AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ತಾತನಿಗೆ 20 ವರ್ಷ ಜೈಲು ಶಿಕ್ಷೆ

ವಿಜಯನಗರಂ ಜಿಲ್ಲೆಯ ಗಜುಲರೇಗದಲ್ಲಿ ಮೊಮ್ಮಗಳ ಮೇಲೆ ಆ ಬಾಲಕಿಯ ತಾತನೇ ಅತ್ಯಾಚಾರ ನಡೆಸಿದ್ದರು. ಈ ವಿಷಯ ತಿಳಿದ ಆಕೆಯ ತಾಯಿ ತನ್ನ ಮಾವನ ಮೇಲೆ ಪೊಲೀಸರಿಗೆ ದೂರು ನೀಡಿದ್ದರು. ನಡೆದ ಈ ಅಮಾನವೀಯ ಘಟನೆಯ ಕುರಿತು ಇಂದು ಪೋಕ್ಸೊ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ತಾತನಿಗೆ 20 ವರ್ಷ ಜೈಲು ಶಿಕ್ಷೆ
Representative Image
ಸುಷ್ಮಾ ಚಕ್ರೆ
|

Updated on: Dec 08, 2025 | 9:47 PM

Share

ಆಂಧ್ರಪ್ರದೇಶ, ಡಿಸೆಂಬರ್ 8: ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಗಜುಲರೇಗದಲ್ಲಿ ನಡೆದ ಅಮಾನವೀಯ ಘಟನೆಯ ಕುರಿತು ಪೋಕ್ಸೊ (POCSO) ವಿಶೇಷ ನ್ಯಾಯಾಲಯವು ಇಂದು ಮಹತ್ವದ ತೀರ್ಪು ನೀಡಿದೆ. ತನ್ನ ಸ್ವಂತ ಮೊಮ್ಮಗಳ ಮೇಲೆ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 59 ವರ್ಷದ ಆರೋಪಿ ಬೊಂಡಪಲ್ಲಿ ಸತ್ಯರಾವ್ ಅವರಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಲಾಗಿದೆ.

ಹಾಗೇ, ಆ ಬಾಲಕಿಯ ಪುನರ್ವಸತಿಗಾಗಿ 5 ಲಕ್ಷ ಪರಿಹಾರವನ್ನು ಘೋಷಿಸಿದೆ. ವಿಜಯನಗರಂ ಜಿಲ್ಲೆಯಲ್ಲಿ ನಡೆದ ಈ ಕ್ರೂರ ಘಟನೆ ಆಗಸ್ಟ್ 18, 2025ರಂದು ಬೆಳಕಿಗೆ ಬಂದಿತ್ತು. ಮನೆಯಲ್ಲಿ ತಾತ-ಮೊಮ್ಮಗಳು ಮಾತ್ರ ಇದ್ದಾಗ ಆ ಮುಗ್ಧ ಹುಡುಗಿಯ ಮೇಲೆ ಆರೋಪಿ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಬಳಿಕ ಆರೋಪಿ ಸತ್ಯ ರಾವ್ ಅಲ್ಲಿಂದ ಪರಾರಿಯಾಗಿದ್ದರು.

ಇದನ್ನೂ ಓದಿ: ಚಾಲಕನ ಜೊತೆ ಸ್ನೇಹ, ಗೆಳೆಯನ ಮೇಲೂ ಮೋಹ: ಅತ್ಯಾಚಾರ​ ಕತೆ ಹೇಳಿ ಸಿಕ್ಕಿಬಿದ್ದಳಾ ಯುವತಿ?

ಸ್ವಲ್ಪ ಸಮಯದ ನಂತರ, ಆ ಹುಡುಗಿಯ ತಾಯಿ ಮನೆಗೆ ಬಂದು ಮಗಳು ಅಳುತ್ತಿರುವುದರಿಂದ ಕಾರಣ ಕೇಳಿದರು. ಆಗ ಆಕೆ ತನ್ನ ಅಮ್ಮನ ಬಳಿ ತನ್ನ ಅಜ್ಜ ತನಗೆ ಏನು ಮಾಡಿದರು ಎಂಬುದನ್ನೆಲ್ಲ ವಿವರಿಸಿದಳು. ಇದರಿಂದ ಆಘಾತಗೊಂಡ ಆ ಮಹಿಳೆ ತನ್ನ ಮಾವನ ವಿರುದ್ಧ ಮಹಿಳಾ ಪೊಲೀಸರಿಗೆ ದೂರು ನೀಡಿದ್ದರು. ಮಹಿಳಾ ಪೊಲೀಸ್ ಠಾಣೆಯ ಎಸ್‌ಐಜಿ ಸಿರಿಷಾ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಡಿಎಸ್‌ಪಿ ಆರ್. ಗೋವಿಂದ ರಾವ್ ಅವರ ಮೇಲ್ವಿಚಾರಣೆಯಲ್ಲಿ ತನಿಖೆಯನ್ನು ಪೂರ್ಣಗೊಳಿಸಿದರು. ನಂತರ, ಆರೋಪಿಯನ್ನು ಬಂಧಿಸಿ ರಿಮಾಂಡ್‌ಗೆ ಕಳುಹಿಸಲಾಯಿತು. ಅವರಿಗೆ ಇಂದು ಶಿಕ್ಷೆ ಪ್ರಕಟವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು