AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಬಂದೇ ಬರುತ್ತೇನೆ, ಧೈರ್ಯವಾಗಿರಿ..’: ಮತ್ತೆ ರಾಜಕೀಯಕ್ಕೆ ಬರಲಿದ್ದಾರೆ ಅಮ್ಮನ ಆಪ್ತೆ ವಿ.ಕೆ.ಶಶಿಕಲಾ, ವೈರಲ್​ ಆಯ್ತು ಆಡಿಯೋ

ಫೆ.8ರಂದು ಶಶಿಕಲಾ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ಅವರ ಬಿಡುಗಡೆ ಖಂಡಿತ ತಮಿಳುನಾಡಿನ ರಾಜಕೀಯದಲ್ಲಿ ಬಹುದೊಡ್ಡ ಬದಲಾವಣೆ ತರುತ್ತದೆ ಎಂದು ರಾಜಕೀಯ ವಿಶ್ಲೇಷರು ಅಭಿಪ್ರಾಯಪಟ್ಟಿದ್ದರು.

‘ನಾನು ಬಂದೇ ಬರುತ್ತೇನೆ, ಧೈರ್ಯವಾಗಿರಿ..’: ಮತ್ತೆ ರಾಜಕೀಯಕ್ಕೆ ಬರಲಿದ್ದಾರೆ ಅಮ್ಮನ ಆಪ್ತೆ ವಿ.ಕೆ.ಶಶಿಕಲಾ, ವೈರಲ್​ ಆಯ್ತು ಆಡಿಯೋ
ವಿ.ಕೆ.ಶಶಿಕಲಾ
Lakshmi Hegde
|

Updated on: May 30, 2021 | 10:53 AM

Share

ಚೆನ್ನೈ: ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿ ಚೆನ್ನೈಗೆ ಮರಳುತ್ತಿದ್ದಂತೆ ರಾಜಕೀಯದಿಂದ ದೂರ ಸರಿಯುವ ಘೋಷಣೆ ಮಾಡಿದ್ದ ಎಐಎಡಿಎಂಕೆ ಉಚ್ಚಾಟಿತ ಪ್ರಧಾನ ಕಾರ್ಯದರ್ಶಿ, ಮಾಜಿ ಸಿಎಂ ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ ಈಗ ಮರಳಿ ರಾಜಕಾರಣಕ್ಕೆ ಬರಲಿದ್ದಾರಾ? ಹೀಗೊಂದು ಅನುಮಾನ ಹುಟ್ಟಲು ಕಾರಣವಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಆಡಿಯೋ.

ಎಐಎಡಿಎಂಕೆ ಪಕ್ಷದ ಕಾರ್ಯಕರ್ತರೊಬ್ಬರೊಂದಿಗೆ ಶಶಿಕಲಾ ಫೋನ್​​ನಲ್ಲಿ ಮಾತನಾಡಿದ ಆಡಿಯೋ ಕ್ಲಿಪ್​ ಇದು ಎನ್ನಲಾಗುತ್ತಿದೆ. ಒಂದು ಸಲ ಕೊರೊನಾ ಸೋಂಕಿನ ಬಿಕ್ಕಟ್ಟಿನ ಪರಿಸ್ಥಿತಿ ಸುಧಾರಿಸಿದ ನಂತರ ನಾನು ಖಂಡಿತ ರಾಜಕೀಯಕ್ಕೆ ಇಳಿಯುತ್ತೇನೆ. ಎಐಎಡಿಎಂಕೆಯಲ್ಲಿರುವ ಸಮಸ್ಯೆಗಳನ್ನು ನಿವಾರಿಸುತ್ತೇನೆ ಎಂದು ಆ ಕಾರ್ಯಕರ್ತನಿಗೆ ಭರವಸೆ ನೀಡಿದ್ದು ಈ ಧ್ವನಿ ತುಣುಕಿನಲ್ಲಿ ಕೇಳುತ್ತದೆ. ಯೋಚಿಸಬೇಡಿ..ನಾನು ರಾಜಕೀಯಕ್ಕೆ ಹಿಂತಿರುಗುತ್ತೇನೆ. ಎಲ್ಲರೂ ಧೈರ್ಯವಾಗಿರಿ ಎಂದು ಹೇಳಿದ್ದಾರೆ.

ಫೆ.8ರಂದು ಶಶಿಕಲಾ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ಅವರ ಬಿಡುಗಡೆ ಖಂಡಿತ ತಮಿಳುನಾಡಿನ ರಾಜಕೀಯದಲ್ಲಿ ಬಹುದೊಡ್ಡ ಬದಲಾವಣೆ ತರುತ್ತದೆ ಎಂದು ರಾಜಕೀಯ ವಿಶ್ಲೇಷರು ಅಭಿಪ್ರಾಯಪಟ್ಟಿದ್ದರು. ಆದರೆ ಎಲ್ಲರ ನಿರೀಕ್ಷೆಗೂ ತಣ್ಣೀರು ಎರಚುವಂತೆ ಒಂದು ವಿಭಿನ್ನ ನಿರ್ಧಾರವನ್ನು ಶಶಿಕಲಾ ಪ್ರಕಟಿಸಿದ್ದರು. ನಾನು ಸಕ್ರಿಯ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ ಎಂದು ಮಾರ್ಚ್​ 3ರಂದು ಘೋಷಿಸಿದ್ದರು. ಹಾಗೇ, ಎಐಎಡಿಎಂಕೆ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಿ, ಅಮ್ಮನ ಪಕ್ಷದ ಶತ್ರುವನ್ನು ಬಗ್ಗುಬಡಿಯಬೇಕು ಎಂದು ಹೇಳಿದ್ದರು. ಅದರಂತೆ, ತಮಿಳುನಾಡು ವಿಧಾನಸಭಾ ಕ್ಷೇತ್ರದ ಚುನಾವಣೆಯ ಹೊತ್ತಲ್ಲೂ ಶಶಿಕಲಾ ದೂರವೇ ಇದ್ದರು. ಆದರೆ ಇದೀಗ ವೈರಲ್ ಆಗುತ್ತಿರುವ ಆಡಿಯೋ ಶಶಿಕಲಾ ರಾಜಕೀಯಕ್ಕೆ ಮತ್ತೆ ಬರುತ್ತಾರೆ ಎಂಬುದನ್ನು ಸ್ಪಷ್ಟಪಡಿಸುತ್ತಿದೆ.

ಇದನ್ನೂ ಓದಿ: ಹಾಸನ: ಆಸ್ತಿ ವಿಚಾರಕ್ಕೆ ಬಡಿದಾಡಿಕೊಂಡು ನಾಲ್ವರ ಕೊಲೆ ಪ್ರಕರಣ; ಗಲಾಟೆ ವಿಡಿಯೋ ವೈರಲ್

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು