಷದ ಆರೋಪಿ ಬೊಂಡಪಲ್ಲಿ ಸತ್ಯರಾವ್ ಅವರಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಲಾಗಿದೆ.

ಹಾಗೇ, ಆ ಬಾಲಕಿಯ ಪುನರ್ವಸತಿಗಾಗಿ 5 ಲಕ್ಷ ಪರಿಹಾರವನ್ನು ಘೋಷಿಸಿದೆ. ವಿಜಯನಗರಂ ಜಿಲ್ಲೆಯಲ್ಲಿ ನಡೆದ ಈ ಕ್ರೂರ ಘಟನೆ ಆಗಸ್ಟ್ 18, 2025ರಂದು ಬೆಳಕಿಗೆ ಬಂದಿತ್ತು. ಮನೆಯಲ್ಲಿ ತಾತ-ಮೊಮ್ಮಗಳು ಮಾತ್ರ ಇದ್ದಾಗ ಆ ಮುಗ್ಧ ಹುಡುಗಿಯ ಮೇಲೆ ಆರೋಪಿ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಬಳಿಕ ಆರೋಪಿ ಸತ್ಯ ರಾವ್ ಅಲ್ಲಿಂದ ಪರಾರಿಯಾಗಿದ್ದರು.

ಇದನ್ನೂ ಓದಿ: ಚಾಲಕನ ಜೊತೆ ಸ್ನೇಹ, ಗೆಳೆಯನ ಮೇಲೂ ಮೋಹ: ಅತ್ಯಾಚಾರ​ ಕತೆ ಹೇಳಿ ಸಿಕ್ಕಿಬಿದ್ದಳಾ ಯುವತಿ?

ಸ್ವಲ್ಪ ಸಮಯದ ನಂತರ, ಆ ಹುಡುಗಿಯ ತಾಯಿ ಮನೆಗೆ ಬಂದು ಮಗಳು ಅಳುತ್ತಿರುವುದರಿಂದ ಕಾರಣ ಕೇಳಿದರು. ಆಗ ಆಕೆ ತನ್ನ ಅಮ್ಮನ ಬಳಿ ತನ್ನ ಅಜ್ಜ ತನಗೆ ಏನು ಮಾಡಿದರು ಎಂಬುದನ್ನೆಲ್ಲ ವಿವರಿಸಿದಳು. ಇದರಿಂದ ಆಘಾತಗೊಂಡ ಆ ಮಹಿಳೆ ತನ್ನ ಮಾವನ ವಿರುದ್ಧ ಮಹಿಳಾ ಪೊಲೀಸರಿಗೆ ದೂರು ನೀಡಿದ್ದರು. ಮಹಿಳಾ ಪೊಲೀಸ್ ಠಾಣೆಯ ಎಸ್‌ಐಜಿ ಸಿರಿಷಾ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಡಿಎಸ್‌ಪಿ ಆರ್. ಗೋವಿಂದ ರಾವ್ ಅವರ ಮೇಲ್ವಿಚಾರಣೆಯಲ್ಲಿ ತನಿಖೆಯನ್ನು ಪೂರ್ಣಗೊಳಿಸಿದರು. ನಂತರ, ಆರೋಪಿಯನ್ನು ಬಂಧಿಸಿ ರಿಮಾಂಡ್‌ಗೆ ಕಳುಹಿಸಲಾಯಿತು. ಅವರಿಗೆ ಇಂದು ಶಿಕ್ಷೆ ಪ್ರಕಟವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್