AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಬಂದೇ ಬರುತ್ತೇನೆ, ಧೈರ್ಯವಾಗಿರಿ..’: ಮತ್ತೆ ರಾಜಕೀಯಕ್ಕೆ ಬರಲಿದ್ದಾರೆ ಅಮ್ಮನ ಆಪ್ತೆ ವಿ.ಕೆ.ಶಶಿಕಲಾ, ವೈರಲ್​ ಆಯ್ತು ಆಡಿಯೋ

ಫೆ.8ರಂದು ಶಶಿಕಲಾ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ಅವರ ಬಿಡುಗಡೆ ಖಂಡಿತ ತಮಿಳುನಾಡಿನ ರಾಜಕೀಯದಲ್ಲಿ ಬಹುದೊಡ್ಡ ಬದಲಾವಣೆ ತರುತ್ತದೆ ಎಂದು ರಾಜಕೀಯ ವಿಶ್ಲೇಷರು ಅಭಿಪ್ರಾಯಪಟ್ಟಿದ್ದರು.

‘ನಾನು ಬಂದೇ ಬರುತ್ತೇನೆ, ಧೈರ್ಯವಾಗಿರಿ..’: ಮತ್ತೆ ರಾಜಕೀಯಕ್ಕೆ ಬರಲಿದ್ದಾರೆ ಅಮ್ಮನ ಆಪ್ತೆ ವಿ.ಕೆ.ಶಶಿಕಲಾ, ವೈರಲ್​ ಆಯ್ತು ಆಡಿಯೋ
ವಿ.ಕೆ.ಶಶಿಕಲಾ
Lakshmi Hegde
|

Updated on: May 30, 2021 | 10:53 AM

Share

ಚೆನ್ನೈ: ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿ ಚೆನ್ನೈಗೆ ಮರಳುತ್ತಿದ್ದಂತೆ ರಾಜಕೀಯದಿಂದ ದೂರ ಸರಿಯುವ ಘೋಷಣೆ ಮಾಡಿದ್ದ ಎಐಎಡಿಎಂಕೆ ಉಚ್ಚಾಟಿತ ಪ್ರಧಾನ ಕಾರ್ಯದರ್ಶಿ, ಮಾಜಿ ಸಿಎಂ ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ ಈಗ ಮರಳಿ ರಾಜಕಾರಣಕ್ಕೆ ಬರಲಿದ್ದಾರಾ? ಹೀಗೊಂದು ಅನುಮಾನ ಹುಟ್ಟಲು ಕಾರಣವಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಆಡಿಯೋ.

ಎಐಎಡಿಎಂಕೆ ಪಕ್ಷದ ಕಾರ್ಯಕರ್ತರೊಬ್ಬರೊಂದಿಗೆ ಶಶಿಕಲಾ ಫೋನ್​​ನಲ್ಲಿ ಮಾತನಾಡಿದ ಆಡಿಯೋ ಕ್ಲಿಪ್​ ಇದು ಎನ್ನಲಾಗುತ್ತಿದೆ. ಒಂದು ಸಲ ಕೊರೊನಾ ಸೋಂಕಿನ ಬಿಕ್ಕಟ್ಟಿನ ಪರಿಸ್ಥಿತಿ ಸುಧಾರಿಸಿದ ನಂತರ ನಾನು ಖಂಡಿತ ರಾಜಕೀಯಕ್ಕೆ ಇಳಿಯುತ್ತೇನೆ. ಎಐಎಡಿಎಂಕೆಯಲ್ಲಿರುವ ಸಮಸ್ಯೆಗಳನ್ನು ನಿವಾರಿಸುತ್ತೇನೆ ಎಂದು ಆ ಕಾರ್ಯಕರ್ತನಿಗೆ ಭರವಸೆ ನೀಡಿದ್ದು ಈ ಧ್ವನಿ ತುಣುಕಿನಲ್ಲಿ ಕೇಳುತ್ತದೆ. ಯೋಚಿಸಬೇಡಿ..ನಾನು ರಾಜಕೀಯಕ್ಕೆ ಹಿಂತಿರುಗುತ್ತೇನೆ. ಎಲ್ಲರೂ ಧೈರ್ಯವಾಗಿರಿ ಎಂದು ಹೇಳಿದ್ದಾರೆ.

ಫೆ.8ರಂದು ಶಶಿಕಲಾ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ಅವರ ಬಿಡುಗಡೆ ಖಂಡಿತ ತಮಿಳುನಾಡಿನ ರಾಜಕೀಯದಲ್ಲಿ ಬಹುದೊಡ್ಡ ಬದಲಾವಣೆ ತರುತ್ತದೆ ಎಂದು ರಾಜಕೀಯ ವಿಶ್ಲೇಷರು ಅಭಿಪ್ರಾಯಪಟ್ಟಿದ್ದರು. ಆದರೆ ಎಲ್ಲರ ನಿರೀಕ್ಷೆಗೂ ತಣ್ಣೀರು ಎರಚುವಂತೆ ಒಂದು ವಿಭಿನ್ನ ನಿರ್ಧಾರವನ್ನು ಶಶಿಕಲಾ ಪ್ರಕಟಿಸಿದ್ದರು. ನಾನು ಸಕ್ರಿಯ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ ಎಂದು ಮಾರ್ಚ್​ 3ರಂದು ಘೋಷಿಸಿದ್ದರು. ಹಾಗೇ, ಎಐಎಡಿಎಂಕೆ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಿ, ಅಮ್ಮನ ಪಕ್ಷದ ಶತ್ರುವನ್ನು ಬಗ್ಗುಬಡಿಯಬೇಕು ಎಂದು ಹೇಳಿದ್ದರು. ಅದರಂತೆ, ತಮಿಳುನಾಡು ವಿಧಾನಸಭಾ ಕ್ಷೇತ್ರದ ಚುನಾವಣೆಯ ಹೊತ್ತಲ್ಲೂ ಶಶಿಕಲಾ ದೂರವೇ ಇದ್ದರು. ಆದರೆ ಇದೀಗ ವೈರಲ್ ಆಗುತ್ತಿರುವ ಆಡಿಯೋ ಶಶಿಕಲಾ ರಾಜಕೀಯಕ್ಕೆ ಮತ್ತೆ ಬರುತ್ತಾರೆ ಎಂಬುದನ್ನು ಸ್ಪಷ್ಟಪಡಿಸುತ್ತಿದೆ.

ಇದನ್ನೂ ಓದಿ: ಹಾಸನ: ಆಸ್ತಿ ವಿಚಾರಕ್ಕೆ ಬಡಿದಾಡಿಕೊಂಡು ನಾಲ್ವರ ಕೊಲೆ ಪ್ರಕರಣ; ಗಲಾಟೆ ವಿಡಿಯೋ ವೈರಲ್

Follow Us
Lakshmi Hegde
Lakshmi Hegde
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​