AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಬಂದೇ ಬರುತ್ತೇನೆ, ಧೈರ್ಯವಾಗಿರಿ..’: ಮತ್ತೆ ರಾಜಕೀಯಕ್ಕೆ ಬರಲಿದ್ದಾರೆ ಅಮ್ಮನ ಆಪ್ತೆ ವಿ.ಕೆ.ಶಶಿಕಲಾ, ವೈರಲ್​ ಆಯ್ತು ಆಡಿಯೋ

ಫೆ.8ರಂದು ಶಶಿಕಲಾ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ಅವರ ಬಿಡುಗಡೆ ಖಂಡಿತ ತಮಿಳುನಾಡಿನ ರಾಜಕೀಯದಲ್ಲಿ ಬಹುದೊಡ್ಡ ಬದಲಾವಣೆ ತರುತ್ತದೆ ಎಂದು ರಾಜಕೀಯ ವಿಶ್ಲೇಷರು ಅಭಿಪ್ರಾಯಪಟ್ಟಿದ್ದರು.

‘ನಾನು ಬಂದೇ ಬರುತ್ತೇನೆ, ಧೈರ್ಯವಾಗಿರಿ..’: ಮತ್ತೆ ರಾಜಕೀಯಕ್ಕೆ ಬರಲಿದ್ದಾರೆ ಅಮ್ಮನ ಆಪ್ತೆ ವಿ.ಕೆ.ಶಶಿಕಲಾ, ವೈರಲ್​ ಆಯ್ತು ಆಡಿಯೋ
ವಿ.ಕೆ.ಶಶಿಕಲಾ
Lakshmi Hegde
|

Updated on: May 30, 2021 | 10:53 AM

Share

ಚೆನ್ನೈ: ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿ ಚೆನ್ನೈಗೆ ಮರಳುತ್ತಿದ್ದಂತೆ ರಾಜಕೀಯದಿಂದ ದೂರ ಸರಿಯುವ ಘೋಷಣೆ ಮಾಡಿದ್ದ ಎಐಎಡಿಎಂಕೆ ಉಚ್ಚಾಟಿತ ಪ್ರಧಾನ ಕಾರ್ಯದರ್ಶಿ, ಮಾಜಿ ಸಿಎಂ ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ ಈಗ ಮರಳಿ ರಾಜಕಾರಣಕ್ಕೆ ಬರಲಿದ್ದಾರಾ? ಹೀಗೊಂದು ಅನುಮಾನ ಹುಟ್ಟಲು ಕಾರಣವಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಆಡಿಯೋ.

ಎಐಎಡಿಎಂಕೆ ಪಕ್ಷದ ಕಾರ್ಯಕರ್ತರೊಬ್ಬರೊಂದಿಗೆ ಶಶಿಕಲಾ ಫೋನ್​​ನಲ್ಲಿ ಮಾತನಾಡಿದ ಆಡಿಯೋ ಕ್ಲಿಪ್​ ಇದು ಎನ್ನಲಾಗುತ್ತಿದೆ. ಒಂದು ಸಲ ಕೊರೊನಾ ಸೋಂಕಿನ ಬಿಕ್ಕಟ್ಟಿನ ಪರಿಸ್ಥಿತಿ ಸುಧಾರಿಸಿದ ನಂತರ ನಾನು ಖಂಡಿತ ರಾಜಕೀಯಕ್ಕೆ ಇಳಿಯುತ್ತೇನೆ. ಎಐಎಡಿಎಂಕೆಯಲ್ಲಿರುವ ಸಮಸ್ಯೆಗಳನ್ನು ನಿವಾರಿಸುತ್ತೇನೆ ಎಂದು ಆ ಕಾರ್ಯಕರ್ತನಿಗೆ ಭರವಸೆ ನೀಡಿದ್ದು ಈ ಧ್ವನಿ ತುಣುಕಿನಲ್ಲಿ ಕೇಳುತ್ತದೆ. ಯೋಚಿಸಬೇಡಿ..ನಾನು ರಾಜಕೀಯಕ್ಕೆ ಹಿಂತಿರುಗುತ್ತೇನೆ. ಎಲ್ಲರೂ ಧೈರ್ಯವಾಗಿರಿ ಎಂದು ಹೇಳಿದ್ದಾರೆ.

ಫೆ.8ರಂದು ಶಶಿಕಲಾ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ಅವರ ಬಿಡುಗಡೆ ಖಂಡಿತ ತಮಿಳುನಾಡಿನ ರಾಜಕೀಯದಲ್ಲಿ ಬಹುದೊಡ್ಡ ಬದಲಾವಣೆ ತರುತ್ತದೆ ಎಂದು ರಾಜಕೀಯ ವಿಶ್ಲೇಷರು ಅಭಿಪ್ರಾಯಪಟ್ಟಿದ್ದರು. ಆದರೆ ಎಲ್ಲರ ನಿರೀಕ್ಷೆಗೂ ತಣ್ಣೀರು ಎರಚುವಂತೆ ಒಂದು ವಿಭಿನ್ನ ನಿರ್ಧಾರವನ್ನು ಶಶಿಕಲಾ ಪ್ರಕಟಿಸಿದ್ದರು. ನಾನು ಸಕ್ರಿಯ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ ಎಂದು ಮಾರ್ಚ್​ 3ರಂದು ಘೋಷಿಸಿದ್ದರು. ಹಾಗೇ, ಎಐಎಡಿಎಂಕೆ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಿ, ಅಮ್ಮನ ಪಕ್ಷದ ಶತ್ರುವನ್ನು ಬಗ್ಗುಬಡಿಯಬೇಕು ಎಂದು ಹೇಳಿದ್ದರು. ಅದರಂತೆ, ತಮಿಳುನಾಡು ವಿಧಾನಸಭಾ ಕ್ಷೇತ್ರದ ಚುನಾವಣೆಯ ಹೊತ್ತಲ್ಲೂ ಶಶಿಕಲಾ ದೂರವೇ ಇದ್ದರು. ಆದರೆ ಇದೀಗ ವೈರಲ್ ಆಗುತ್ತಿರುವ ಆಡಿಯೋ ಶಶಿಕಲಾ ರಾಜಕೀಯಕ್ಕೆ ಮತ್ತೆ ಬರುತ್ತಾರೆ ಎಂಬುದನ್ನು ಸ್ಪಷ್ಟಪಡಿಸುತ್ತಿದೆ.

ಇದನ್ನೂ ಓದಿ: ಹಾಸನ: ಆಸ್ತಿ ವಿಚಾರಕ್ಕೆ ಬಡಿದಾಡಿಕೊಂಡು ನಾಲ್ವರ ಕೊಲೆ ಪ್ರಕರಣ; ಗಲಾಟೆ ವಿಡಿಯೋ ವೈರಲ್

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ